Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನೋಟ್ ರದ್ದು: ಶುಭ ಸಮಾರಂಭಗಳಿಗೆ ಕುತ್ತು!

ನೋಟ್ ರದ್ದು: ಶುಭ ಸಮಾರಂಭಗಳಿಗೆ ಕುತ್ತು!

ವಾರ್ತಾಭಾರತಿವಾರ್ತಾಭಾರತಿ16 Nov 2016 11:00 PM IST
share

ಶಿವಮೊಗ್ಗ, ನ.16: ಕೇಂದ್ರ ಸರಕಾರವು ದಿಢೀರ್ ಆಗಿ 500 ಹಾಗೂ 1000 ರೂ. ಮುಖಬೆಲೆಯ ಹಳೆಯ ನೋಟ್‌ಗಳ ಚಲಾವಣೆ ರದ್ದುಗೊಳಿಸಿದ ನಂತರ ದೇಶಾದ್ಯಂತ ಅಘೊೀಷಿತ ಆರ್ಥಿಕ ತುರ್ತು ಪರಿಸ್ಥಿತಿ ಹೇರಿದ ಅನುಭವ ನಾಗರಿಕರದ್ದಾಗಿದೆ. ಬಹುತೇಕ ಎಲ್ಲ ವರ್ಗದ ನಾಗರಿಕರು ಒಂದಲ್ಲ ಒಂದು ರೀತಿಯಲ್ಲಿ ನೋಟ್ ರದ್ದಿನ ಎಫೆಕ್ಟ್‌ಗೆ ತುತ್ತಾಗಿದ್ದಾರೆ!
ಪ್ರಸ್ತುತ ನೆಯುತ್ತಿರುವ ಮದುವೆ ಮತ್ತಿತರ ಶುಭ ಸಮಾರಂಭಗಳ ಮೇಲೆಯೂ ನೋಟ್ ರದ್ದಿನ ಪರಿಣಾಮಗಳು ಬೀರಲಾರಂಭಿಸಿದ್ದು, ಭಾರೀ ದೊಡ್ಡ ಪ್ರಮಾಣದ ವಿಘ್ನ ತಂದೊಡ್ಡುತ್ತಿದೆ. ಕೈಯಲ್ಲಿ ಹಣವಿದ್ದರೂ ಖರ್ಚು ಮಾಡಲಾಗದ ಸ್ಥಿತಿ ಹಲವರದ್ದಾಗಿದೆ. ಹಣದ ತೊಂದರೆಯಿಂದಾಗಿ ಈಗಾಗಲೇ ನಿಗದಿಯಾಗಿದ್ದ ಮದುವೆ ಮತ್ತಿತರ ಶುಭ ಸಮಾರಂಭಗಳನ್ನು ಕೆಲವರು ಮುಂದೂಡುತ್ತಿರುವ ಮಾಹಿತಿಗಳು ಕೂಡ ಕೇಳಿಬರುತ್ತಿವೆ. ಮತ್ತೆ ಕೆಲವರು ಸಾಕಷ್ಟು ಶ್ರಮ ವಹಿಸಿ, ನಿಗದಿತ ದಿನಾಂಕಗಳಂದೇ ಶುಭ ಸಮಾರಂಭಗಳನ್ನು ನಡೆಸುತ್ತಿದ್ದಾರೆ. ಅದರಲ್ಲಿಯೂ ಬಡ- ಮಧ್ಯಮ ವರ್ಗದವರ ಗೋಳು ಹೇಳತೀರದಾಗಿದ್ದು, ತೀ್ರ ಆರ್ಥಿಕ ತೊಂದರೆಯ ನಡುವೆಯೇ ಕಷ್ಟಪಟ್ಟು ಹಣ ಹೊಂದಿಸಿ ಶುಭ ಸಮಾರಂಭ ನಡೆಸಿ ನಿಟ್ಟುಸಿರು ಬಿಡುತ್ತಿದ್ದಾರೆ!
ತೊಂದರೆ: ಮದುವೆ ಹಾಗೂ ಶುಭ ಸಮಾರಂಭ ಆಯೋ ಜಿಸುವ ಬಹುತೇ ಕರು ಮೊದಲೇ ಹಣ ಹೊಂದಿಸಿಟ್ಟುಕೊಳ್ಳುತ್ತಾರೆ. ಅಗತ್ಯಕ್ಕೆ ಅನುಗುಣವಾಗಿ ಖರ್ಚು ಮಾಡುತ್ತಿರುತ್ತಾರೆ. ಹೆಚ್ಚಿನವರ ಬಳಿ 500, 1000 ರೂ. ಮುಖಬೆಲೆಯ ನೋಟ್‌ಗಳೇ ಹೆಚ್ಚಿರುತ್ತವೆ. ಕೇಂದ್ರ ಸರಕಾರ ದಿಢೀರ್ ಆಗಿ ಈ ನೋಟ್‌ಗಳ ಚಲಾವಣೆ ರದ್ದುಗೊಳಿಸಿದ್ದರಿಂದ ಆಯೋಜಕರನ್ನು ತಬ್ಬಿಬ್ಬುಗೊಳ್ಳುವಂತೆ ಮಾಡಿದೆ!
