Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಜಗತ್ತಿನ ಗಮನ ಸೆಳೆದ ಜಪಾನ್

ಜಗತ್ತಿನ ಗಮನ ಸೆಳೆದ ಜಪಾನ್

ಒಂದೇ ವಾರದಲ್ಲಿ ಭಾರೀ ರಸ್ತೆ ಹೊಂಡ ದುರಸ್ತಿ

ವಾರ್ತಾಭಾರತಿವಾರ್ತಾಭಾರತಿ15 Nov 2016 9:38 PM IST
share
ಜಗತ್ತಿನ ಗಮನ ಸೆಳೆದ ಜಪಾನ್

ಟೋಕಿಯೋ , ನ. 15  : ಭಾರೀ ಕುಳಿ ಬಿದ್ದು ಸಂಪೂರ್ಣ ಹಾನಿಗೊಂಡಿದ್ದ ಫುಕುವೋಕಾದ ಅತ್ಯಂತ ಜನನಿಬಿಡ ರಸ್ತೆಯೊಂದು ಕೇವಲ ಒಂದೇ ವಾರದಲ್ಲಿ ಸಂಪೂರ್ಣ ದುರಸ್ತಿಗೊಂಡು, ಮೊದಲಿನಂತಾಗಿ ವಾಹನ ಸಂಚಾರಕ್ಕೆ ಮುಕ್ತವಾಗಿದೆ. ಐದು ಲೇನ್ ಗಳ ಈ ರಸ್ತೆಯಲ್ಲಿ ಉಂಟಾಗಿದ್ದ  30 ಮೀಟರ್ (98 ಅಡಿಗಳು) ಅಗಲ ಹಾಗು 15 ಮೀಟರ್ ಆಳದ ಈ ಭಾರೀ ಹೊಂಡವನ್ನು ಮುಚ್ಚಲು ಕಾರ್ಮಿಕರು ಸಮರೋಪಾದಿಯಲ್ಲಿ ಕೆಲಸ ಮಾಡಿ ಮುಗಿಸಿದ್ದಾರೆ. 

ನವೆಂಬರ್ ೮ ರಂದು (ಮಂಗಳವಾರ ) ಮೊದಲು ಬಿದ್ದ ಈ ರಸ್ತೆ ಹೊಂಡದಿಂದ ಯಾವುದೇ ಜೀವಹಾನಿ ಆಗಿರದಿದ್ದರೂ ರಸ್ತೆ ಸಂಪೂರ್ಣ ಹಾನಿಗೊಂಡಿದ್ದು ಮಾತ್ರವಲ್ಲದೆ ವಿದ್ಯುತ್ , ಗ್ಯಾಸ್ ಹಾಗು ನೀರಿನ ಸಂಪರ್ಕಗಳೂ ಅಸ್ತವ್ಯಸ್ತಗೊಂಡಿದ್ದವು. ಆದರೆ ಸರಕಾರದ ಇಚ್ಛಾಶಕ್ತಿ ಹಾಗು ಕಾರ್ಮಿಕರ ದಕ್ಷತೆಯಿಂದ ಒಂದೇ ವಾರದೊಳಗೆ ಅಂದರೆ ಮುಂದಿನ ಮಂಗಳವಾರ ಈ ರಸ್ತೆ ಮತ್ತೆ ಮೊದಲಿನಂತಾಗಿ ಸಂಚಾರಕ್ಕೆ ಮುಕ್ತವಾಗಿದೆ. 

ಸಾಲದ್ದಕ್ಕೆ, ಒಂದು ವಾರ ಜನರಿಗಾದ 'ಭಾರಿ ತೊಂದರೆ' ಗೆ ನಗರದ ಮೇಯರ್ ಸೋಯಿಚಿರೊ ತಕಾಶಿಮ ಅವರು ಕ್ಷಮೆ ಕೋರಿ ಕೆಲಸ ಮಾಡಿದ ಕಾರ್ಮಿಕರಿಗೆ ಧನ್ಯವಾದ ಸಲ್ಲಿಸಿದ್ದಾರೆ. ಹಾಗು ರಸ್ತೆ ಹಾನಿಗೆ ಕಾರಣ ಹುಡುಕಲು ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ. 

ಜಪಾನ್ ನ ಈ ಕ್ಷಿಪ್ರ ಕಾರ್ಯಾಚರಣೆ ಇಡೀ ವಿಶ್ವದ ಗಮನ ಸೆಳೆದಿದೆ. ಇಷ್ಟೊಂದು ದಕ್ಷತೆ ಹಾಗು ಚುರುಕಿನಿಂದ ಇಂತಹ ಜನನಿಬಿಡ ರಸ್ತೆಯೊಂದರ ಸಂಕೀರ್ಣ ನಿರ್ಮಾಣ ಕೆಲಸ ಮಾಡಿ ಮುಗಿಸಿರುವುದು ಯಾವುದೇ ಮಾನದಂಡದಲ್ಲೂ ಅತ್ಯಂತ ಅಸಾಮಾನ್ಯವಾಗಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ಪ್ರಶಂಸಿಸಿವೆ. 

ಇದೇ ಸಂದರ್ಭದಲ್ಲಿ ಇಂತಹದ್ದೊಂದು ಸಮಸ್ಯೆ ಭಾರತದ ಪ್ರಮುಖ ನಗರವೊಂದರ ಜನನಿಬಿಡ ಪ್ರದೇಶದಲ್ಲಿ ಆಗಿದ್ದರೆ ಅದು ಮತ್ತೆ ಮೊದಲಿನಂತಾಗಲು ಎಷ್ಟು ಸಮಯ ತಗುಲುತ್ತಿತ್ತು ಎಂದು ಭಾರತೀಯರು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚಿಸುತ್ತಿದ್ದಾರೆ. 


 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X