Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೋಟು ವಿನಿಮಯಕ್ಕೆ ಬ್ಯಾಂಕ್‌ಗೆ ಬಂದ ಮೋದಿ...

ನೋಟು ವಿನಿಮಯಕ್ಕೆ ಬ್ಯಾಂಕ್‌ಗೆ ಬಂದ ಮೋದಿ ತಾಯಿ

ವಾರ್ತಾಭಾರತಿವಾರ್ತಾಭಾರತಿ16 Nov 2016 12:20 AM IST
share

ಅಹ್ಮದಾಬಾದ್, ನ.15: ಭ್ರಷ್ಟಾಚಾರದ ವಿರುದ್ಧ ಹೋರಾಡಲು ದೇಶದ ಜನ ಸಂಕಷ್ಟ ಸಹಿಸಿಕೊಳ್ಳಬೇಕು ಎಂದು ಪ್ರಧಾನಿ ಕರೆ ನೀಡಿದ ಮರುದಿನ ನರೇಂದ್ರ ಮೋದಿಯವರ ತಾಯಿ 95 ವರ್ಷದ ಹೀರಾಬೆನ್ ಗುಜರಾತ್‌ನ ಗಾಂಧಿನಗರ ಬ್ಯಾಂಕ್ ಶಾಖೆಗೆ ಆಗಮಿಸಿ, ಚಲಾವಣೆ ರದ್ದಾದ ನೋಟುಗಳನ್ನು ಹೊಸ ನೋಟಿಗೆ ವಿನಿಮಯ ಮಾಡಿಕೊಂಡರು. ಪ್ರಧಾನಿ ಹೇಳಿಕೆ ಹಿನ್ನೆಲೆಯಲ್ಲಿ ಜನ ಬ್ಯಾಂಕ್ ಶಾಖೆ ಹಾಗೂ ಎಟಿಎಂಗಳ ಮುಂದೆ ಉದ್ದುದ್ದ ಸಾಲಿನಲ್ಲಿ ನಿಂತಿದ್ದರೆ, ಪ್ರಧಾನಿ ತಾಯಿ ತಮ್ಮ ನಿವಾಸದ ಪಕ್ಕದ ಖಾಸಗಿ ಬ್ಯಾಂಕಿಗೆ ಗಾಲಿಕುರ್ಚಿಯಲ್ಲಿ ಆಗಮಿಸಿದರು. ಅವರು ತಮ್ಮ ಸರದಿ ಬರುವವರೆಗೂ ಸಾಲಿನಲ್ಲಿ ನಿಂತು 500 ರೂಪಾಯಿ ಮುಖಬೆಲೆಯ 4,500 ರೂಪಾಯಿ ವೌಲ್ಯದ ನೋಟು ವಿನಿಮಯ ಮಾಡಿಕೊಂಡರು.

ಬಳಿಕ ಹೀರಾಬೆನ್ ಹೊಸ 2,000 ರೂಪಾಯಿ ನೋಟಿನೊಂದಿಗೆ ಫೋಟೊಗಳಿಗೆ ಪೋಸ್ ನೀಡಿದರು. ಅವರು ಬ್ಯಾಂಕಿನಿಂದ ಹೊರಬರುತ್ತಿದ್ದಂತೆ ಪತ್ರಕರ್ತರು ಅವರನ್ನು ಸುತ್ತುವರಿದರು. ಕಿರಿಯ ಮಗ ಪಂಕಜ್ ಮೋದಿ ಜೊತೆ ಅವರು ವಾಸಿಸುತ್ತಾರೆ. ಮೋದಿ ಕಳೆದ ಸೆಪ್ಟಂಬರ್ 17ರಂದು ತಾಯಿಯ ಮನೆಗೆ ಭೇಟಿ ನೀಡಿದ್ದರು.
ನಿನ್ನೆ ಉತ್ತರ ಪ್ರದೇಶದಲ್ಲಿ ಭಾರೀ ಜನ ಸ್ತೋಮವನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಜನರ ಕಷ್ಟದ ಅರಿವು ನನಗಿದೆ. ಆದರೆ ದೀರ್ಘಾ ವಧಿಯ ಒಳ್ಳೆಯದಕ್ಕಾಗಿ ಜನ ಇನ್ನೂ 50 ದಿನ ಬವಣೆ ಎದುರಿಸಬೇಕಾಗುತ್ತದೆ ಎಂದು ಹೇಳಿದ್ದರು.
ಇದುವರೆಗೆ ಬ್ಯಾಂಕುಗಳಲ್ಲಿ ಸುಮಾರು 45 ಶತಕೋಟಿ ಡಾಲರ್ ವೌಲ್ಯದ ನೋಟುಗಳು ಬ್ಯಾಂಕ್‌ಗಳಲ್ಲಿ ಮೊದಲ ಐದು ದಿನಗಳಲ್ಲಿ ಠೇವಣಿಯಾಗಿವೆ.
ಪರಿಸ್ಥಿತಿ ಸುಲಲಿತಗೊಳಿಸುವ ಸಲುವಾಗಿ ಸರಕಾರ ನಿನ್ನೆ ವಾರದ ಅವಧಿಯಲ್ಲಿ ಪಡೆಯಬಹುದಾದ ಮೊತ್ತವನ್ನು 24 ಸಾವಿರ ರೂಪಾಯಿಗಳಿಗೆ ಹಾಗೂ ವಿನಿಮಯ ಮೊತ್ತವನ್ನು 4,500 ರೂಪಾಯಿಗೆ ಹೆಚ್ಚಿಸಿದೆ.

