Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಜರಂಗಿಗಳಗಳ ಜೊತೆ ಮನೆಗೆ ನುಗ್ಗಿ ಸಾಕು...

ಬಜರಂಗಿಗಳಗಳ ಜೊತೆ ಮನೆಗೆ ನುಗ್ಗಿ ಸಾಕು ಕರು ಎಳೆದೊಯ್ದ ಮೂಡಬಿದ್ರೆ ಪೋಲಿಸರು !

ಉದ್ಯಮಿ ಆರೋಪ

ವಾರ್ತಾಭಾರತಿವಾರ್ತಾಭಾರತಿ16 Nov 2016 5:22 PM IST
share
ಬಜರಂಗಿಗಳಗಳ ಜೊತೆ ಮನೆಗೆ ನುಗ್ಗಿ ಸಾಕು ಕರು ಎಳೆದೊಯ್ದ ಮೂಡಬಿದ್ರೆ ಪೋಲಿಸರು !

ಮೂಡುಬಿದಿರೆ, ನ.16: ತನ್ನ ಮನೆಯ ಆವರಣದಲ್ಲಿ ಕಟ್ಟಿ ಹಾಕಿದ್ದ ಸಾಕು ಕರುವನ್ನು ಕಳ್ಳತನ ಮಾಡಿದ ಕರು ಎಂದು ಭಾವಿಸಿ ಮೂಡುಬಿದಿರೆ ಪೊಲೀಸರು ಬಜರಂಗದಳದ ಕಾರ್ಯಕರ್ತರೊಂದಿಗೆ ಮಧ್ಯರಾತ್ರಿ ವೇಳೆ ತನ್ನ ಮನೆಗೆ ನುಗ್ಗಿ ಬೆದರಿಸಿ, ಮನೆ ಆವರಣದಲ್ಲಿದ್ದ ಸಾಕು ಕರುವನ್ನು ಕೊಂಡೊಯ್ದಿದ್ದಾರೆ ಎಂದು ಬೆಳುವಾಯಿಯಲ್ಲಿ ಹೋಟೆಲ್ ಉದ್ಯಮವನ್ನು ನಡೆಸುತ್ತಿರುವ ಮುಹಮ್ಮದ್ ಶಾಕೀರ್ ಆರೋಪಿಸಿದ್ದಾರೆ.

ಮೂಡುಬಿದಿರೆ ಪ್ರೆಸ್‌ಕ್ಲಬ್‌ನಲ್ಲಿ ಬುಧವಾರ ಶಾಕೀರ್ ಪತ್ರಿಕಾಗೋಷ್ಠಿ ನಡೆಸಿ ಪ್ರಕರಣದ ಬಗ್ಗೆ ಮಾಹಿತಿ ನೀಡಿದರು. ನಾನು ಮನೆಯಲ್ಲಿ 65 ವರ್ಷ ಪ್ರಾಯದ ತಾಯಿ, ಪತ್ನಿ ಹಾಗೂ ಮೂವರು ಮಕ್ಕಳೊಂದಿಗೆ ವಾಸವಾಗಿದ್ದೇನೆ. ಬೆಳುವಾಯಿಯಲ್ಲಿ ಮಾಂಸಹಾರಿ ಹೊಟೇಲ್ ಉದ್ಯಮ ನಡೆಸುತ್ತಿದ್ದು ಹೊಟೇಲ್‌ನಲ್ಲಿ ಉಳಿದಿರುವ ಗಂಜಿ ಹಾಳಾಗಬಾರದೆಂಬ ಉದ್ದೇಶದಿಂದ ಎಂಟು ತಿಂಗಳ ಹಿಂದೆ ಬೆಳುವಾಯಿಯ ವ್ಯಕ್ತಿಯೋರ್ವರಿಂದ ಕರುವನ್ನು ಖರೀದಿಸಿದ್ದೆ. ರವಿವಾರ ಮಧ್ಯರಾತ್ರಿ ಮೂಡುಬಿದಿರೆ ಪೊಲೀಸರು ಬಜರಂಗದಳ ಕಾರ್ಯಕರ್ತರಾದ ಶ್ರೀನಾಥ್, ಭಾಸ್ಕರ್ ಆಚಾರ್ಯ, ರುಚೇತನ್ ಜೈನ್, ಜಗ್ಗ, ಪ್ರಸಾದ್ ಹಾಗೂ ಇತರರ ಸಹಿತ 10 ಮಂದಿಯ ಜೊತೆ ನನ್ನ ಮನೆಗೆ ಬಂದಿದ್ದರು. ಬಜರಂಗದಳ ಕಾರ್ಯಕರ್ತರು ಮನೆ ಆವರಣದೊಳಗಿದ್ದರೆ ಪೊಲೀಸರು ಮನೆಯೊಳಗೆ ನುಗ್ಗಿ ದನದ ಮಾಂಸಕ್ಕಾಗಿ ಮನೆಯನ್ನು ಜಾಲಾಡಿಸಿ ಭಯ ಹುಟ್ಟಿಸಿದ್ದಾರೆ. ಏನು ಸಿಗದಿದ್ದಾಗ ಮನೆ ಆವರಣದಲ್ಲಿದ್ದ ನನ್ನ ಸಾಕು ಕರುವನ್ನು ಕಳವು ಮಾಡಿದ ಕರು ಎಂಬಂತೆ ಅನುಮಾನಗೊಂಡು ಕೊಂಡೊಯ್ದಿದ್ದಾರೆ ಎಂದರು.

