Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶರೀಅತ್: ಕೇಂದ್ರದ ಹಸ್ತಕ್ಷೇಪ ವಿರುದ್ಧದ...

ಶರೀಅತ್: ಕೇಂದ್ರದ ಹಸ್ತಕ್ಷೇಪ ವಿರುದ್ಧದ ಸಮಾವೇಶ ಮುಂದೂಡಿಕೆ

ವಾರ್ತಾಭಾರತಿವಾರ್ತಾಭಾರತಿ14 Nov 2016 11:59 PM IST
share

ಮಂಗಳೂರು, ನ.14: ಶರೀಅತ್ ವಿಷಯದಲ್ಲಿ ಕೇಂದ್ರ ಸರಕಾರದ ಹಸ್ತಕ್ಷೇಪವನ್ನು ವಿರೋಧಿಸಿ ನ.15ರಂದು ನಗರದ ನೆಹರೂ ಮೈದಾನದಲ್ಲಿ ನಡೆಯಲಿದ್ದ ಸಮಾವೇಶವನ್ನು ಮುಂದೂಡಿರುವುದಾಗಿ ದ.ಕ., ಉಡುಪಿ ಜಿಲ್ಲಾ ಮುಸ್ಲಿಮ್ ಸೆಂಟ್ರಲ್ ಕಮಿಟಿ ಅಧ್ಯಕ್ಷ ಮುಹಮ್ಮದ್ ಮಸೂದ್ ತಿಳಿಸಿದ್ದಾರೆ.

ನಗರದ ಖಾಸಗಿ ಹೊಟೇಲ್‌ನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಸ್ಲಿಮ್ ಸೆಂಟ್ರಲ್ ಕಮಿಟಿಯ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಸಹಕಾರದಲ್ಲಿ ನಡೆಯಲಿದ್ದ ಸಮಾವೇಶವನ್ನು ಮುಂದೂಡಲಾಗಿದ್ದು, ಶೀಘ್ರದಲ್ಲೇ ವಿವಿಧ ಸಂಘಟನೆಗಳ ಸಭೆ ಕರೆದು ಸಮಾವೇಶದ ದಿನಾಂಕವನ್ನು ನಿಗದಿಪಡಿಸುವುದಾಗಿ ಹೇಳಿದರು.

ಉಳ್ಳಾಲ ಹಾಗೂ ಕೊಣಾಜೆ ಠಾಣಾ ವ್ಯಾಪ್ತಿಯಲ್ಲಿ ಅಹಿತರ ಘಟನೆ ನಡೆದ ಹಿನ್ನೆಲೆಯಲ್ಲಿ ಆಯಾ ಠಾಣಾ ವ್ಯಾಪ್ತಿಯಲ್ಲಿ ಸೆ.144ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿರುವುದು ಸರಿಯಾಗಿದೆ. ಆದರೆ ಯಾವುದೇ ಅಹಿತಕರ ಘಟನೆ ವರದಿಯಾಗದ ಮಂಗಳೂರಿನಲ್ಲಿ ಹಠಾತ್ ಆಗಿ ನಿಷೇಧಾಜ್ಞೆ ಜಾರಿಗೊಳಿಸಿರುವುದು ಸಮಂಜಸವಲ್ಲ. ನಗರದಲ್ಲಿ ನಿಷೇಧಾಜ್ಞೆ ಜಾರಿಯಾದ ಬಗ್ಗೆ ರವಿವಾರ ರಾತ್ರಿ ಕಮಿಟಿಗೆ ಮಾಹಿತಿ ಲಭಿಸಿದ್ದು, ಈ ಹಿನ್ನೆಲೆಯಲ್ಲಿ ಇಂದು ತುರ್ತಾಗಿ ಸುದ್ದಿಗೋಷ್ಠಿ ಕರೆದು ಸಮಾವೇಶವನ್ನು ಮುಂದೂಡಿರುವುದಾಗಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಎಚ್.ಖಾದರ್, ಯುನಿವೆಫ್ ಅಧ್ಯಕ್ಷ ರಫೀವುದ್ದೀನ್ ಕುದ್ರೋಳಿ, ಸಲಫಿ ಮೂವ್‌ಮೆಂಟ್‌ನ ಪ್ರ.ಕಾರ್ಯದರ್ಶಿ ಅಬ್ಬುಚ್ಚ, ಮುಸ್ಲಿಮ್ ಸೆಂಟ್ರಲ್ ಕಮಿಟಿ ಉಪಾಧ್ಯಕ್ಷ ಹಾಜಿ ಕೋಡಿಜಾಲ್ ಇಬ್ರಾಹೀಂ, ಜಮಾಅತೆ ಇಸ್ಲಾಮಿ ಹಿಂದ್ ಮುಖಂಡ ಕೆ.ಎಂ.ಶರೀಫ್ ಸಾಹೇಬ್, ಝೀನತ್ ಬಕ್ಷ್ ಕೇಂದ್ರ ಜುಮಾ ಮಸೀದಿಯ ಟ್ರಸ್ಟಿ ಹಾಜಿ ಅಹ್ಮದ್ ಬಾಷಾ ತಂಙಳ್, ಎಸ್‌ಡಿಪಿಐ ದ.ಕ. ಜಿಲ್ಲಾ ಪ್ರ.ಕಾರ್ಯದರ್ಶಿ ನವಾಝ್ ಉಳ್ಳಾಲ್, ಐಕ್ಯ ವೇದಿಕೆಯ ಅಧ್ಯಕ್ಷ ಮುಸ್ತಫಾ ಕೆ.ಎಂ., ಜಮೀಯತುಲ್ ಫಲಾಹ್‌ನ ಹಾಜಿ ಸಾದುದ್ದೀನ್ ಸಾಲಿಹ್, ಮುಸ್ಲಿಮ್ ಸೆಂಟ್ರಲ್ ಕಮಿಟಿಯ ಕಾರ್ಯದರ್ಶಿಗಳಾದ ಡಿ.ಎಂ.ಅಸ್ಲಮ್, ಹಮೀದ್ ಕುದ್ರೋಳಿ, ಸಿ.ಎಂ.ಮುಸ್ತಫಾ, ಹಾಜಿ ರಿಯಾಝುದ್ದೀನ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X