Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸೋನಿಯಾ ಕುಟುಂಬದ ವಿರುದ್ಧ ಪ್ರಧಾನಿ...

ಸೋನಿಯಾ ಕುಟುಂಬದ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

ವಾರ್ತಾಭಾರತಿವಾರ್ತಾಭಾರತಿ14 Nov 2016 8:24 PM IST
share
ಸೋನಿಯಾ ಕುಟುಂಬದ  ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

ಲಕ್ಕೊ, ನ.14: ‘ಪಂಡಿತ್ ನೆಹರೂರವರೇಕ ನಿಮ್ಮ ಕುಟುಂಬ ಹಾಗೂ ಪಕ್ಷ ನನ್ನನ್ನು ದೂಷಿಸುತ್ತಿವೆ. ಆದರೆ, ನಿಮ್ಮ ಹುಟ್ಟು ಹಬ್ಬವಾಗಿರುವ ನ.14ರಂದು ನಾನು, ನಿಮ್ಮ ಕಾಲದಿಂದಲೂ ಬಾಕಿಯುಳಿಸಿರುವ ಕೆಲಸವನ್ನು ಪೂರೈಸುವುದಕ್ಕಾಗಿ ನಾನಿಲ್ಲಿದ್ದೇನೆ’ ಎಂದು ದೇಶದ ಪ್ರಥಮ ಪ್ರಧಾನಿಯನ್ನು ಉಲ್ಲೇಖಿಸುವ ಮೂಲಕ ಕಾಂಗ್ರೆಸ್ ಹಾಗೂ ಅದರ ಪ್ರಥಮ ಕುಟುಂಬಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಟಿ ಬೀಸಿದ್ದಾರೆ.

ನಿನ್ನೆ ಗೋವಾದಲ್ಲಿ ಮಾಡಿದ್ದ ಭಾವನಾತ್ಮಕ ಭಾಷಣವನ್ನು ಇಂದು ಉತ್ತರಪ್ರದೇಶದಲ್ಲಿ ಮುಂದುವರಿಸಿದ ಅವರು, ದೊಡ್ಡ ನೋಟು ರದ್ದತಿಯ ಸರಕಾರದ ನಿರ್ಧಾರವನ್ನು ಭ್ರಷ್ಟಾಚಾರದ ವಿರುದ್ಧ ಹೋರಾಟವನ್ನು ತಡೆಯುವ ಪ್ರಯತ್ನವೆಂದು ಟೀಕಿಸಿರುವ ಕಾಂಗ್ರೆಸ್ ಪಕ್ಷವನ್ನು ಹಿಗ್ಗಾಮುಗ್ಗಾ ಝಾಡಿಸಿದರು.

ಕಪ್ಪು ಹಣ ಅಥವಾ ಅಘೋಷಿತ ಸಂಪತ್ತಿನ ವಿರುದ್ಧ ಹೋರಾಟಕ್ಕಾಗಿ ತಾನು ಕೈಗೊಂಡಿರುವ ನಿರ್ಧಾರವನ್ನು ಬೆಂಬಲಿಸುವಂತೆ ಹಾಗೂ ಕೈಗಳನ್ನೆತ್ತಿ ಮೆಚ್ಚುಗೆ ಸೂಚಿಸಿ ಹರಸುವಂತೆ ಮೋದಿ ಘಾಝಿಪುರ ರ್ಯಾಲಿಯಲಲಿ ಸೇರಿದ್ದ ಜನರನ್ನು ಮತ್ತೆ ಮತ್ತೆ ವಿನಂತಿಸಿದರು. ಪ್ರತಿ ಸಲವೂ ಜನರು ಅವರೆಂದಂತೆ ಮಾಡಿದಾಗ ತನಗೆ ಕೆಲಸ ಮುಂದುವರಿಸುವಂತೆ ಬಡ ಜನರು ನೀಡಿರುವ ಆದೇಶ ಇದಾಗಿದೆ ಎಂದು ಮೋದಿ ಹೇಳಿದರು.

ಭಾರತದ ಬಡವರಿಗೆ ಸೇರಿರುವ ಹಣವನ್ನು ಲೂಟಿ ಮಾಡಲು ತಾನು ಯಾರಿಗೂ ಅವಕಾಶ ನೀಡುವುದಿಲ್ಲ. ಹೌದು! ತನ್ನ ವಿರುದ್ಧವಿರುವವರು ಬಲಿಷ್ಠರೆಂಬುದು ತನಗೆ ತಿಳಿದಿದೆ. ಆದರೆ, ತಾನವರಿಗೆ ಅಂಜುವುದಿಲ್ಲ. ತಾನು ಸತ್ಯ ಹಾಗೂ ಪ್ರಾಮಾಣಿಕತೆಯ ದಾರಿಯಿಂದ ವಿಚಲಿತನಾಗುವುದಿಲ್ಲವೆಂದು ಮೋದಿ ಘೋಷಿಸಿದರು.

ಕಾಂಗ್ರೆಸ್, ಕೇವಲ ಅಧಿಕಾರದಲ್ಲುಳಿಯುವುದಕ್ಕಾಗಿ ಇಡೀ ದೇಶವನ್ನು 19 ತಿಂಗಳುಗಳ ಕಾಲ ಕಾರಾಗೃಹವನ್ನಾಗಿ ಪರಿವರ್ತಿಸಿತೆಂದು 1970ರಲ್ಲಿ ಆಗಿನ ಪ್ರಧಾನಿ ಇಂದಿರಾಗಾಂಧಿ ತುರ್ತು ಪರಿಸ್ಥಿತಿ ಹೇರಿದ್ದುದನ್ನು ಹಲವು ಸಲ ಉಲ್ಲೇಖಿಸಿದ ಪ್ರಧಾನಿ, ಭ್ರಷ್ಟಾಚಾರದ ವಿರುದ್ಧ ಸಮರಕ್ಕೆ ತಾನು 50 ದಿನಗಳ ಅವಕಾಶ ಕೇಳುತ್ತಿದ್ದೇನೆ ಎಂದರು.

ಜನರಿಗಾಗಿರುವ ತೊಂದರೆಯಿಂದ ತನಗೆ ನೋವಾಗಿದೆ. ಅದರಿಂದ ಹೊರ ಬರಲು ಜನರಿಗೆ ಸಹಾಯ ಮಾಡುವುದಕ್ಕಾಗಿ ತಾನು ದಣಿವರಿಯದೆ ದುಡಿಯುತ್ತಿದ್ದೇನೆಂದು ಅವರು ಜನರಿಗೆ ಭರವಸೆ ನೀಡಿದರು.

ಕೆಲವೇ ದಿನಗಳಲ್ಲಿ ಅಡಚಣೆ ನಿವಾರಣೆಯಾಗಲಿದೆ. ಆದರೆ, ಅದರ ಲಾಭವು ದೀರ್ಘಾವಧಿಯದಾಗಲಿದೆಯೆಂದು ಮೋದಿ ಹೇಳಿದರು.

ಹೌದು ತನ್ನ ನಿರ್ಧಾರಗಳು ಕಡಕ್(ಕಠಿಣ) ಆಗಿರುತ್ತವೆ. ತಾನು ಸಣ್ಣವನಿದ್ದಾಗ ಬಡವರು ತನ್ನಲ್ಲಿ ಕಡಕ್ ಚಹಾ ಕೇಳುತ್ತಿದ್ದರೆಂದು ಅವರು ತಿಳಿಸಿದಾಗ, ಸಭೆಯಲ್ಲಿ ಹರ್ಷೋದ್ಗಾರದ ತೆರೆಯೆದ್ದಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X