Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜಿಪಂ ಕೆಡಿಪಿ ಸಭೆ

ಜಿಪಂ ಕೆಡಿಪಿ ಸಭೆ

ಜಿಪಂ ಸದಸ್ಯರ ಕ್ಷೇತ್ರಗಳಿಗೆ 25 ಕೋಟಿ ರೂ. ಅನುದಾನ ಹಂಚಿಕೆ

ವಾರ್ತಾಭಾರತಿವಾರ್ತಾಭಾರತಿ15 Nov 2016 10:55 PM IST
share

ಮಡಿಕೇರಿ ನ.15: ಕೊಡಗು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಪೂರಕವಾಗಿ ಜಿಲ್ಲಾ ಪಂಚಾಯತ್‌ಗೆ ಒದಗಿಸಲಾಗಿರುವ 25 ಕೋಟಿ ರೂ. ಅನುದಾನವನ್ನು ಜಿ.ಪಂನ ಎಲ್ಲ ಸದಸ್ಯರ ಕ್ಷೇತ್ರಗಳಿಗೆ ಹಂಚಿಕೆ ಮಾಡಬೇಕು ಮತ್ತು ಇದಕ್ಕೆ ಪೂರಕವಾದ ಕಾಮಗಾರಿಗಳ ಪ್ರಸ್ತಾವನೆಯನ್ನು ಸಿದ್ಧಪಡಿಸಬೇಕೆಂದು ಜಿಲ್ಲಾ ಪಂಚಾಯತ್ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಕಾರ್ಯ ಪಾಲಕ ಅಭಿಯಂತರರಿಗೆ ಅಧ್ಯಕ್ಷ ಬಿ. ಎ. ಹರೀಶ್ ಸ್ಪಷ್ಟ ನಿರ್ದೇಶನ ನೀಡಿದ್ದಾರೆ.


ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಜಿಪಂ ಅಧ್ಯಕ್ಷ ಬಿ.ಎ. ಹರೀಶ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಕಾರ್ಯಪಾಲಕ ಅಭಿಯಂತರ ರೆಡ್ಡಿ, ರಾಜ್ಯ ಸರಕಾರ ತಲಾ 25 ಕೋಟಿ ರೂ. ಅನುದಾನವನ್ನು ಜಿಲ್ಲಾ ಪಂಚಾಯತ್ ಮತ್ತು ಲೋಕೋಪಯೋಗಿ ಇಲಾಖೆಗೆ ಒದಗಿಸಿದೆ. ಜಿಲ್ಲಾ ಪಂಚಾಯತ್‌ಗೆ ಸಂಬಂಧಿಸಿದಂತೆ ಲಭ್ಯ ವಿಶೇಷ ಅನುದಾನದಲ್ಲಿ ನಡೆಯಬೇಕಿರುವ ಕಾಮಗಾರಿಗಳನ್ನು ಇಲಾಖಾ ಇಂಜಿನಿಯರ್‌ಗಳ ಮುಖೇನ ಮತ್ತು ಸಾರ್ವಜನಿಕರು ನೀಡಿದ ಮನವಿಯ ಆಧಾರದಲ್ಲಿ ಪಟ್ಟಿಯೊಂದನ್ನು ಸಿದ್ಧಪಡಿಸಲಾಗಿದೆ ಎಂದು ಸಭೆಯ ಗಮನಕ್ಕೆ ತರುವುದಾಗಿ ತಿಳಿಸಿದರು.


ಇದರಿಂದ ಅಸಮಾಧಾನಗೊಂಡ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶಶಿ ಸುಬ್ರಮಣಿ, ಜಿಲ್ಲಾ ಪಂಚಾಯತ್‌ಗೆ ಲಭ್ಯ ಅನುದಾನಕ್ಕೆ ಸಂಬಂಧಿಸಿದಂತೆ ಚುನಾಯಿತ ಸದಸ್ಯರ ಗಮನಕ್ಕೆ ತಾರದೆ ಕಾಮಗಾರಿಗಳ ಪಟ್ಟಿ ಸಿದ್ಧಪಡಿಸಿರುವ ಬಗ್ಗೆ ಆಕ್ರೋಶ ವ್ಯಕ್ತ ಪಡಿಸಿದರು. ಅಲ್ಲದೆ, ಲಭ್ಯ ಅನುದಾನವನ್ನು ಜಿಪಂನ ಎಲ್ಲಾ 29 ಸದಸ್ಯರಿಗೆ ಸಮಾನವಾಗಿ ಹಂಚಬೇಕೆಂದು ಆಗ್ರಹಿಸಿದರು. ಇದಕ್ಕೆ ಧ್ವನಿ ಗೂಡಿಸಿದ ಸ್ಥಾಯಿ ಸಮಿತಿ ಅಧ್ಯಕ್ಷ ಶ್ರೀನಿವಾಸ್, ಜಿಲ್ಲಾ ಪಂಚಾಯತ್ ಸದಸ್ಯರ ಸಾಕಷ್ಟು ಕ್ಷೇತ್ರಗಳಲ್ಲಿ ಅನೇಕ ರಸ್ತೆಗಳು ಹದಗೆಟ್ಟಿವೆ.

ಜಿಪಂ ಸದಸ್ಯರೆಲ್ಲರ ಗಮನಕ್ಕೆ ವಿಚಾರ ತಂದು ಅವರ ಸಲಹೆ ಸೂಚನೆಗಳನ್ನು ಪಡೆದು ಕಾಮಗಾರಿಗಳ ಪ್ರಸ್ತಾವನೆಯನ್ನು ಸರಕಾರಕ್ಕೆ ಸಲ್ಲಿಸಬೇಕೆಂದು ತಿಳಿಸಿದರು.
ಪ್ರಬಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜಾ, ಸರಕಾರದ ವಿಶೇಷ ಅನು ದಾನದ ಬಳಕೆಯ ಬಗ್ಗೆ ಆದೇಶ ಬಂದಿರುವ ಬಗ್ಗೆ ಪ್ರಶ್ನಿಸಿದಾಗ, ಾರ್ಯಪಾಲಕ ಅಭಿಯಂತರ ರೆಡ್ಡಿ, ವಿಶೇಷ ಅನುದಾನದಡಿ ಅಂತಹ ಆದೇಶಗಳು ಬಂದಿಲ್ಲ. ಬದಲಾಗಿ ಕಾಮಗಾರಿಯ ಪ್ರಸ್ತಾವನೆಯನ್ನು ವಾರದೊಳಗೆ ಕಳುಹಿಸುವ ಅಗತ್ಯವಿರುವುದಾಗಿ ತಿಳಿಸಿದರು.


 ಎಲ್ಲಾ ಜಿಪಂ ಸದಸ್ಯರಿಗೆ ವಿಷಯವನ್ನು ತಿಳಿಸಿ, ಅವರಿಂದ ಕಾಮಗಾರಿಗಳ ಪಟ್ಟಿ ಪಡೆದು ಸಿದ್ಧಪಡಿಸಿ ಪ್ರಸ್ತಾವನೆ ಸಲ್ಲಿಸುವುದು ಒಲಿತು ಎಂದು ಶಶಿ ಸುಬ್ರಮಣಿ ಹೇಳಿದರು.
 ಈ ಸಂದರ್ಭ ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜಾ, ಜಿಲ್ಲಾ ಪಂಚಾಯತ್‌ನ ಎಲ್ಲಾ ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X