Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಭೂಕಂಪದ ಹೊರತಾಗಿಯೂ ಕ್ರೈಸ್ಟ್‌ಚರ್ಚ್...

ಭೂಕಂಪದ ಹೊರತಾಗಿಯೂ ಕ್ರೈಸ್ಟ್‌ಚರ್ಚ್ ಟೆಸ್ಟ್ ಅಬಾಧಿತ

ವಾರ್ತಾಭಾರತಿವಾರ್ತಾಭಾರತಿ14 Nov 2016 11:26 PM IST
share
ಭೂಕಂಪದ ಹೊರತಾಗಿಯೂ ಕ್ರೈಸ್ಟ್‌ಚರ್ಚ್ ಟೆಸ್ಟ್ ಅಬಾಧಿತ

 ಕೈಸ್ಟ್‌ಚರ್ಚ್, ನ.14: ಸೋಮವಾರ ಮಧ್ಯರಾತ್ರಿ ಇಲ್ಲಿಂದ 95 ಕಿ.ಮೀ. ದೂರದ ಸಮುದ್ರ ಪ್ರದೇಶದಲ್ಲಿ 7.5 ರಿಕ್ಟರ್ ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದರೂ ನ.17 ರಂದು ನ್ಯೂಝಿಲೆಂಡ್ ಹಾಗೂ ಪಾಕಿಸ್ತಾನ ನಡುವೆ ಮೊದಲ ಟೆಸ್ಟ್ ಪಂದ್ಯ ನಿಗದಿಯಂತೆಯೇ ನಡೆಯಲಿದೆ.

ಭೂಕಂಪ ಸಂಭವಿಸಿದಾಗ ನೆಲ್ಸನ್ ಪಟ್ಟಣದಲ್ಲಿದ್ದ ಪಾಕಿಸ್ತಾನದ ಪುರುಷರ ತಂಡ ಭೂಕಂಪನದ ಅನುಭವದಿಂದ ಭಯಭೀತರಾಗಿದ್ದಾರೆ. ಆದಾಗ್ಯೂ ಗುರುವಾರ ಆರಂಭವಾಗಲಿರುವ ಮೊದಲ ಟೆಸ್ಟ್‌ಗೆ ತಯಾರಿ ನಡೆಸುತ್ತಿದ್ದಾರೆ.

‘‘ಮೊದಲ ಟೆಸ್ಟ್‌ಗೆ ಸಿದ್ಧತೆ ಚೆನ್ನಾಗಿಯೇ ನಡೆಯುತ್ತಿದೆ. ಆದರೆ, ನಾವು ಪರಿಸ್ಥಿತಿಯ ಬಗ್ಗೆ ನಿಗಾವಹಿಸಲಿದ್ದೇವೆ. ನಾವು ಸಂಬಂಧಪಟ್ಟ ಪ್ರಾಧಿಕಾರಗಳೊಂದಿಗೆ ಸಂಪರ್ಕದಲ್ಲಿರುತ್ತೇವೆ’’ ಎಂದು ನ್ಯೂಝಿಲೆಂಡ್ ಕ್ರಿಕೆಟ್ ವಕ್ತಾರರು ತಿಳಿಸಿದ್ದಾರೆ.

ಉಭಯ ತಂಡಗಳು ಸೋಮವಾರ ಕ್ರೈಸ್ಟ್ಛ್‌ಚರ್ಚ್‌ಗೆ ಆಗಮಿಸಲಿವೆ. ಮಂಗಳವಾರ ಮ್ಯಾಚ್‌ಪ್ರಾಕ್ಟೀಸ್‌ನಲ್ಲಿ ತೊಡಗುತ್ತವೆ.

ಕ್ರೈಸ್ಟ್‌ಚರ್ಚ್ ಪ್ರದೇಶವೂ ಭೂಕಂಪಪೀಡಿತವಾಗಿದ್ದು, ಸೋಮವಾರ ರಾತ್ರಿ 1.30ಕ್ಕೆ 6.3 ರಿಕ್ಟರ್ ತೀವ್ರತೆಯ ಭೂಕಂಪನವಾಗಿದೆ. ಇದು ಮುಂದಿನ ವಾರವೂ ಮುಂದುವರಿಯುವ ಸಾಧ್ಯತೆಯಿದೆ.

 ಟೀಮ್ ಹೊಟೇಲ್ ಹಾಗೂ ಮೈದಾನದಲ್ಲಿ ಪಾಕ್ ತಂಡದ ಸುರಕ್ಷತೆಯ ಬಗ್ಗೆ ನ್ಯೂಝಿಲೆಂಡ್ ಕ್ರಿಕೆಟ್ ಮಂಡಳಿ ನಮಗೆ ಭರವಸೆ ನೀಡಿದೆ. ಕ್ರಿಕೆಟಿಗರು ನೆಲ್ಸನ್ ಪಟ್ಟಣದಲ್ಲಿ ನಿದ್ದೆಯಿಲ್ಲದ ರಾತ್ರಿ ಕಳೆದಿದ್ದಾರೆ. ಭೂಕಂಪ ಸಂಭವಿಸಿದಾಗ ಎಲ್ಲರೂ ಹೊಟೇಲ್‌ನ್ನು ತೆರವು ಗೊಳಿಸಿದ್ದರು. ಹೆಚ್ಚಿನವರು ರಾತ್ರಿ ರೂಮ್‌ಗೆ ವಾಪಸಾಗಲಿಲ್ಲ. ರಿಸೆಪ್ಶನ್ ಏರಿಯಾದಲ್ಲಿ ಕಾಲ ಕಳೆದಿದ್ದರು ಎಂದು ಪಾಕಿಸ್ತಾನ ತಂಡದ ಮ್ಯಾನೇಜರ್ ವಾಸಿಂ ಬಾರಿ ಹೇಳಿದ್ದಾರೆ.

ಪಾಕಿಸ್ತಾನದಲ್ಲಿ ಹೆಚ್ಚು ಭೂಕಂಪವಾಗದ ಕಾರಣ ನಮಗೆ ಇದು ಹೊಸ ಅನುಭವ. ನಾವು ಭಾರತ-ಇಂಗ್ಲೆಂಡ್ ಟೆಸ್ಟ್ ಪಂದ್ಯವನ್ನು ಟಿವಿಯಲ್ಲಿ ವೀಕ್ಷಿಸುತ್ತಿದ್ದಾಗ ಹೊಟೇಲ್‌ನ ಬಾಗಿಲು-ಕಿಟಕಿಗಳು ಅಲುಗಾಡಲಾರಂಭಿಸಿದವು. ತವರಿನಲ್ಲಿ ಮನೆಯವರು ಆತಂಕದಲ್ಲಿದ್ದಾರೆ ಎಂದು ವಾಸಿಂ ಹೇಳಿದರು.

ಭೂಕಂಪ ಸಂಭವಿಸಿದಾಗ ಪಾಕ್‌ನ ಮಹಿಳಾ ಕ್ರಿಕೆಟ್ ತಂಡ ಹೊಟೇಲ್‌ನ ಮೇಲಂತಸ್ತಿನಲ್ಲಿತ್ತು. ಎಲ್ಲರೂ ಭಯಭೀತರಾಗಿದ್ದರೂ, ಸುರಕ್ಷಿತರಾಗಿದ್ದಾರೆ ಎಂದು ಮ್ಯಾನೇಜರ್ ಬಸಿತ್ ಅಲಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X