Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗುಜರಾತ್ ಸಿಎಂ ಆಗಿದ್ದಾಗ 25 ಕೋ.ರೂ. ಲಂಚ...

ಗುಜರಾತ್ ಸಿಎಂ ಆಗಿದ್ದಾಗ 25 ಕೋ.ರೂ. ಲಂಚ ಪಡೆದಿದ್ದ ಮೋದಿ: ಕೇಜ್ರಿ

ವಾರ್ತಾಭಾರತಿವಾರ್ತಾಭಾರತಿ16 Nov 2016 12:19 AM IST
share

ಹೊಸದಿಲ್ಲಿ, ನ.15: ತನ್ನ ನೋಟು ನಿಷೇಧ ಕ್ರಮ ಬಡವರ ಪಾಲಿನ ‘ಖಡಕ್ ಚಾಯ್’ ಆಗಿದೆ ಮತ್ತು ಇದು ಶ್ರೀಮಂತರಿಗೆ ಒಗ್ಗುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸುತ್ತಿರಬಹುದು, ಆದರೆ ಇದು ಶ್ರೀಸಾಮಾನ್ಯನ ಪಾಲಿಗೆ ವಿಷಕ್ಕಿಂತ ಹೆಚ್ಚಾಗಿದೆ ಎಂದು ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಇಂದಿಲ್ಲಿ ಹೇಳಿದರು.
ದಿಲ್ಲಿ ವಿಧಾನಸಭೆಯ ಒಂದು ದಿನದ ವಿಶೇಷ ಅಧಿವೇಶನದಲ್ಲಿ ಮಾತನಾಡುತ್ತಿದ್ದ ಅವರು,ಮೋದಿಯವರು ತನ್ನ ಕಾರ್ಪೊರೇಟ್ ಸ್ನೇಹಿತರನ್ನು ರಕ್ಷಿಸುತ್ತಿದ್ದಾರೆ ಮತ್ತು ಬಡವರನ್ನು ಶೋಷಿಸುತ್ತಿದ್ದಾರೆ. ಅವರು ತನ್ನ ನಿರ್ಧಾರ ಕಪ್ಪುಹಣದ ವಿರುದ್ಧ ಎಂದು ಹೇಳಿಕೊಳ್ಳುತ್ತಿದ್ದಾರೆ, ಆದರೆ ಅದು ಸಾಮಾನ್ಯಜನರ ವಿರುದ್ಧ ದಾಳಿಯಾಗಿದೆ. ಮೋದಿಯವರ ಕಾರ್ಪೊರೇಟ್ ಸ್ನೇಹಿತರು ಅವರಿಗೆ ಹಣ ಪಾವತಿ ಮಾಡುತ್ತಿದ್ದಾರೆ. ಇದಕ್ಕೆ ಪ್ರತಿಯಾಗಿ ಮೋದಿ ಅವರ ನಿವಾಸಗಳ ಮೇಲೆ ಯಾವುದೇ ಆದಾಯ ತೆರಿಗೆ ದಾಳಿಗಳು ನಡೆಯದಂತೆ ನೋಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.
ಮೋದಿ ಗುಜರಾತಿನ ಮುಖ್ಯಮಂತ್ರಿಯಾಗಿದ್ದಾಗ ಆದಿತ್ಯ ಬಿರ್ಲಾ ಸಮೂಹದ ಕಂಪೆನಿಯಿಂದ 25 ಕೋ.ರೂ.ಲಂಚ ಸ್ವೀಕರಿಸಿದ್ದರು ಎಂದೂ ಆರೋಪಿಸಿದ ಕೇಜ್ರಿವಾಲ್, 2013,ಅ.15ರಂದು ಆದಿತ್ಯ ಬಿರ್ಲಾ ಸಮೂಹದ ಹಿರಿಯ ಅಧಿಕಾರಿ ಶುಭೇಂದು ಅಮಿತಾಬ್ ನಿವಾಸದ ಮೇಲೆ ದಾಳಿ ನಡೆಸಿದ ಆದಾಯ ತೆರಿಗೆ ಅಧಿಕಾರಿಗಳು ಅವರ ಬ್ಲಾಕ್‌ಬೆರಿ ಫೋನ್, ಲ್ಯಾಪ್‌ಟಾಪ್ ಇತ್ಯಾದಿಗಳನ್ನು ಕೂಲಂಕಷವಾಗಿ ತಪಾಸಣೆಗೊಳಪಡಿಸಿದ್ದರು. 2012,ನ.16ರಂದು ಗುಜರಾತ್ ಮುಖ್ಯಮಂತ್ರಿಗೆ 25 ಕೋ.ರೂ. ಪಾವತಿಸಲಾಗಿದೆ ಎಂಬ ಟಿಪ್ಪಣಿ ಆಗ ಪತ್ತೆಯಾಗಿತ್ತು. ಆದರೆ ಆಗಿನ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರ ಅವರ ವಿರುದ್ಧ ಯಾವುದೇ ಕ್ರಮವನ್ನು ಕೈಗೊಂಡಿರಲಿಲ್ಲ ಎಂದು ಪ್ರತಿಪಾದಿಸಿದರು.
ಸ್ವತಂತ್ರ ಭಾರತದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಹಾಲಿ ಪ್ರಧಾನಿಯೋರ್ವರ ಹೆಸರು ಕಪ್ಪುಹಣ ವಹಿವಾಟಿನಲ್ಲಿ ಕೇಳಿಬಂದಿದೆ ಎಂದು ಕೇಜ್ರಿ ಬೆಟ್ಟು ಮಾಡಿದರು.