..................

ಜಾಗತಿಕ ಆರ್ಥಿಕ ಹಿಂಜರಿತದ ದಿನಗಳಲ್ಲಿ ಭಾರತಕ್ಕೆ ಕಪ್ಪುಹಣ ನೆರವಾಗಿತ್ತು: ಅಖಿಲೇಶ್
ಲಕ್ನೋ,ನ.15: ಆರ್ಥಿಕ ಹಿಂಜರಿತದ ದಿನಗಳಲ್ಲಿ ಕಪ್ಪುಹಣವು ಭಾರತದ ಆರ್ಥಿಕತೆಗೆ ಬಹಳಷ್ಟು ಸಹಾಯ ಮಾಡಿದೆಯೆಂದು ಹೇಳುವ ಮೂಲಕ ಕಪ್ಪುಹಣದ ಬಗ್ಗೆ ಉತ್ತರಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ವಿವಾದದ ಕಿಡಿ ಹೊತ್ತಿಸಿದ್ದಾರೆ.
‘‘ಜಾಗತಿಕ ಆರ್ಥಿಕ ಹಿಂಜರಿತದ ದಿನಗಳಲ್ಲಿ ಕಪ್ಪು ಹಣವು ಭಾರತದ ಆರ್ಥಿಕತೆಗೆ ಸಹಕಾರಿಯಾಗಿತ್ತೆಂದು ಹಲವು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಜಾಗತಿಕ ಆರ್ಥಿಕ ಹಿಂಜರಿತದ ಪರಿಣಾಮ ಭಾರತಕ್ಕೆ ತಟ್ಟಿರಲಿಲ್ಲ. ಯಾಕೆಂದರೆ ಭಾರತದಲ್ಲಿ ಕಪ್ಪುಹಣದ ಪರ್ಯಾಯ ಆರ್ಥಿಕತೆ ಬಲವಾಗಿತ್ತೆಂದು ತಜ್ಞರು ಅಭಿಪ್ರಾಯಿಸಿದ್ದರು’’ ಎಂದು ಅಖಿಲೇಶ್ ಹೇಳಿದ್ದಾರೆ.
ಲಕ್ನೋದಲ್ಲಿ ಮಂಗಳವಾರ ಇಂಡೊ-ಮ್ಯಾನ್ಮಾರ್- ಥೈಲ್ಯಾಂಡ್ ಮೈತ್ರಿ ಕಾರ್ ರ್ಯಾಲಿಗೆ ಚಾಲನೆ ನೀಡಿ ಮಾತನಾಡುತ್ತಿದ್ದ ಅವರು, ಕಪ್ಪುಹಣವನ್ನು ನಾನು ವಿರೋಧಿಸುತ್ತೇನೆ.ನಾನು ಅದನ್ನು ಬಯಸುವುದಿಲ್ಲ’’ ಎಂದರು.
ಕಪ್ಪುಹಣವನ್ನು ಮಟ್ಟಹಾಕುವ ಉದ್ದೇಶದಿಂದ ಕೇಂದ್ರ ಸರಕಾರವು 1 ಸಾವಿರ ರೂ. ಹಾಗೂ 500 ರೂ. ಮುಖಬೆಲೆಯ ಹಳೆಯ ನೋಟುಗಳನ್ನು ಅಮಾನ್ಯಗೊಳಿಸಿರುವ ಹಿನ್ನೆಲೆಯಲ್ಲಿ ಅಖಿಲೇಶ್ ಈ ಅನಿಸಿಕೆಯನ್ನು ವ್ಯಕ್ತಪಡಿಸಿದ್ದಾರೆ.
ಯಾವುದೇ ಸರಕಾರವು ಬಡವರಿಗೆ ತೊಂದರೆ ನೀಡಿದಾಗಲೆಲ್ಲಾ, ಅದಕ್ಕೆ ಜನತೆ ಬಾಗಿಲು ತೋರಿಸಿದ್ದಾರೆ ಎಂದರು. ಈ ಸರಕಾರವು ಜನಸಾಮಾನ್ಯರಿಗೆ ಅಗಾಧವಾದ ನೋವನ್ನುಂಟು ಮಾಡಿದೆಯೆಂದು ಅವರು ಹೇಳಿದ್ದಾರೆ.
ನೋಟುಗಳನ್ನು ಅಮಾನ್ಯಗೊಳಿಸುವುದರಿಂದ ಕಪ್ಪುಹಣವನ್ನು ಮೂಲೋತ್ಪಾಟನೆ ಮಾಡಲು ಸಾಧ್ಯವಿಲ್ಲವೆಂದು ಅಖಿಲೇಶ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X