Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಗ್ರೀನ್‌ವ್ಯೂ ಮಕ್ಕಳ ಹಬ್ಬದಲ್ಲಿ ದಿನ...

ಗ್ರೀನ್‌ವ್ಯೂ ಮಕ್ಕಳ ಹಬ್ಬದಲ್ಲಿ ದಿನ ಪೂರ್ತಿ ಸಂಭ್ರಮ

ಸುಳ್ಯದಲ್ಲಿ ಅರ್ಥಪೂರ್ಣ ಮಕ್ಕಳ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ14 Nov 2016 5:29 PM IST
share
ಗ್ರೀನ್‌ವ್ಯೂ ಮಕ್ಕಳ ಹಬ್ಬದಲ್ಲಿ ದಿನ ಪೂರ್ತಿ ಸಂಭ್ರಮ

ಸುಳ್ಯ, ನ.14: ಸುಳ್ಯದಲ್ಲಿ ಈ ಬಾರಿಯ ಮಕ್ಕಳ ದಿನಾಚರಣೆಯು ಮಕ್ಕಳೇ ಸಂಭ್ರಮಿಸುವ ಮೂಲಕ ಅರ್ಥಪೂರ್ಣವಾಗಿ ಅಚರಣೆಗೊಂಡಿತು. ಸುಳ್ಯದ ಗ್ರೀನ್‌ವ್ಯೆ ಶಿಕ್ಷಣ ಸಂಸ್ಥೆಯಲ್ಲಿ ಮೋಡೆಲ್ ಎಜ್ಯುಕೇಶನ್ ಟ್ರಸ್ಟ್ ಸುಳ್ಯ, ಸ್ವಾಗತ ಸಮಿತಿ ಗ್ರೀನ್ ವ್ಯೆ ಮಕ್ಕಳ ಹಬ್ಬದ ಆಶ್ರಯದಲ್ಲಿ ನಡೆದ ಗ್ರೀನ್ ವ್ಯೆ ಮಕ್ಕಳ ಹಬ್ಬದಲ್ಲಿ ದಿನಪೂರ್ತಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಮಕ್ಕಳು ಖುಷಿಪಟ್ಟರು.

ಮಕ್ಕಳ ದಿನಾಚರಣೆಯ ಅಂಗವಾಗಿ ನಡೆದ ಮಕ್ಕಳ ಹಬ್ಬವನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಉದ್ಘಾಟಿಸಿ ಮಾತನಾಡಿ, ಮಕ್ಕಳ ಬೌದ್ಧಿಕ ವಿಕಸನವಾಗಬೇಕಾದರೆ ಅವರಿಗೆ ಖುಷಿ ಪಡುವ ಸಂಗತಿಗಳನ್ನು ಹೆಚ್ಚು ನೀಡಬೇಕು. ಆ ಕಾರ್ಯ ಮಕ್ಕಳ ಹಬ್ಬದ ಮೂಲಕ ಆಗುತ್ತಿದೆ ಎಂದರು. ನ.ಪಂ ಅಧ್ಯಕ್ಷೆ ಶೀಲಾವತಿ ಮಾಧವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ನ.ಪಂ. ಮಾಜಿ ಅಧ್ಯಕ್ಷ ಎಂ.ವೆಂಕಪ್ಪಗೌಡ, ಎಸ್.ಸಂಶುದ್ಧೀನ್, ಎನ್.ಎ.ರಾಮಚಂದ್ರ, ನ.ಪಂ. ಸದಸ್ಯರಾದ ಕೆ.ಎಸ್.ಉಮ್ಮರ್, ಕೆ.ಗೋಕುಲ್‌ದಾಸ್, ವಲಯ ಅರಣ್ಯಾಧಿಕಾರಿ ಪ್ರಶಾಂತ್ ಪೈ, ಎಪಿಎಂಸಿ ಸದಸ್ಯ ಆದಂ ಹಾಜಿ ಕಮ್ಮಾಡಿ, ದ.ಕ. ಜಿಲ್ಲಾ ಜೇನು ಸೊಸೈಟಿ ಅಧ್ಯಕ್ಷ ಚಂದ್ರಾ ಕೋಲ್ಚಾರ್, ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಐ.ಇಸ್ಮಾಯಿಲ್, ಅಬ್ಬಾಸ್ ಹಾಜಿ ಕಟ್ಟೆಕಾರ್, ಕೆ.ಎಂ.ಹಮೀದ್, ಆರ್.ಕೆ ಮಹಮ್ಮದ್, ಅಬ್ದುಲ್ ಮಜೀದ್ , ಶಾಲಾ ಮುಖ್ಯೋಪಾಧ್ಯಾಯ ಅಮರನಾಥ ಮೊದಲಾದವರು ಉಪಸ್ಥಿತರಿದ್ದರು.

ಶಾಲಾ ಸಂಚಾಲಕ ಬಿ.ಎಸ್.ಶರೀಫ್ ಸ್ವಾಗತಿಸಿದರು. ಕಾರ್ಯಕ್ರಮದ ರೂವಾರಿ, ಸ್ವಾಗತ ಸಮಿತಿ ಅಧ್ಯಕ್ಷ ಕೆ.ಎಂ.ಮುಸ್ತಫಾ ಪ್ರಸ್ತಾವನೆಗೈದರು. ಶಿಕ್ಷಕಿ ಅಶ್ವಿನಿ ಕಾರ್ಯಕ್ರಮ ನಿರೂಪಿಸಿದರು.