ನನ್ನ ಮೇಲೆ ಯಾವುದೇ ಗೋಕಳ್ಳತನ ಅಥವಾ ಗೋಮಾಂಸ ಮಾರಾಟದ ಆರೋಪವಿಲ್ಲದಿದ್ದರೂ ಬಜರಂಗದಳ ಕಾರ್ಯಕರ್ತರ ಒತ್ತಡಕ್ಕೆ ಮಣಿದು ಪೊಲೀಸರು ಮಧ್ಯರಾತ್ರಿ ಮನೆಗೆ ನುಗ್ಗಿ ಮನೆ ಮಂದಿಗೆ ಭಯಹುಟ್ಟಿಸಿ ನಮ್ಮನ್ನು ಕಳ್ಳರಂತೆ ಬಿಂಬಿಸಿದ್ದಾರೆ. ಪೊಲೀಸರ ವರ್ತನೆಯಿಂದ 65 ವರ್ಷ ಪ್ರಾಯದ ನನ್ನ ತಾಯಿ ಹೆದರಿದ್ದು ಇನ್ನೂ ಚೇತರಿಸಿಕೊಂಡಿಲ್ಲ ಎಂದು ಆರೋಪಿಸಿದರು. ನನ್ನ ಹೊಟೇಲ್‌ನಲ್ಲಿ ಗೋಮಾಂಸ ಮಾರಾಟ ಮಾಡುತ್ತಿದ್ದೇನೆಂದು ಪೊಲೀಸರಿಗೆ ಸುಳ್ಳು ಮಾಹಿತಿ ನೀಡಲಾಗಿದೆ. ಅಂತಹ ಕೆಟ್ಟ ಕೆಲಸ ನಾನು ಮಾಡಿಲ್ಲ. ಹೊಟೇಲ್ ಉದ್ಯಮವನ್ನು ನಿಲ್ಲಿಸಲು ಬಜರಂಗದಳ ಕಾರ್ಯಕರ್ತರು ಪೊಲೀಸರನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಹೊಟೇಲ್‌ನಲ್ಲಿ ಸಿಸಿ ಕೆಮರಾ ಅಳವಡಿಸಿದರಿಂದ ನನ್ನ ಮನೆಗೆ ಬಂದು ತೊಂದರೆ ಕೊಡಲಾಗಿದೆ. ಪ್ರಕರಣದ ಬಗ್ಗೆ ನಾನು ಪೊಲೀಸ್ ಕಮಿಷನರ್‌ಗೆ ದೂರು ನೀಡಿರುವುದಾಗಿ ಮುಹಮ್ಮದ್ ಶಾಕೀರ್ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಅಮೀರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X