Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಿದೇಶದಲ್ಲಿ ಸಿಲುಕಿಕೊಂಡ ಕಾರವಾರ ಯುವಕ :...

ವಿದೇಶದಲ್ಲಿ ಸಿಲುಕಿಕೊಂಡ ಕಾರವಾರ ಯುವಕ : ತಾಯ್ನಡಿಗೆ ಕರೆಸಿಕೊಳ್ಳಲು ಮೊರೆ

ವಾರ್ತಾಭಾರತಿವಾರ್ತಾಭಾರತಿ16 Nov 2016 10:59 PM IST
share
ವಿದೇಶದಲ್ಲಿ ಸಿಲುಕಿಕೊಂಡ ಕಾರವಾರ ಯುವಕ : ತಾಯ್ನಡಿಗೆ ಕರೆಸಿಕೊಳ್ಳಲು ಮೊರೆ

ಕಾರವಾರ, ನ.16: ಉದ್ಯೋಗಕ್ಕೆಂದು ವಿದೇಶಕ್ಕೆ ತೆರಳಿದ್ದ ಯುವಕನೋರ್ವ ತೊಂದರೆಗೆ ಸಿಲುಕಿ ಸ್ವದೇಶ್ಕಕೆ ಹಿಂದಿರುಗಲು ಸಾಧ್ಯವಾಗದೆ ಕಂಗಾಲಾಗಿದ್ದಾರೆ. ಅವರನ್ನು ತಾಯ್ನಾಡಿಗೆ ಕರೆಸಿಕೊಳ್ಳಲು ಸಹಾಯ ಹಸ್ತ ನೀಡಬೇಕೆಂದು ಜನಶಕ್ತಿ ವೇದಿಕೆಯ ಅಧ್ಯಕ್ಷ ಮಾಧವ ನಾಯಕ ಜಿಲ್ಲಾಡಳಿತಕ್ಕೆ ಕೋರಿಕೊಂಡಿದ್ದಾರೆ. ಕಾರವಾರ ತಾಲೂಕಿನ ಮಲ್ಲಾಪುರದ ವೀಣೇಶ್‌ಬಾಂದೇಕರ್ ಎಂಬ ಯುವಕ 2015ರಲ್ಲಿ ಕುವೈತ್‌ಗೆ ಕೆಲಸಕ್ಕೆಂದು ತೆರಳಿದ್ದರು. ಅಪೇಕ್ಷೆಯ ವೃತ್ತಿ ಸಿಗದೆ, ಸಿಕ್ಕ ನೌಕರಿಯಲ್ಲಿ ಸಮಯಕ್ಕೆ ಸರಿಯಾಗ ಸಂಬಳವಿಲ್ಲದೆ ಊಟ, ಇಲ್ಲದೆ ತೊಂದರೆ ಅನುಭವಿಸುತ್ತಿದ್ದಾರೆ.
 ಈ ಮಧ್ಯೆ ವೀಣೇಶ್ ಅವರ ಆರೋಗ್ಯ ಸ್ಥಿತಿಯ ಹದಗೆಟ್ಟಿದ್ದು ನೌಕರಿ ನೀಡಿದ ಮಾಲಕ ಸೂಕ್ತ ಚಿಕಿತ್ಸೆ ಒದಗಿಸುವಲ್ಲಿ ಹಿಂದೇಟು ಹಾಕುತ್ತಿದ್ದಾನೆ. ತಮಗೆ ಕಿಡ್ನಿ ಭಾಗದಲ್ಲಿ ನೋವು ಕಾಣಿಸಿಕೊಂಡಿದ್ದು ಸರಿಯಾಗಿ ಚಿಕಿತ್ಸೆ ಕೊಡಿಸುತ್ತಿಲ್ಲ. ಸ್ವದೇಶಕ್ಕೆ ಮರಳಲು ತನಗೆ ಸಹಾಯ ಮಾಡಿ ಎಂದು ಮಾಧವ ನಾಯಕ ಅವರ ವಾಟ್ಸ್‌ಆ್ಯಪ್‌ಗೆ ಸಂದೇಶಗಳನ್ನು ಕಳುಹಿಸಿ ಎಲ್ಲ ಮಾಹಿತಿಗಳನ್ನು ಕಳುಹಿಸಿದ್ದಾರೆ.
