Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 500 ರೂ. ನೋಟಿಗಾಗಿ ಮಗುವಿಗೆ ಚಿಕಿತ್ಸೆ...

500 ರೂ. ನೋಟಿಗಾಗಿ ಮಗುವಿಗೆ ಚಿಕಿತ್ಸೆ ನೀಡದ ಆರೋಪ: ಡಾ. ಶೀತಲ್ ಕಾಮತ್ ಪ್ರಕಾರ ನಿಜವಾಗಿ ಅಂದು ನಡೆದದ್ದೇನು ?

ವಾರ್ತಾಭಾರತಿವಾರ್ತಾಭಾರತಿ14 Nov 2016 1:15 PM IST
share
500 ರೂ. ನೋಟಿಗಾಗಿ ಮಗುವಿಗೆ ಚಿಕಿತ್ಸೆ ನೀಡದ ಆರೋಪ:  ಡಾ. ಶೀತಲ್ ಕಾಮತ್ ಪ್ರಕಾರ ನಿಜವಾಗಿ ಅಂದು ನಡೆದದ್ದೇನು ?

ಮುಂಬೈ,  ನ.14: ನವಜಾತ ಶಿಶುವೊಂದರ ಹೆತ್ತವರ ಬಳಿ ರದ್ದುಗೊಂಡಿರುವ 500 ರೂ. ನೋಟುಗಳಿರುವುದೆಂದು ತಿಳಿದು ಮಗುವಿಗೆ ಚಿಕಿತ್ಸೆ ನೀಡಲು ನಿರಾಕರಿಸಿ ಅದರ ಸಾವಿಗೆ ಕಾರಣರಾಗಿದ್ದಾರೆಂದು ಆರೋಪಿಸಿ ಇಲ್ಲಿನ ಗೋವಂಡಿಯಲ್ಲಿರುವ ಜೀವನ್ ಜ್ಯೋತ್ ಹಾಸ್ಪಿಟಲ್ ಎಂಡ್ ನರ್ಸಿಂಗ್ ಹೋಮ್ ವೈದ್ಯೆ ಡಾ. ಶೀತಲ್ ಕಾಮತ್ ಅವರ ವಿರುದ್ಧ ಮಗುವಿನ ತಂದೆ ಜಗದೀಶ್ ಶರ್ಮ ಪೊಲೀಸ್ ದೂರು ದಾಖಲಿಸಿದ್ದ ಹಿನ್ನೆಲೆಯಲ್ಲಿ ವೈದ್ಯೆಯ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಆಸ್ಪತ್ರೆಗೆ ಮಗುವನ್ನು ದಾಖಲಿಸುವ ಮುನ್ನ ಹೆತ್ತವರು ನೀಡಬೇಕಾದ ಶುಲ್ಕವನ್ನು ಅವರು ಐನೂರು ರೂಪಾಯಿ ನೋಟುಗಳಲ್ಲಿ ಪಾವತಿಸಲು ಮುಂದಾದಾಗ ಅದನ್ನು ಆಸ್ಪತ್ರೆಯವರು ನಿರಾಕರಿಸಿದ್ದು, ಮರುದಿನ ಮಗು ಸಾವನ್ನಪ್ಪಿತ್ತು ಎಂದು ದೂರಲಾಗಿತ್ತು.
ಮೂಲಗಳಿಂದ ತಿಳಿದು ಬಂದಂತೆ ಮಗುವನ್ನು ಕಿರಣ್ ಎಂಬವರು ತಮ್ಮ ಮನೆಯಲ್ಲಿಯೇ ಸಂಬಂಧಿಗಳು ಹಾಗೂ ನೆರೆಹೊರೆಯವರ ಸಹಾಯದಿಂದ ಹೆತ್ತಿದ್ದರು. ಅದೊಂದು ಅವಧಿಪೂರ್ವ ಪ್ರಸವವಾಗಿತ್ತಲ್ಲದೆ ಮಗುವಿನ ತೂಕ ಕೂಡ ಬಹಳಷ್ಟು ಕಡಿಮೆ 1.6 ಕೆ.ಜಿ.ಯಿತ್ತೆನ್ನಲಾಗಿದ್ದು, ಪ್ರಸವ ಸಂದರ್ಭ ಕಿರಣ್ ಸಾಕಷ್ಟು ರಕ್ತ ಕೂಡ ಕಳೆದುಕೊಂಡಿದ್ದರು.
ಮುಂಬೈ ಮಿರರ್ ಪತ್ರಕರ್ತೆಯೊಬ್ಬರಿಗೆ ಡಾ ಶೀತಲ್ ಕಾಮತ್ ನೀಡಿದ ಸ್ಪಷ್ಟೀಕರಣ ಹೀಗಿತ್ತು. ‘‘ರೋಗಿ ಮನೆಯಲ್ಲೇ ಶೌಚಾಲಯದಲ್ಲಿ ನವೆಂಬರ್ 9 ರಂದು ಪ್ರಸವಿಸಿದ್ದು, ಮಗುವಿನ ತೂಕ 1.5 ಕೆ.ಜಿ.ಯಷ್ಟಾಗಿತ್ತು. ನನ್ನ ಆಸ್ಪತ್ರೆಯಲ್ಲಿ ನವಜಾತ ಶಿಶುಗಳ ತೀವ್ರ ನಿಗಾ ಘಟಕ (ನಿಯೋ ನೇಟಲ್ ಇಂಟೆನ್ಸಿವ್ ಕೇರ್ ಯುನಿಟ್) ಇಲ್ಲದ ಕಾರಣ ನಾನು ಪತ್ರವೊಂದನ್ನು ನೀಡಿ ತಾಯಿ ಮಗುವನ್ನು ಸಯಾನ್ ಆಸ್ಪತ್ರೆಗೆ ಸೇರಿಸುವಂತೆ ಹೇಳಿದ್ದೆ. ಆದರೆ ಪ್ರಾಯಶಃ ಅವರು ಮಗುವನ್ನು ಮನೆಗೆ ಕರೆದುಕೊಂಡು ಹೋಗಿ ಅದರ ಸ್ಥಿತಿ ವಿಷಮಿಸುವ ತನಕ ಕಾದಿದ್ದರು. ಎಲ್ಲಾ ಮುಗಿದು ಹೋದ ಮೇಲೆ ಪೊಲೀಸರು ಹಾಗೂ ಮಾಧ್ಯಮವನ್ನು ಸಂಪರ್ಕಿಸಲಾಗಿತ್ತು. ರೋಗಿಯೊಬ್ಬರಿಗೆ ಚಿಕಿತ್ಸೆ ನೀಡದೆ ಹೊರ ಕಳುಹಿಸುವವಳಲ್ಲ ನಾನು’’ ಎಂದು ವೈದ್ಯೆ ನೀಡಿದ ಹೇಳಿಕೆಯನ್ನು ನಂದಿತಾ ಐಯ್ಯರ್ ಎಂಬವರು ಟ್ವೀಟ್ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X