Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ನೋಟು ರದ್ದು: ಸಂಕಷ್ಟದಲ್ಲಿ ಸೌದಿ...

ನೋಟು ರದ್ದು: ಸಂಕಷ್ಟದಲ್ಲಿ ಸೌದಿ ಉದ್ಯೋಗಿಗಳ ಕುಟುಂಬಗಳು

ವಾರ್ತಾಭಾರತಿವಾರ್ತಾಭಾರತಿ17 Nov 2016 9:05 AM IST
share
ನೋಟು ರದ್ದು: ಸಂಕಷ್ಟದಲ್ಲಿ ಸೌದಿ ಉದ್ಯೋಗಿಗಳ ಕುಟುಂಬಗಳು

ಬೆಹ್ರಾಂಪುರ, ನ.17 : ದೇಶದಲ್ಲಿ ಅಧಿಕ ಮೌಲ್ಯದ ನೋಟುಗಳ ಚಲಾವಣೆಯನ್ನು ರದ್ದುಪಡಿಸಿದ ಕೇಂದ್ರ ಸರಕಾರದ ದಿಢೀರ್ ನಿರ್ಧಾರ ದಿಂದಾಗಿ ಸೌದಿ ಅರೆಬಿಯಾದಲ್ಲಿ ಉದ್ಯೋಗಿಗಳಾಗಿರುವವರ ಕುಟುಂಬಗಳು ಭಾರತದಲ್ಲಿ ಸಂಕಷ್ಟ ಎದುರಿಸುವಂತಾಗಿದೆ.

ರಿಯಾಲ್ ನ ಸಂಪೂರ್ಣ ವಿನಿಮಯ ಮೌಲ್ಯವನ್ನು ಯಾವಾಗ ನೀಡಬಹುದು ಎಂಬ ಬಗ್ಗೆ ಇನ್ನೂ ಹಣ ವರ್ಗಾವಣೆ ಏಜೆನ್ಸಿಗಳಿಗೇ ಖಚಿತತೆ ಇಲ್ಲದ ಕಾರಣದಿಂದ ಈ ಗೊಂದಲ ನಿರ್ಮಾಣವಾಗಿದೆ. ಹೊಸ ನೋಟುಗಳ ಹರಿವು ಇನ್ನೂ ಮಾಮೂಲಿ ಸ್ಥಿತಿಗೆ ಬಾರದಿರುವುದರಿಂದ, ಸೌದಿ ಅರೇಬಿಯಾದ ಹಣವನ್ನೇ ನಂಬಿರುವ ಕುಟುಂಬಗಳು ಸಂಕಷ್ಟ ಎದುರಿಸುವಂತಾಗಿದೆ.

ಬೆಹ್ರಾಂಪುರ ನಿವಾಸಿ ಅಬ್ದುಲ್ ಲತೀಫ್ ಎಂಬುವವರಿಗೆ ಜಾಧುಪುರ ವೆಸ್ಟರ್ನ್ ಯೂನಿಯನ್ ರೋಶ್ನಾರಾ ಏಜೆನ್ಸಿಯಿಂದ 100 ರೂಪಾಯಿಯ ಹತ್ತು ನೋಟುಗಳು ಮಾತ್ರ ಸಿಕ್ಕಿವೆ. ಅವರ ಇಬ್ಬರು ಮಕ್ಕಳಾದ ಮುಸ್ಲಿಂ ಶೇಖ್ ಹಾಗೂ ಹಶೀಬುಲ್ ಶೇಕ್ ಸೌದಿ ಆಸ್ಪತ್ರೆಯೊಂದರ ಉದ್ಯಾನವನದಲ್ಲಿ ಕೆಲಸ ಮಾಡುತ್ತಿದ್ದಾರೆ. ಕಳೆದ ಗುರುವಾರ ಅವರು 30 ಸಾವಿರ ರೂಪಾಯಿ ಮೌಲ್ಯದ ರಿಯಾಲ್ ಗಳನ್ನು ಕಳುಹಿಸಿಕೊಟ್ಟಿದ್ದರು. ಆದರೆ ಕರೆನ್ಸಿ ನೋಟುಗಳ ಲಭ್ಯತೆ ಇಲ್ಲದ್ದರಿಂದ ಕಂತಿನಲ್ಲಿ ಹಣ ಪಾವತಿಸುವುದಾಗಿ ಈ ಸಂಸ್ಥೆ ಇದೀಗ ಹೇಳುತ್ತಿದೆ ಎಂದು ಲತೀಫ್ ವಿವರಿಸಿದ್ದಾರೆ.

ಚಂದ್ಪಾರಾದ ನಸ್ರುಲ್ ಶೇಖ್ ಅವರ ಅಳಿಯ ರಫೀಕ್ ಉಲ್ ಸೌದಿಯಲ್ಲಿ ಖರ್ಜೂರ ತೋಟದಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರು 40 ಸಾವಿರ ರೂಪಾಯಿ ಮೌಲ್ಯದ ರಿಯಾಲ್ ಕಳುಹಿಸಲು ನಿರ್ಧರಿಸಿದ್ದಾರೆ. ಅವರ ಗರ್ಭಿಣಿ ಪತ್ನಿಯನ್ನು ಆಸ್ಪತ್ರೆಗೆ ಸೇರಿಸಲು ತುರ್ತಾಗಿ ಹಣದ ಅವಶ್ಯಕತೆ ಇದ್ದು, ಅವರಿಗೆ ನೀಡಿರುವ ಹೆರಿಗೆ ದಿನಾಂಕಕ್ಕೆ ಇನ್ನು ಐದು ದಿನವಷ್ಟೇ ಬಾಕಿ. ಹಣ ವರ್ಗಾವಣೆ ಏಜೆನ್ಸಿಯನ್ನು ಸಂಪರ್ಕಿಸಿದಾಗ ನಗದು ಕೊರತೆ ಬಗ್ಗೆ ಹೇಳಿದ್ದಾರೆ ಎಂದು ಶೇಖ್ ವಿವರಿಸಿದರು.

ಏಜೆಂಟರು ಕೂಡಾ ಅಸಹಾಯಕರಾಗಿದ್ದು, ಕೆಲ ಗ್ರಾಹಕರು 500 ಹಾಗೂ 1000 ರೂಪಾಯಿ ನೋಟಿನ ಮೂಲಕ 1.85 ಕೋಟಿ ವಾಪಾಸು ಮಾಡಿದ್ದಾರೆ. ಇವುಗಳನ್ನು ಅವರ ಬ್ಯಾಂಕ್ ಖಾತೆಗೆ ಠೇವಣಿ ಮಾಡಲಾಗಿದೆ. ಹಣದ ಲಭ್ಯತೆ ನೋಡಿಕೊಂಡು ವಾಪಾಸು ಮಾಡುವ ಭರವಸೆ ನೀಡಿದ್ದೇವೆ. ದಿನಕ್ಕೆ ಸರಾಸರಿ 20 ಲಕ್ಷ ಮಾತ್ರ ವರ್ಗಾವಣೆಯಾಗುತ್ತಿತ್ತು. ಇದೀಗ ಅದು 50 ಸಾವಿರಕ್ಕೆ ಇಳಿದಿದೆ ಎಂದು ರೋಶನಾರ್ ಪಾಲುದಾರ ಅಬ್ದುಲ್ ಅಝೀಝ್ ಹೇಳುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X