ಹರೇಕಳದಲ್ಲಿ ಗಾಂಜಾ ಮಾರುತ್ತಿದ್ದ ವ್ಯಕ್ತಿಯ ಬಂಧನ
![ಹರೇಕಳದಲ್ಲಿ ಗಾಂಜಾ ಮಾರುತ್ತಿದ್ದ ವ್ಯಕ್ತಿಯ ಬಂಧನ ಹರೇಕಳದಲ್ಲಿ ಗಾಂಜಾ ಮಾರುತ್ತಿದ್ದ ವ್ಯಕ್ತಿಯ ಬಂಧನ](https://www.varthabharati.in/sites/default/files/images/articles/2016/11/16/ganja 1.jpg)
ಕೊಣಾಜೆ, ನ.14: ಕೊಣಾಜೆ ಠಾಣಾ ವ್ಯಾಪ್ತಿಯ ಹರೇಕಳ ಗ್ರಾಮದ ನ್ಯೂಪಡ್ಪು ಎಂಬಲ್ಲಿ ಗಾಂಜಾ ಮಾರುತ್ತಿದ್ದ ವ್ಯಕ್ತಿಯೊಬ್ಬನನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮಂಜನಾಡಿ ಗ್ರಾಮದ ಮಂಗಳಾಂತಿಯ ಅಬ್ದುಲ್ ರಹಿಮಾನ್ ಎಂಬವರ ಪುತ್ರ ಮಹಮ್ಮದ್(40) ಎಂದು ಗುರುತಿಸಲಾಗಿದೆ.
ಈತ ಹರೇಕಳದ ನ್ಯೂಪಡ್ಪು ಬಳಿ ಗಾಂಜಾವನ್ನು ಮಾರುತ್ತಿದ್ದಾಗ ಕೊಣಾಜೆ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಆರೋಪಿಯಿಂದ 250 ಗ್ರಾಂ ತೂಕದ ಗಾಂಜಾ ಹಾಗೂ ಗಾಂಜಾವನ್ನು ಅಡಗಿಸಿಟ್ಟಿದ ಸ್ಕೂಟರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಕೊಣಾಜೆ ಠಾಣಾ ಇನ್ ಸ್ಪೆಕ್ಟರ್ ಅಶೋಕ್ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದರು. ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
Next Story