Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನೋಟು ರದ್ದತಿಯಿಂದ ಹೈರಾಣಾದ ಜನರಿಗೆ...

ನೋಟು ರದ್ದತಿಯಿಂದ ಹೈರಾಣಾದ ಜನರಿಗೆ ಉಣಬಡಿಸಿದ ಮಂಗಳೂರಿನ ಸಿಖ್ಖರು!

ವಾರ್ತಾಭಾರತಿವಾರ್ತಾಭಾರತಿ15 Nov 2016 11:09 AM IST
share
ನೋಟು ರದ್ದತಿಯಿಂದ ಹೈರಾಣಾದ ಜನರಿಗೆ ಉಣಬಡಿಸಿದ ಮಂಗಳೂರಿನ ಸಿಖ್ಖರು!

ಮಂಗಳೂರು, ನ.15: ಕಳೆದ ಶನಿವಾರ ತಮ್ಮ ಕಚೇರಿಗೆ ಹೊರಟಿದ್ದ ಮಂಗಳೂರು ನಿವಾಸಿ ಬಲವಿಂದರ್ ಸಿಂಗ್ ವಿರ್ಡಿ ನಗರದ ರೈಲು ನಿಲ್ದಾಣದಲ್ಲಿ ಜನರು ಆಹಾರ ಪಡೆಯಲು ನಗದು ಹಣದ ಕೊರತೆಯಿಂದ ಒದ್ದಾಡುತ್ತಿರುವುದನ್ನು ಗಮನಿಸಿದ್ದರು. ಹೆಚ್ಚಿನವರ ಬಳಿ ಇದ್ದಿದ್ದು 500 ಹಾಗೂ 1000 ರೂ. ನೋಟುಗಳು. ಅವುಗಳಿಗೆ ಯಾರೂ ಚಿಲ್ಲರೆ ಕೊಡಲು ತಯಾರಿರಲಿಲ್ಲ.

ನಗರದಲ್ಲಿ 2000ನೇ ಇಸವಿಯಿಂದ ವಾಸಿಸುತ್ತಿರುವ ಬಲವಿಂದರ್ ಇಲ್ಲಿ ಟ್ರಾನ್ಸ್ ಪೋರ್ಟ್ ಉದ್ಯಮ ನಡೆಸುತ್ತಿದ್ದಾರೆ. ಜನರ ಬವಣೆಯನ್ನು ನೋಡಿ ಉಚಿತ ಆಹಾರ ನೀಡಲು ನಿರ್ಧರಿಸಿದ ಅವರು ಮಂಗಳೂರಿನಲ್ಲಿರುವ ತಮ್ಮ ಸಮುದಾಯದ ಇತರರನ್ನು ಸಂಪರ್ಕಿಸಿದರು. ಸುಮಾರು 20 ಸ್ವಯಂಸೇವಕರು ಮುಂದೆ ಬಂದ ಪರಿಣಾಮ ಅವರು ನಗರದ ರೈಲ್ವೇ ನಿಲ್ದಾಣದಲ್ಲಿ ಲಂಗರ್ ಆಯೋಜಿಸಿದರು. (ಸಾಮೂಹಿಕವಾಗಿ ಅಡುಗೆ ಮಾಡಿ ಜನರಿಗೆ ಉಚಿತವಾಗಿ ಉಣಬಡಿಸುವುದು).
ಬಲವಿಂದರ್ ಅವರ ಪುತ್ರ ಪ್ರಭಜೋತ್ ಹೇಳುವಂತೆ ಸುಮಾರು 2,000 ಮಂದಿ ರವಿವಾರ ಉಚಿತ ಊಟ ಸವಿದಿದ್ದಾರೆ. ಬ್ಯಾಂಕ್ ಮೂಲಕವೇ ಎಲ್ಲಾ ಖರೀದಿಗಳಿಗೆ ಹಣ ಸಂದಾಯ ಮಾಡಲಾಯಿತು.

ಪಾಲಕ್ಕಾಡ್ ವಿಭಾಗದ ವಿಭಾಗೀಯ ರೈಲ್ವೇ ಮ್ಯಾನೇಜರ್ ಅವರಿಂದ ಎಲ್ಲಾ ಅಗತ್ಯ ಅನುಮತಿ ಪಡೆದ ನಂತರವೂ ನಮ್ಮನ್ನು ರೈಲ್ವೇ ಪ್ರೊಟೆಕ್ಷನ್ ಅಧಿಕಾರಿಗಳು ಪ್ಲಾಟ್ ಫಾರ್ಮ್ ನ ಕೊನೆಯ ತುದಿಗೆ ಸ್ಥಳಾಂತರಗೊಳ್ಳಲು ಹೇಳಿದರು. ಅಧಿಕಾರಿಯೊಬ್ಬರು ತಮ್ಮ ತಂದೆಯೊಂದಿಗೆ ತುಂಬಾ ಒರಟಾಗಿ ನಡೆದುಕೊಂಡರು ಎಂದೂ ಅವರು ದೂರಿದರು.
ಕೊನೆಗೆ ಎಲ್ಲವೂ ಸುಗಮವಾಗಿ ನಡೆದು ಅಲ್ಲಿ ಬಂದವರಿಗೆಲ್ಲಾ ಆಹಾರ ಒದಗಿಸಲಾಯಿತು. ಮಂಗಳೂರಿನ ಸಿಖ್ಖ್ ಸಮುದಾಯದ ಈ ಮಾನವೀಯ ಕಾರ್ಯಕ್ಕೆ ಸಾಮಾಜಿಕ ಜಾಲತಾಣಗಳಿಂದಲೂ ಬಹಳಷ್ಟು ಪ್ರಶಂಸೆ ಕೇಳಿ ಬಂದಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X