ಮಕ್ಕಳ ಹಬ್ಬದ ಅಂಗವಾಗಿ ವಿವಿಧ ಕ್ರೀಡೆ, ಕಲೆ, ಸಾಂಸ್ಕೃತಿಕ ಪ್ರದರ್ಶನಗಳು ನಡೆದವು. ವಿವಿಧ ಅಕಾಡೆಮಿಗಳ ಪ್ರಾಯೋಜಕತ್ವದಲ್ಲಿ ಕಲೆ, ಸಾಹಿತ್ಯ, ಸಾಂಸ್ಕೃತಿಕ ಮತ್ತು ಜಾನಪದ ಪ್ರದರ್ಶನ ನಡೆಯಿತು. ವಿಜ್ಞಾನ, ತಂತ್ರಜ್ಞಾನದ ಪ್ರೊಜೆಕ್ಟ್‌ಗಳು, ಏರ್‌ಶೋ ಸೇರಿದಂತೆ 24 ಪ್ರಕಾರಗಳ ಪ್ರದರ್ಶನ ನಡೆಯಿತು. ಬೃಹತ್ ಪ್ರಾಚ್ಯವಸ್ತುಗಳ ಸಂಗ್ರಹಾಲಯ ಮಕ್ಕಳಿಗೆ ಖುಷಿ ನೀಡಿತು. ಜಗತ್ತಿನ ಏಳು ಅದ್ಭುತಗಳ ಮತ್ತು ಭಾರತದ ಐತಿಹಾಸಿಕ ಸ್ಥಳಗಳ ಮೋಡೆಲ್‌ಗಳನ್ನು ರಚಿಸಿ ಅದರ ಮುಂಭಾಗದಲ್ಲಿ ನಿಂತು ಮಕ್ಕಳಿಗೆ ಫೋಟೊ ತೆಗೆಯುವ ಅವಕಾಶ ನೀಡಲಾಗಿತ್ತು. ವಿದ್ಯಾರ್ಥಿಗಳ ದಂತ ತಪಾಸಣೆ ಮತ್ತು ಉಚಿತ ಡೆಂಟಲ್ ಕಿಟ್ ವಿತರಣೆ ನಡೆಯಿತು. ಉಚಿತ ಆರೋಗ್ಯ ತಪಾಸಣೆ, ಆರೋಗ್ಯ ಜಾಗೃತಿ ಮಾಹಿತಿ ಕಾರ್ಯಕ್ರಮ ಕೂಡಾ ನಡೆಯಿತು. ಮಕ್ಕಳ ಹಬ್ಬದ ನಡುವೆ ಪ್ರತಿಭಾವಂತ ಮಕ್ಕಳಿಗೆ ಸನ್ಮಾನ, ಪ್ರತಿಬಾ ಪುರಸ್ಕಾರ, ಪ್ರತಿಭೆಗಳ ಪ್ರದರ್ಶನ ನಡೆಯಿತು.

ಮಕ್ಕಳ ದಿನ ಜನಿಸಿದವರ ಹುಟ್ಟುಹಬ್ಬದ ಸಾಮೂಹಿಕ ಆಚರಣೆ, ಅವಳಿ-ಜವಳಿ ಸ್ಪರ್ಧೆ ರಂಗು ತಂದಿತು. ಅಂತಾರಾಷ್ಟ್ರೀಯ ಖ್ಯಾತಿಯ ಬೆಂಗಳೂರಿನ ಪ್ರಹ್ಲಾದ್ ಆಚಾರ್ಯರಿಂದ ಮಾತನಾಡುವ ಗೊಂಬೆ, ಅದ್ಭುತ ಮನರಂಜನೆಯ ಶಾಡೋ ಪ್ಲೇ, ಶ್ರೀಧರ್ ಜಾದೂಗಾರ್ ವಿಸ್ಮಯ ಜಗತ್ತು, ಜಾನಪದ ಕ್ರೀಡೆಗಳಾದ ಲಗೋರಿ, ಬೆರ್ಚೆಂಡ್, ನೊಂಡಿ, ಜುಬಿಲಿ ಮೊದಲಾದ ಸ್ಪರ್ಧೆಗಳು, ಮಕ್ಕಳ ವಿನೋದಕ್ಕೆ ಮಿನಿ ಅಮ್ಯೂಸ್‌ಮೆಂಟ್ ಪಾರ್ಕ್, ಜಾನಪದ ಕ್ರೀಡೋತ್ಸವ, ಆಹಾರಮೇಳ ಹೀಗೆ ವೈವಿಧ್ಯಮ ಕಾರ್ಯಕ್ರಮಗಳು ಮಕ್ಕಳ ಹಬ್ಬದಲ್ಲಿತ್ತು. ಎರಡು ಕುದುರೆಗಳನ್ನು ವಿದ್ಯಾರ್ಥಿಗಳ ಸವಾರಿಗಾಗಿ ತರಲಾಗಿತ್ತು. ಸುಳ್ಯ ತಾಲೂಕಿನ ವಿವಿಧ ಶಾಲೆಗಳ ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಮಕ್ಕಳ ಹಬ್ಬದಲ್ಲಿ ಬಾಗವಹಿಸಿ ಸಂಭ್ರಮಿಸಿದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X