ಡಿಸೆಂಬರ್ ತಿಂಗಳಲ್ಲಿ ಮಗಳ ಮದುವೆಗೆ ದಿನಾಂಕ ನಿರ್ಧರಿಸಲಾಗಿತ್ತು. ಈಗಾಗಲೇ ಮದುವೆಯ ಪೂರ್ವಭಾವಿ ಸಿದ್ಧತೆ ಕೂಡ ಆರಂಭಿಸಲಾಗಿತ್ತು. ಇದೀಗ 500, 1000 ರೂ. ನೋಟ್‌ಗಳ ಚಲಾವಣೆ ರದ್ದುಗೊಳಿಸಿದ ನಂತರ ಕೈಯಲ್ಲಿ ಹಣವಿದ್ದರೂ ಖರ್ಚು ಮಾಡಲಾಗದ ಸ್ಥಿತಿ ತಮ್ಮದಾಗಿದೆ. ದುಡ್ಡಿಲ್ಲದೆ ಯಾವುದೇ ಕೆಲಸ ಕಾರ್ಯಗಳು ನಡೆಸಲಾಗದಂತಾಗಿದೆ. ತಮ್ಮ ಬಳಿಯಿರುವ ಹಣ ಬ್ಯಾಂಕ್‌ಗೆ ಜಮಾ ಮಾಡಿದರೂ ಏಕಕಾಲಕ್ಕೆ ಈ ಹಣ ಬಿಡಿಸಿಕೊಳ್ಳಲು ಆಗುವುದಿಲ್ಲ. ಸ್ನೇಹಿತರು, ಸಂಬಂಧಿಗಳ ಬಳಿ ಸಾಲ ಪಡೆಯೋಣವೆಂದರೆ ಹಳೆಯ ನೋಟ್ ನೀಡುವುದಾಗಿ ಹೇಳುತ್ತಾರೆ. ಏನು ಮಾಡಬೇಕು ಎನ್ನುವುದೇ ಗೊತ್ತಾಗುತ್ತಿಲ್ಲ. ವರನ ಮನೆಯವರ ಪರಿಸ್ಥಿತಿಯೂ ಇದೇ ರೀತಿಯದ್ದಾಗಿದೆ. ಈ ಹಿನ್ನೆಲೆಯಲ್ಲಿ ಮದುವೆ ಮುಂದೂಡುವ ಚಿಂತನೆ ನಡೆಸಿದ್ದೇವೆ. ಮುಂದೇನಾಗುವುದೋ ಕಾದು ನೋಡಬೇಕಾಗಿದೆ ಎಂದು ಹೆಸರು ಬಹಿರಂಗಪಡಿಸಲಿಚ್ಛಿಸದ ವ್ಯಕ್ತಿಯೋರ್ವರು ತಮ್ಮ ಅಳಲು ತೋಡಿಕೊಳ್ಳುತ್ತಾರೆ.
ರದ್ದು: ಶುಭ ಸಮಾರಂಭಗಳ ನಿಮಿತ್ತ ಈಗಾಗಲೇ ಮುಂಗಡವಾಗಿ ಬುಕ್ ಮಾಡಲಾಗಿದ್ದ ಕಲ್ಯಾಣ ಮಂದಿರ, ಪಾರ್ಟಿ ಹಾಲ್‌ಗಳ ಬುಕ್ಕಿಂಗ್‌ನ್ನು ಕೆಲ ಆಜಕರು ರದ್ದು ಮಾಡುತ್ತಿದ್ದಾರೆ. ಕೆಲವರು ರದ್ದುಗೊಳಿಸಲಾಗಿರುವ 500, 1000 ರೂ. ನೋಟ್ ಕೊಡಲು ಮುಂದಾಗುತ್ತಿದ್ದರೆ, ಮತ್ತೆ ಕೆಲವರು ಕೆಲ ದಿನಗಳ ನಂತರ ಹಣ ಪಾವತಿಸುವುದಾಗಿ ಮಾಲೀಕರಿಗೆ ಹೇಳುತ್ತಿದ್ದಾರೆ. 
ನೋಟ್ ರದ್ದಿನ ಕಾರಣದಿಂದಲೇ ಕಲ್ಯಾಣ ಮಂದಿರ ಹಾಗೂ ಹೊಟೇಲ್‌ಗಳ ಪಾರ್ಟಿ ಹಾಲ್‌ಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಶುಭ ಸಮಾರಂಭಗಳು ನಡೆಯುತ್ತಿಲ್ಲವಾಗಿದೆ. ಇದನ್ನು ಹೊಟೇಲ್ ಪಾರ್ಟಿ ಹಾಲ್ ವ್ಯವಸ್ಥೆ ಹೊಂದಿರುವ ಮಾಲಕರೊಬ್ಬರು ಖಚಿತ ಪಡಿಸುತ್ತಾರೆ. ಮುಂದಿನ ದಿನಗಳಲ್ಲಿ ಎಲ್ಲವೂ ಸರಿ ಹೋಗುವ ವಿಶ್ವಾಸ ವ್ಯಕ್ತಪಡಿಸುತ್ತಾರೆ’. ಕಡಿಮೆ: ಪ್ರಸ್ತುತ ನಡೆಯುತ್ತಿರುವ ಮದುವೆ ಇತರ ಶುಭ ಸಮಾರಂಭಗಳಿಗೆ ಆಗಮಿಸುತ್ತಿರುವ ಜನರ ಸಂಖ್ಯೆ ಕೂಡ ಕಡಿಮೆಯಾಗಿದೆ. ನಿರೀಕ್ಷಿತ ಪ್ರಮಾಣದಲ್ಲಿ ಜನರು ಕಾರ್ಯಕ್ರಮಗಳಿಗೆ ಆಗಮಿಸುತ್ತಿಲ್ಲ. ಒಟ್ಟಾರೆ ನೋಟ್ ರದ್ದಿನ ಎಫೆಕ್ಟ್ ಶುಭ ಕಾರ್ಯಗಳ ಮೇಲೆಯೂ ಕರಿನೆರಳು ಬೀರಿರುವುದಂತೂ ಸತ್ಯವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X