Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಡವರು ಸುಖವಾಗಿ ನಿದ್ರೆ...

ಬಡವರು ಸುಖವಾಗಿ ನಿದ್ರೆ ಮಾಡುತ್ತಿದ್ದಾರೆ, ಭ್ರಷ್ಟರು ಹತಾಶರಾಗಿದ್ದಾರೆ: ಪ್ರಧಾನಿ ಮೋದಿ

ವಾರ್ತಾಭಾರತಿವಾರ್ತಾಭಾರತಿ14 Nov 2016 8:15 PM IST
share
ಬಡವರು ಸುಖವಾಗಿ ನಿದ್ರೆ ಮಾಡುತ್ತಿದ್ದಾರೆ, ಭ್ರಷ್ಟರು ಹತಾಶರಾಗಿದ್ದಾರೆ: ಪ್ರಧಾನಿ ಮೋದಿ

ಘಾಜಿಪುರ(ಉ.ಪ್ರ),ನ.14: ನೋಟು ನಿಷೇಧ ಕ್ರಮವನ್ನು ವಿರೋಧಿಸುತ್ತಿರುವ ಕಾಂಗ್ರೆಸ್ ಮತ್ತು ಇತರ ಪಕ್ಷಗಳನ್ನು ಇಂದಿಲ್ಲಿ ತೀವ್ರ ತರಾಟೆಗೆತ್ತಿಕೊಂಡ ಪ್ರಧಾನಿ ನರೇಂದ್ರ ಮೋದಿ ಅವರು, ತನ್ನ ಈ ನಿರ್ಧಾರದ ಬಳಿಕ ಭ್ರಷ್ಟರು ಹತಾಶರಾಗಿ ನಿದ್ರೆ ಬಾರದೆ ಮಾತ್ರೆಗಳಿಗಾಗಿ ಎಡತಾಕುತ್ತಿದ್ದರೆ ಬಡವರು ಸುಖನಿದ್ರೆಯನ್ನು ಅನುಭವಿಸು ತ್ತಿದ್ದಾರೆ ಎಂದು ಹೇಳಿದರು. ಭ್ರಷ್ಟಾಚಾರವನ್ನು ಬೇರು ಸಹಿತ ಕಿತ್ತೊಗೆಯಲು ಸ್ವಲ್ಪ ಅನಾನುಕೂಲವನ್ನು ಸಹಿಸಿಕೊಳ್ಳುವಂತೆ ಇದೇ ವೇಳೆ ಅವರು ಜನತೆಯನ್ನು ಆಗ್ರಹಿಸಿ ದರು.
ಬಿಜೆಪಿಯ ಪರಿವರ್ತನ್ ರ್ಯಾಲಿಯಲ್ಲಿ ಮಾತನಾಡುತ್ತಿದ್ದ ಅವರು, ನೋಟು ನಿಷೇಧ ಕ್ರಮದ ಬಳಿಕ ಜನರು ಅನುಭವಿಸುತ್ತಿರುವ ಅನಾನುಕೂಲತೆಗಳನ್ನು ತಾನು ಅರ್ಥ ಮಾಡಿಕೊಂಡಿದ್ದೇನೆ ಎಂದರು. ತನ್ನ ಕ್ರಮವನ್ನು ಅವರು ಘಾಟು ವಾಸನೆಯನ್ನು ಬೀರುವ, ಆದರೂ ಅಗತ್ಯವಾಗಿರುವ ಹೊಸದಾಗಿ ಸುಣ್ಣ ಬಳಿಯುವ ಕ್ರಮಕ್ಕೆ ಹೋಲಿಸಿದರು.
‘‘ ನನ್ನ ನಿರ್ಧಾರ ನಾನು ಚಾಯ್‌ವಾಲಾ ಆಗಿ ಮಾರುತ್ತಿದ್ದ ಚಹಾದಂತೆ ‘ಖಡಕ್’ ಆಗಿದೆ. ನಾನು ಯುವಕನಾಗಿದ್ದಾಗ ಬಡವರು ನನ್ನ ಬಳಿ ಖಡಕ್ ಚಹಾ ಕೇಳುತ್ತಿದ್ದರು, ಆದರೆ ಅದು ಶ್ರೀಮಂತರ ಮೂಡ್ ಅನ್ನು ಹಾಳುಮಾಡುತ್ತದೆ ’’ಎಂದರು.
