Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೋಟು ನಿಷೇಧದಿಂದಾಗಿ ಅಸಹನೀಯ ಸ್ಥಿತಿ:...

ನೋಟು ನಿಷೇಧದಿಂದಾಗಿ ಅಸಹನೀಯ ಸ್ಥಿತಿ: ಬ್ಯಾಂಕ್ ಯೂನಿಯನ್

ವಾರ್ತಾಭಾರತಿವಾರ್ತಾಭಾರತಿ14 Nov 2016 10:26 PM IST
share
ನೋಟು ನಿಷೇಧದಿಂದಾಗಿ ಅಸಹನೀಯ ಸ್ಥಿತಿ: ಬ್ಯಾಂಕ್ ಯೂನಿಯನ್

ಹೊಸದಿಲ್ಲಿ,ನ.14: 500 ಮತ್ತು 1000 ರೂ.ನೋಟು ನಿಷೇಧ ಕುರಿತು ಇಂದು ಕೇಂದ್ರ ಸರಕಾರವನ್ನು ಟೀಕಿಸಿದ ಎರಡು ಪ್ರಮುಖ ಬ್ಯಾಂಕ್ ಯೂನಿಯನ್ ಗಳು, ಸರಕಾರದ ಈ ಕ್ರಮವು ದೇಶಾದ್ಯಂತ ಹಣಕಾಸು ಗೊಂದಲಕ್ಕೆ ಕಾರಣವಾಗಿದೆ ಎಂದು ಹೇಳಿವೆ.

 ಸೂಕ್ತ ಯೋಜನೆ ಅಥವಾ ಸಿದ್ಧತೆಯಿಲ್ಲದೆ ನೋಟು ನಿಷೇಧ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಭಾರತೀಯ ಬ್ಯಾಂಕುಗಳ ಸಂಘ(ಐಬಿಎ)ಕ್ಕೆ ಬರೆದಿರುವ ಪತ್ರದಲ್ಲಿ ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಸಂಘ(ಎಐಬಿಒಎ) ಮತ್ತು ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘ(ಎಐಬಿಇಎ) ಬೆಟ್ಟು ಮಾಡಿವೆ.

ರದ್ದುಗೊಂಡಿರುವ ನೋಟುಗಳನು ್ನಬದಲಿಸಿಕೊಳ್ಳಲು ಜನರು ಹೆಚ್ಚಿನ ಸಂಖ್ಯೆಯಲ್ಲಿ ಬ್ಯಾಂಕುಗಳಿಗೆ ಧಾವಿಸುತ್ತಿರುವುದರಿಂದ ಬ್ಯಾಂಕ್ ಶಾಖೆಗಳಲ್ಲಿ ಸಿಬ್ಬಂದಿಗಳು ಮತ್ತು ಅಧಿಕಾರಿಗಳ ಮೇಲೆ ಭಾರೀ ಕೆಲಸದ ಒತ್ತಡವಿದೆ. ಶಾಖೆಗಳಲ್ಲಿ ಗೊಂದಲದ ಸ್ಥಿತಿ ನಿರ್ಮಾಣಗೊಂಡಿದ್ದು,ಇದು ಗ್ರಾಹಕರಿಗೂ ಬ್ಯಾಂಕ್ ಸಿಬ್ಬಂದಿಗಳು ಮತ್ತು ಅಧಿಕಾರಿಗಳಿಗೂ ಅಸಹನೀಯವಾಗಿದೆ ಎಂದು ಎಐಬಿಒಎ ಪ್ರ.ಕಾರ್ಯದರ್ಶಿ ಎಸ್.ನಾಗರಾಜನ್ ಮತ್ತು ಎಐಬಿಇಎ ಪ್ರ.ಕಾರ್ಯದರ್ಶಿ ಸಿ.ಎಚ್.ವೆಂಕಟಾಚಲಂ ಅವರು ಪತ್ರದಲ್ಲಿ ತಿಳಿಸಿದ್ದಾರೆ.
ದೈನಂದಿನ ಅಗತ್ಯಗಳಿಗಾಗಿ 100 ರೂ.ನೋಟುಗಳಿಗೆ ಭಾರೀ ಬೇಡಿಕೆಯಿದೆ,ಆದರೆ ಅವುಗಳ ತೀವ್ರ ಕೊರತೆ ಎದುರಾಗಿದೆ. ಹೆಚ್ಚಿನ ಗ್ರಾಹಕರು 2,000 ರೂ.ನೋಟನ್ನು ಸ್ವೀಕರಿಸಲು ನಿರಾಕರಿಸುತ್ತಿದ್ದಾರೆ. 100 ರೂ.ನೋಟುಗಳ ಬೇಡಿಕೆ ಮತ್ತು ಪೂರೈಕೆಯ ನಡುವೆ ಅಗಾಧ ಅಂತರವಿದೆ ಎನ್ನುವುದು ಸರಕಾರ ಮತ್ತು ರಿಜರ್ವ್ ಬ್ಯಾಂಕಿಗೂ ಗೊತ್ತಿದೆ. ಉದಾಹರಣೆಗೆ 2015-16ರಲ್ಲಿ 100 ರೂ.ಮುಖಬೆಲೆಯ 535 ಕೋ.ನೋಟುಗಳಿಗೆ ಬೇಡಿಕೆ ಸಲ್ಲಿಸಲಾಗಿತ್ತಾದರೂ ಕೇವಲ 490 ಕೋ.ನೋಟುಗಳು ಪೂರೈಕೆಯಾಗಿದ್ದವು ಎಂದು ಪತ್ರವು ತಿಳಿಸಿದೆ.

