Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ವಿನಿಮಯ ಮಾಡುವಂತೆ ಕೋರಿ ಮೋದಿಗೆ ಪ್ರಚಂಡ...

ವಿನಿಮಯ ಮಾಡುವಂತೆ ಕೋರಿ ಮೋದಿಗೆ ಪ್ರಚಂಡ ಫೋನ್

ನೇಪಾಳದಲ್ಲಿ ಭಾರೀ ಪ್ರಮಾಣದಲ್ಲಿ ನಿಷೇಧಿತ ಭಾರತೀಯ ಕರೆನ್ಸಿ

ವಾರ್ತಾಭಾರತಿವಾರ್ತಾಭಾರತಿ16 Nov 2016 12:15 AM IST
share
ವಿನಿಮಯ ಮಾಡುವಂತೆ ಕೋರಿ ಮೋದಿಗೆ ಪ್ರಚಂಡ ಫೋನ್

ಕಠ್ಮಂಡು, ನ. 15: ಭಾರತದಲ್ಲಿ ರೂ. 500 ಮತ್ತು 1000 ಮುಖಬೆಲೆಯ ಕರೆನ್ಸಿ ನೋಟುಗಳನ್ನು ನಿಷೇಧಿಸಿರುವ ಕ್ರಮ ನೆರೆಯ ದೇಶ ನೇಪಾಳದಲ್ಲೂ ಕಳವಳ ಹುಟ್ಟಿಸಿದೆ. ಆ ದೇಶದಲ್ಲೂ ಹೆಚ್ಚಿನ ಮುಖಬೆಲೆಯ ಭಾರತೀಯ ನೋಟುಗಳನ್ನು ಭಾರೀ ಪ್ರಮಾಣದಲ್ಲಿ ಹೊಂದಿದವರಿದ್ದಾರೆ. ಈ ಹಿನ್ನೆಲೆಯಲ್ಲಿ, ನೇಪಾಳದ ಪ್ರಧಾನಿ ಪ್ರಚಂಡ ಪ್ರಧಾನಿ ನರೇಂದ್ರ ಮೋದಿ ಜೊತೆ ಫೋನ್‌ನಲ್ಲಿ ಮಾತನಾಡಿ, ನೇಪಾಳಿಗರು ಹೊಂದಿರುವ ಹಳೆಯ ಭಾರತೀಯ ಕರೆನ್ಸಿ ನೋಟುಗಳಿಗೆ ಬದಲಾಗಿ ನೂತನ ಕಾನೂನುಬದ್ಧ ನೋಟುಗಳನ್ನು ವಿನಿಮಯ ಮಾಡುವ ವ್ಯವಸ್ಥೆಯನ್ನು ನೇಪಾಳದಲ್ಲಿ ಮಾಡುವಂತೆ ಕೋರಿದ್ದಾರೆ.

 ಮೋದಿ ಜೊತೆ ಐದು ನಿಮಿಷಗಳ ಕಾಲ ಟೆಲಿಫೋನ್ ಸಂಭಾಷಣೆ ನಡೆಸಿದ ಪ್ರಚಂಡ, ನೇಪಾಳಿಗರು ರೂ. 500 ಮತ್ತು 1000 ಮುಖಬೆಲೆಯ ಕರೆನ್ಸಿ ನೋಟುಗಳನ್ನು ಭಾರೀ ಪ್ರಮಾಣದಲ್ಲಿ ಹೊಂದಿದ್ದಾರೆ ಎಂದರು.

ಭಾರತದಲ್ಲಿ ದಿನಗೂಲಿ ಕಾರ್ಮಿಕರಾಗಿ ದುಡಿಯುವ ಲಕ್ಷಾಂತರ ನೇಪಾಳಿಗರಿದ್ದಾರೆ ಹಾಗೂ ವೈದ್ಯಕೀಯ ಚಿಕಿತ್ಸೆಗಾಗಿ ಅಥವಾ ದೈನಂದಿನ ಬಳಕೆಯ ವಸ್ತುಗಳನ್ನು ಭಾರತೀಯ ಮಾರುಕಟ್ಟೆಗಳಲ್ಲಿ ಖರೀದಿಸುವುದಕ್ಕಾಗಿ ಹೋಗುವವರಿದ್ದಾರೆ. ಅವರ ಬಳಿ ನಿಷೇಧಿತ ಭಾರತೀಯ ಬ್ಯಾಂಕ್ ನೋಟ್‌ಗಳು ಭಾರೀ ಪ್ರಮಾಣದಲ್ಲಿ ಇವೆ ಎಂಬುದಾಗಿ ‘ಕಠ್ಮಂಡು ಪೋಸ್ಟ್’ ವರದಿ ಮಾಡಿದೆ.

ಅದೂ ಅಲ್ಲದೆ, ಯಾತ್ರಾರ್ಥಿಗಳಾಗಿ ಭಾರತಕ್ಕೆ ಹೋಗುವವರು ಹಾಗೂ ಗಡಿಯಾಚೆಗಿನ ವ್ಯಾಪಾರ ವಹಿವಾಟಿನಲ್ಲಿ ತೊಡಗಿಸಿಕೊಂಡವರ ಬಳಿ ಭಾರೀ ಪ್ರಮಾಣದಲ್ಲಿ ನಿಷೇಧಿತ ಭಾರತೀಯ ಕರೆನ್ಸಿ ನೋಟುಗಳಿವೆ ಎನ್ನಲಾಗಿದೆ.

ಹಲವು ನೇಪಾಳಿಗರು ತಮ್ಮಲ್ಲಿರುವ ಹಳೆಯ ಭಾರತೀಯ ನೋಟುಗಳಿಗೆ ಹೊಸ ನೋಟುಗಳನ್ನು ಪಡೆಯದಿದ್ದರೆ ತಮ್ಮ ಜೀವಮಾನದ ಉಳಿತಾಯಗಳನ್ನೇ ಕಳೆದುಕೊಳ್ಳಬಹುದು ಎಂದು ನೇಪಾಳಿ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಗಳ ಒಕ್ಕೂಟ ಹೇಳಿದೆ.

‘‘ಈ ಎಲ್ಲ ಅಂಶಗಳನ್ನು ಗಮನದಲ್ಲಿರಿಸಿ, ಹಳೆಯ ನಿಷೇಧಿತ ಭಾರತೀಯ ನೋಟುಗಳನ್ನು ನೇಪಾಳಿಗರು ತಮ್ಮ ದೇಶದಲ್ಲೇ ವಿನಿಮಯ ಮಾಡಿಕೊಳ್ಳಲು ಸಾಧ್ಯವಾಗುವಂತೆ ಭಾರತ ವ್ಯವಸ್ಥೆ ಮಾಡಬೇಕು’’ ಎಂಬುದಾಗಿ ಪ್ರಧಾನಿ ಹೇಳಿದ್ದಾರೆ ಎಂದು ಪ್ರಚಂಡರ ವೈಯಕ್ತಿಕ ವೆಬ್‌ಸೈಟ್‌ನಲ್ಲಿ ಹಾಕಲಾದ ಹೇಳಿಕೆಯೊಂದು ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X