ತನ್ನ ವಿರುದ್ಧ ಸಾಮಾನ್ಯ ಜನರಿಗೆ ಕಿರುಕುಳ ನೀಡುತ್ತಿರುವ ಆರೋಪವನ್ನು ಹೊರಿಸಿರುವ ಕಾಂಗ್ರೆಸ್ ವಿರುದ್ಧ ತೀವ್ರ ಟೀಕಾಪ್ರಹಾರ ನಡೆಸಿದ ಅವರು, ಕಾಂಗ್ರೆಸ್ ಸರಕಾರಗಳು ತುರ್ತು ಸ್ಥಿತಿಯನ್ನು ಹೇರಿದ್ದು,ಜನರು ಮತ್ತು ಮಾಧ್ಯಮಗಳ ಹಕ್ಕುಗಳನ್ನು ನಿರ್ಬಂಧಿಸಿದ್ದು ಮತ್ತು ನಾಲ್ಕಾಣೆ ನಾಣ್ಯವನ್ನು ನಿಷೇಧಿಸಿದ್ದನ್ನು ನೆನಪಿಸಿದರು.
ಯಾವ ಕಾನೂನಿನಡಿ ಅವರು ನಾಲ್ಕಾಣೆಯನ್ನು ನಿಷೇಧಿಸಿದ್ದರು? ಅವರಿಗೆ ನಾಲ್ಕಾಣೆಗಿಂತ ಮುಂದೆ ಹೋಗಲು ಸಾಧ್ಯವಿರಲಿಲ್ಲ ಎನ್ನುವುದು ಬೇರೆಯ ಮಾತು. ನೀವು ನಿಮ್ಮ ಅಂತಸ್ತಿಗೆ ತಕ್ಕಂತೆ ಕ್ರಮ ಕೈಗೊಂಡಿದ್ದೀರಿ ಮತ್ತು ನಾವು ನಮ್ಮ ಅಂತಸ್ತಿಗೆ ತಕ್ಕಂತೆ ಕ್ರಮವನ್ನು ಕೈಗೊಂಡಿದ್ದೇವೆ ಎಂದು ಅವರು ಪ್ರತಿಪಕ್ಷವನ್ನು ತಿವಿದರು.
ಜವಾಹರಲಾಲ್ ನೆಹರೂ ಅವರನ್ನು ಪ್ರಸ್ತಾಪಿಸಿದ ಅವರು,ನೂತನ ಯೋಜನೆಗಳಿಗೆ ಚಾಲನೆ ನೀಡಲು ಇಲ್ಲಿಗೆ ಭೇಟಿಗಾಗಿ ತಾನು ಉದ್ದೇಶಪೂರ್ವಕವಾಗಿ ಅವರ ಜನ್ಮದಿನವನ್ನು ಆಯ್ಕೆ ಮಾಡಿದ್ದೆ ಎಂದರು.
‘‘ನೀವು(ನೆಹರು)ಈಗ ಬದುಕಿಲ್ಲ. ನಿಮ್ಮ ಪಕ್ಷದ ನಾಯಕರು ಮತ್ತು ನಿಮ್ಮ ಕುಟುಂಬ ಸದಸ್ಯರು ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಆದರೂ ಈ ದೇಶದ ಜನರ ಏಳಿಗೆಯ ನಿಮ್ಮ ಈಡೇರದ ಕನಸುಗಳನ್ನು ನನಸಾಗಿಸಲು ನಿಮ್ಮ ಜನ್ಮದಿನದಂದು ನಾನು ಹೊಸ ಕಾಮಗಾರಿಗಳಿಗೆ ಚಾಲನೆ ನೀಡುತ್ತಿದ್ದೇನೆ’’ಎಂದರು.
ಪ್ರತಿಕ್ಷ ನಾಯಕರು ಜನತೆಯನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿದ ಅವರು, ಈ ದೇಶದಲ್ಲಿ ಭ್ರಷ್ಟಾಚಾರ ಮತ್ತು ಅಪ್ರಾಮಾಣಿಕತೆಗೆ ಅವಕಾಶ ನೀಡಬೇಕೇ ಎಂದು ಪ್ರಶ್ನಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X