ಸರಿಯಾಗಿ ಸಂಬಳ ಸಿಗದಿದ್ದರೂ ಕೆಲಸ ಮಾಡಿಸಿಕೊಳ್ಳ ಲಾಗುತ್ತಿದೆ. ಒತ್ತಾಯ ಪೂರ್ವಕವಾಗಿ ಬೇರೆ ಬೇರೆ ಕೆಲಸಗಳನ್ನು ಮಾಡಿಸಲಾಗುತ್ತಿದೆ. ಭಾರತಕ್ಕೆ ಮರಳುವ ಯತ್ನ ನಡೆಸಿದಲ್ಲಿ ಸುಳ್ಳು ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸುವುದಾಗಿ ಬೆದರಿಕೆ ಒಡ್ಡುತ್ತಿರುವ ಬಗ್ಗೆ ದ್ವನಿ ಮುದ್ರಣ ಹಾಗೂ ಲಿಖಿತ ಸಂದೇಶವನ್ನು ವೀಣೇಶ್ ಬಾಂದೇಕರ್ ರವಾನಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಮೆಯಲ್ಲಿ ಬಡತನ ಇದ್ದ ಕಾರಣ ಉದ್ಯೋಗಕ್ಕಾಗಿ ವಿದೇಶಕ್ಕೆ ತೆರಳಿದ್ದು, ಇಲ್ಲಿನ ಪರಿಸ್ಥಿತಿ ಸರಿಯಾಗಿಲ್ಲ. ಹಿಂದೊಮ್ಮೆ ಸಣ್ಣ ಪ್ರಮಾಣದಲ್ಲಿ ಕಾರು ಅಪಘಾತವಾದಾಗ 60 ಸಾವಿರ ವಸೂಲಿ ಮಾಡಿದರು. ಸದ್ಯ ಮಾಸಿಕ 1,700  ೂ. ವೇತನ ನೀಡುತ್ತಿದ್ದಾರೆ. ನೀಡುತ್ತಿರುವ ವೇತನ ಇಲ್ಲಿ ಜೀವನ ನಿರ್ವಹಣೆಗೆ ಸಾಲುತ್ತಿಲ್ಲ. ಕೆಲಸಕ್ಕೆ ಸೇರುವ ಸಂದರ್ಭದಲ್ಲಿ 23 ಸಾವಿರ ರೂ. ವೇತನ ನೀಡುವುದಾಗಿ ಗೋವಾ ಮೂಲದ ಏಜೆನ್ಸಿ ನಂಬಿಸಿ ಕುವೈತ್‌ಗೆ ಕರೆಸಿಕೊಳ್ಳಲಾಗಿತ್ತು ಎಂದು ಅಳಲು ತೋಡಿಕೊಂಡಿದ್ದು, ತನ್ನನ್ನು ಭಾರತಕ್ಕೆ ಕರೆಯಿಸಿಕೊಳ್ಳಲು ಸಹಕರಿಸಿ ಎಂದು ಒತ್ತಾಯಿಸಿರುವುದಾಗಿ ಅವರು ಪತ್ರಿಕೆಗೆ ತಿಳಿಸಿದ್ದಾರೆ.
ಈ ಬಗ್ಗೆ ಮಾಧವ ನಾಯಕ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿ ಯುವಕ ಪಡುತ್ತಿರುವ ಸಮಸ್ಯೆಗಳ ಬಗ್ಗೆ ತಿಳಿಸಿದ್ದಾರೆ. ಅಪರ ಜಿಲ್ಲಾಧಿಕಾರಿ ಎಚ್.ಪ್ರಸನ್ನಕುಮಾರ್ ಅವರು ಮನವಿ ಸ್ವೀಕರಿಸಿ ಈ ಈ ಬಗ್ಗೆ ಭಾರತೀಯ ರಾಯಭಾರಿ ಕಚೇರಿಗೆ ಕಳುಹಿಸಲಾಗುವುದು. ಜಿಲ್ಲಾಡಳಿತದಿಂದ ಆಗುವಷ್ಟು ಸಹಾಯ ಮಾಡುವುದಾಗಿ ರವಸೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X