Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನೋಟಿನ ಸಮಸ್ಯೆ: ಚಿಕಿತ್ಸೆಗೆ ಹಣವಿಲ್ಲದೆ...

ನೋಟಿನ ಸಮಸ್ಯೆ: ಚಿಕಿತ್ಸೆಗೆ ಹಣವಿಲ್ಲದೆ ವೃದ್ಧ ಮೃತ್ಯು

ವೃದ್ಧಾಪ್ಯ ವೇತನ ಬಂದಿದ್ದರೂ ಸಿಗದ ಹಣ

ವಾರ್ತಾಭಾರತಿವಾರ್ತಾಭಾರತಿ16 Nov 2016 6:13 PM IST
share
ನೋಟಿನ ಸಮಸ್ಯೆ: ಚಿಕಿತ್ಸೆಗೆ ಹಣವಿಲ್ಲದೆ ವೃದ್ಧ ಮೃತ್ಯು

ಪಡುಬಿದ್ರೆ, ನ.16: ವೃದ್ದಾಪ್ಯ ವೇತನ ಅಂಚೆ ಕಚೇರಿಗೆ ಬಂದಿದ್ದರೂ ಚಿಲ್ಲರೆಯಿಲ್ಲವೆಂದು ಹಣ ನೀಡದೆ ಇರುವುದರಿಂದ ಅನಾರೋಗ್ಯ ಪೀಡಿತರೊಬ್ಬರು ಚಿಕಿತ್ಸೆಗೂ ಹಣವಿಲ್ಲದೆ ಮೃತಪಟ್ಟ ಘಟನೆ ಬುಧವಾರ ಪಲಿಮಾರಿನಲ್ಲಿ ನಡೆದಿದೆ.

ಮೃತರನ್ನು ಪಲಿಮಾರಿನ ರಾಜೀವ್ ನಗರದ ನಿವಾಸಿ ಮಹಾಬಲ ಪೂಜಾರಿ ಎಂದು ಗುರುತಿಸಲಾಗಿದೆ.

ಮಧುಮೇಹದಿಂದ ಬಳಲುತಿದ್ದ ಮಹಾಬಲ ಪೂಜಾರಿಯವರು ವೃದ್ಧಾಪ್ಯ ಪಿಂಚಣಿ ಹಣಕ್ಕಾಗಿ ಪ್ರತಿದಿನ ಅಂಚೆ ಕಚೇರಿಗೆ ತೆರಳಿ ವಿಚಾರಿಸುತಿದ್ದರು. ಆದರೆ ಪಿಂಚಣಿ ಹಣ ಬಂದರೂ ನಮ್ಮಲ್ಲಿ 500 ರೂ. ಕೊಡಲು ಚಿಲ್ಲರೆ ಸಮಸ್ಯೆ ಇರುವುದಾಗಿ ಅಂಚೆ ಸಿಬ್ಬಂದಿ ಹೇಳುತಿದ್ದರು. ನಿನ್ನೆ ಕೂಡಾ ಅಂಚೆ ಕಚೇರಿಗೆ ತೆರಳಿ ನನಗೆ ಔಷಧಿಗೆ ತುರ್ತಾಗಿ ಹಣದ ಅವಶ್ಯಕತೆ ಇದೆ ಎಂದು ಹೇಳಿಕೊಂಡಿದ್ದರು. ಆದರೆ ಚಿಲ್ಲರೆ ಸಮಸ್ಯೆ ಇರುವುದರಿಂದ ನಮಗೆ ಕೊಡಲು ಸಾಧ್ಯವಿಲ್ಲ ಎಂದು ಅಂಚೆ ಸಿಬ್ಬಂದಿ ಹೇಳಿದ್ದರು ಎಂದು ಸ್ಥಳೀಯರು ಆರೋಪಿಸಿದ್ದಾರೆ.

