ತಾಳಿತ್ತಬೆಟ್ಟು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ
![ತಾಳಿತ್ತಬೆಟ್ಟು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ತಾಳಿತ್ತಬೆಟ್ಟು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ](https://www.varthabharati.in/sites/default/files/images/articles/2016/11/14/14mdp2.jpg)
ಕೊಣಾಜೆ, ನ.14: ಇರಾ ಗ್ರಾಮ ಪಂಚಾಯತ್ ವ್ಯಾಪ್ತಿಯ ತಾಳಿತ್ತಬೆಟ್ಟು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮವು ಸೋಮವಾರ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಇರಾ ಗ್ರಾಮ ಪಂಚಾಯತ್ ಅಧ್ಯಕ್ಷ ಅಬ್ದುರ್ರಝಾಕ್ ಕುಕ್ಕಾಜೆ, ಮಕ್ಕಳಲ್ಲಿ ಕೌಶಲ್ಯ ಅಭಿವೃದ್ಧಿ, ಸೃಜನಾತ್ಮಕ ಬೆಳವಣಿಗೆಯಲ್ಲಿ ಪೋಷಕರ ಪಾತ್ರ ಮಹತ್ತರವಾದುದು. ಜೊತೆಗೆ ಶಾಲಾ ಶಿಕ್ಷಕರು ಕೂಡಾ ಪ್ರಮುಖವಾಗುತ್ತಾರೆ ಎಂದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಇರಾ ತಾಳಿತ್ತಬೆಟ್ಟು ಶಾಲಾಭಿವೃದ್ಧಿ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಮುರಳೀಧರ ಭಂಡಾರಿ, ಶಾಲಾ ಮುಖ್ಯ ಶಿಕ್ಷಕಿ ಸುಜಾತಾ ಟಿ.ಎಸ್., ಗ್ರಾಮ ಪಂಚಾಯತ್ ಉಪಾಧ್ಯಕ್ಷ ಚಂದ್ರಾವತಿ, ಸ್ಥಳೀಯರಾದ ವಾಮನ ಪೂಜಾರಿ, ಅದ್ರಾಮ, ಹಬೀಬುರ್ರಹ್ಮಾನ್ ಮುಂತಾದವರು ಉಪಸ್ಥಿತರಿದ್ದರು.
ಮಕ್ಕಳ ದಿನಾಚರಣೆ ಅಂಗವಾಗಿ ಪುಟಾಣಿ ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಅಂಗನವಾಡಿ ಕಾರ್ಯಕರ್ತೆ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಸತ್ಯಲತಾ ವಂದಿಸಿದರು.
Next Story