 ಹಾಲಿ ಇದ್ದ 500 ರೂ.ನೋಟುಗಳನ್ನು ರದ್ದುಗೊಳಿಸಿ ಹೊಸ 500 ರೂ. ನೋಟುಗಳನ್ನು ಸಕಾಲದಲ್ಲಿ ಒದಗಿಸದ್ದಕ್ಕೆ ಕಾರಣವೇನು ಎನ್ನುವುದು ಅರ್ಥವಾಗುತ್ತಿಲ್ಲ ಎಂದೂ ಪತ್ರವು ಹೇಳಿದೆ.

 ದೇಶಾದ್ಯಂತವಿರುವ 2.20 ಲಕ್ಷ ಎಟಿಎಂಗಳ ಪೈಕಿ ಹೆಚ್ಚಿನವು ಮುಚ್ಚಲ್ಪಟ್ಟಿವೆ ಅಥವಾ ಭಾಗಶಃ ಕಾರ್ಯಾಚರಿಸುತ್ತಿವೆ. ಇದು ಬ್ಯಾಂಕ್ ಉದ್ಯೋಗಿಗಳ ಕೆಲಸದ ಒತ್ತಡವನ್ನು ಹೆಚ್ಚಿಸಿದೆ. ತಮ್ಮ ಖಾತೆಗಳಿಂದ ಹಣ ಪಡೆಯಲು ಗ್ರಾಹಕರು ಶಾಖೆಗಳಿಗೆ ಭೇಟಿ ನೀಡುವುದು ಅನಿವಾರ್ಯವಾಗಿದೆ ಎಂದಿರುವ ಯೂನಿಯನ್‌ಗಳು, ಬ್ಯಾಂಕ್‌ಗಳ ಮೇಲಿನ ಒತ್ತಡವನ್ನು ತಗ್ಗಿಸಲು ಮತ್ತು ಗ್ರಾಹಕರಿಗೆ ನೆಮ್ಮದಿಯನ್ನು ನೀಡಲು ರಿಜರ್ವ್ ಬ್ಯಾಂಕ್ ಹೆಚ್ಚಿನ ಸಂಖ್ಯೆಯಲ್ಲಿ 100 ಮತ್ತು 500 ರೂ.ನೋಟುಗಳನ್ನು ಒದಗಿಸುವಂತೆ ನೋಡಿಕೊಳ್ಳಬೇಕೆಂದು ಐಬಿಎ ಅನ್ನು ಒತ್ತಾಯಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X