ನನಗೆ ಆಸ್ಪತ್ರೆಗೆ ಹೋಗಬೇಕಾಗಿದ್ದು, ಹಣದ ಅವಶ್ಯಕತೆ ಇದೆ. ಪಿಂಚಣಿ ಹಣವನ್ನು ಚಿಲ್ಲರೆ ಇಲ್ಲದೆ ಇರುವುದರಿಂದ ಪಡೆಯಲು ಸಾಧ್ಯವಾಗುತಿಲ್ಲ ಎಂದು ಸ್ಥಳೀಯರಲ್ಲಿ ಹೇಳಿಕೊಂಡಿದ್ದರು. ಈ ವಿಷಯವನ್ನು ಸ್ಥಳೀಯರು ನನ್ನ ಗಮನಕ್ಕೆ ತಂದಿದ್ದರು. ಅದರಂತೆ 108ನ್ನು ತರಿಸಿ ಉಡುಪಿಯ ಆಸ್ಪತ್ರೆಗೆ ಸೇರಿಸಲು ಮುಂದಾಗಿದ್ದೆವು. ಅಷ್ಟರಲ್ಲೇ ಅವರು ತನ್ನ ಮನೆಯಲ್ಲಿ ನಿಧನರಾದರು ಎಂದು ತಾಲೂಕು ಪಂಚಾಯತ್ ಸದಸ್ಯ ದಿನೇಶ್ ಪಲಿಮಾರು ಹೇಳಿದರು.

ವೃದ್ಯಾಪ್ಯ ವೇತನವನ್ನೇ ನಂಬಿ ಜೀವನ ನಡೆಸುತ್ತಿರುವ ಬಡವರನ್ನು ಅಂಚೆ ಕಚೇರಿಯಲ್ಲಿ ಚಿಲ್ಲರೆ ಸಮಸ್ಯೆ ಇದೆ ಎಂದು ಹೇಳಿ ಅವರನ್ನು ಅಲೆದಾಡಿಸುವುದು ಸರಿಯಲ್ಲ. ಈಗಾಗಲೇ ವೃದ್ದಾಪ್ಯ ವೇತನ ಬಿಡುಗಡೆಯಾಗಿದ್ದರೂ ಹಣ ನೀಡಲು ಚಿಲ್ಲರೆ ಸಮಸ್ಯೆ ಎಂಬ ನೆಪ ಒಡ್ಡುವುದು ಸರಿಯಲ್ಲ. ಕೂಡಲೇ ಅಂಚೆ ಕಚೇರಿಯಲ್ಲಿ ವೃದ್ದಾಪ್ಯ ವೇತನವನ್ನು ಬಿಡುಗಡೆಗೊಳಿಸಬೇಕು ಎಂದು ದಿನೇಶ್ ಪಲಿಮಾರು ಆಗ್ರಹಿಸಿದ್ದಾರೆ.

ಮೃತರು ತನ್ನ ಪತ್ನಿಯೊಂದಿಗೆ ಜೀವನ ನಡೆಸುತಿದ್ದರು. ಇವರು ಅನಾರೋಗ್ಯ ಪೀಡಿತರಾಗಿದ್ದು, ಇಬ್ಬರೂ ವೃದ್ದಾಪ್ಯ ವೇತನವನ್ನು ನಂಬಿ ಜೀವನ ಸಾಗಿಸುತಿದ್ದರು ಎಂದು ತಿಳಿದುಬಂದಿದೆ.

ಸ್ಥಳೀಯ ತಾಲೂಕು ಪಂಚಾಯತ್ ಸದಸ್ಯ ದಿನೇಶ್ ಪಲಿಮಾರು, ಗ್ರಾಮ ಪಂಚಾಯತ್ ಅಧ್ಯಕ್ಷ ಜಿತೇಂದ್ರ ಪುರ್ಟಾಡೋ, ಸದಸ್ಯ ಅಬ್ದುಲ್ಲಾ ಮೃತರ ಅಂತಿಮ ವಿಧಿವಿಧಾನಕ್ಕೆ ಸಹಕರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X