ಚಲಾವಣೆ ರದ್ದು ನಿರ್ಧಾರ ವಾಪಸ್ಸಿಗೆ ಕೇಜ್ರಿವಾಲ್ ಆಗ್ರಹ
ದೇಶದಲ್ಲಿ 500 ಹಾಗೂ 1000 ರೂಪಾಯಿ ನೋಟು ಚಲಾವಣೆ ರದ್ದತಿ ಹಗರಣದ ಬಗ್ಗೆ ಸುಪ್ರೀಂಕೋರ್ಟ್ ಮೇಲುಸ್ತುವಾರಿಯಲ್ಲಿ ತನಿಖೆ ನಡೆಯಬೇಕು ಎಂದು ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಆಗ್ರಹಿಸಿದ್ದಾರೆ. ಇದು ಒಂದು ನಿರ್ದಿಷ್ಟ ರಾಜಕೀಯ ಪಕ್ಷಕ್ಕೆ ಲಾಭ ಮಾಡಿಕೊಡುವ ಉದ್ದೇಶದ ದೊಡ್ಡ ಹಗರಣ ಎಂದು ಬಿಜೆಪಿ ಮೇಲೆ ಪರೋಕ್ಷವಾಗಿ ಬೆಟ್ಟು ಮಾಡಿದ್ದಾರೆ.
ಈ ಸಂಬಂಧ ದಿಲ್ಲಿ ವಿಧಾನಸಬೆಯ ಒಂದು ದಿನದ ತುರ್ತು ಅಧಿವೇಶನದಲ್ಲಿ ಅವರು ನಿರ್ಣಯ ಮಂಡಿಸಿದರು. ಆಪ್ ಪ್ರಾಬಲ್ಯದ ಸದನದಲ್ಲಿ, ಈ ಬಗ್ಗೆ ವಿಸ್ತೃತ ಚರ್ಚೆ ನಡೆಸಿ, ಈ ನಿರ್ಧಾರವನ್ನು ವಾಪಸು ಪಡೆಯುವಂತೆ ಕೇಂದ್ರಕ್ಕೆ ಸೂಚಿಸಬೇಕು ಎಂದು ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರನ್ನು ಆಗ್ರಹಿಸಿದೆ.
ಚರ್ಚೆಯಲ್ಲಿ ಪಾಲ್ಗೊಂಡ ಎಎಪಿಯ ಓಕ್ಲಾ ಶಾಸಕ ಅಮಾನತುಲ್ಲಾ ಖಾನ್ ಈ ಚಲಾವಣೆ ರದ್ದತಿ ನಿರ್ಧಾರದಿಂದ ಕುಟುಂಬಗಳು ಎದುರಿಸುತ್ತಿರುವ ಸಂಕಷ್ಟಗಳ ಅರಿವು ಮೋದಿಗಿಲ್ಲ. ಏಕೆಂದರೆ ಅವರಿಗೆ ಪತ್ನಿ ಅಥವಾ ಮಕ್ಕಳಿಲ್ಲ ಎಂದು ಲೇವಡಿ ಮಾಡಿದರು.
ಖಾನ್ ಹೇಳಿಕೆಯನ್ನು ಖಂಡಿಸಿದ ವಿರೋಧ ಪಕ್ಷದ ವಿಜೇಂದ್ರ ಗುಪ್ತ ಅವರು, ಕೇಜ್ರಿವಾಲ್ ವಿರುದ್ಧ ವೈಯಕ್ತಿಕ ಟೀಕೆ ಮಾಡಿದರು. ಇದು ಎಎಪಿ ಸದಸ್ಯರನ್ನು ಕೆರಳಿಸಿತು. ಉದ್ರಿಕ್ತ ಶಾಸಕರು ಸಭಾಧ್ಯಕ್ಷರ ಪೀಠದತ್ತ ಧಾವಿಸಿ ಘೋಷಣೆ ಕೂಗಿದ್ದರಿಂದ ಸದನವನ್ನು ಮುಂದೂಡಬೇಕಾಯಿತು.
ಇದಕ್ಕೂ ಮುನ್ನ ಬ್ಯಾಂಕ್ ಎಟಿಎಂಗಳ ಮುಂದೆ ಹಣಕ್ಕಾಗಿ ಕಾಯುವ ವೇಳೆ ಮೃತಪಟ್ಟವರ ಆತ್ಮಕ್ಕೆ ಶಾಂತಿ ಕೋರಿ ಎರಡು ನಿಮಿಷಗಳ ವೌನ ಆಚರಿಸಿದರು. ಇದನ್ನು ಖಂಡಿಸಿ ಬಿಜೆಪಿ ಶಾಸಕ ಜಗದೀಶ್ ಪ್ರಧಾನ್ ಹಾಗೂ ಗುಪ್ತ ಸಭಾತ್ಯಾಗ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X