Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ನೊಬೆಲ್ ಪ್ರಶಸ್ತಿ ಸ್ವೀಕರಿಸಲು...

ನೊಬೆಲ್ ಪ್ರಶಸ್ತಿ ಸ್ವೀಕರಿಸಲು ಪುರುಸೊತ್ತಿಲ್ಲದ ಬಾಬ್ ಡೈಲಾನ್ !

ವಾರ್ತಾಭಾರತಿವಾರ್ತಾಭಾರತಿ17 Nov 2016 10:21 AM IST
share
ನೊಬೆಲ್ ಪ್ರಶಸ್ತಿ ಸ್ವೀಕರಿಸಲು ಪುರುಸೊತ್ತಿಲ್ಲದ ಬಾಬ್ ಡೈಲಾನ್ !

ಕೋಪೆನ್ ಹೇಗನ್, ನ.17 : ಅಮೆರಿಕಾದ ಖ್ಯಾತ ಗಾಯಕ ಗೀತ ರಚನಕಾರ ಬಾಬ್ ಡೈಲಾನ್ ಅವರು ಸಾಹಿತ್ಯ ಕ್ಷೇತ್ರದಲ್ಲಿನ ಅನುಪಮ ಸಾಧನೆಗಾಗಿ ಪಡೆದ 2016 ನೇ ಸಾಲಿನ ನೊಬೆಲ್ ಪ್ರಶಸ್ತಿಯನ್ನು ಪಡೆಯಲು  ಡಿಸೆಂಬರ್ 10 ರಂದು ಸ್ಟಾಕ್ಹೋಂ ನಲ್ಲಿ ನೊಬೆಲ್ ಪ್ರಶಸ್ತಿ ಸ್ಥಾಪಕ ಆಲ್ಫ್ರೆಡ್ ನೊಬೆಲ್ ಅವರ ಪುಣ್ಯತಿಥಿಯ ದಿನದಂದು ನಡೆಯುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸುವುದಿಲ್ಲ.
ತಮಗೆ ವೈಯಕ್ತಿಕವಾಗಿ ಪ್ರಶಸ್ತಿ ಸ್ವೀಕರಿಸಬೇಕೆಂಬ ಮನಸ್ಸಿದ್ದರೂ ನನ್ನ ಇತರ ಕೆಲಸಗಳ ಒತ್ತಡದಿಂದ ಅದು ದುರದೃಷ್ಟಕರವಾಗಿ ಸಾಧ್ಯವಾಗುತ್ತಿಲ್ಲವೆಂದು ಡೈಲಾನ್ ತಮಗೆ ಹೇಳಿದ್ದಾರೆಂದು ಸ್ವೀಡಿಶ್ ಅಕಾಡಮಿ ಹೇಳಿದೆ.

ಅಮೆರಿಕಾದ ಗಾಯನ ಪದ್ಧತಿಯಲ್ಲಿ ಕಾವ್ಯಾತ್ಮಕ ಅಭಿವ್ಯಕ್ತಿಗಳನ್ನು ತುಂಬಿಸಿದ್ದಕ್ಕಾಗಿ 75 ವರ್ಷದ ಡೈಲಾನ್ ಅವರನ್ನು ಈ ಪ್ರತಿಷ್ಠಿತ ನೊಬೆಲ್ ಪ್ರಶಸ್ತಿಗಾಗಿ ಅಕ್ಟೋಬರ್ 13 ರಂದು ಆಯ್ಕೆ ಮಾಡಲಾಗಿತ್ತು. ಅವರ ಪರವಾಗಿ ಯಾರು ಪ್ರಶಸ್ತಿ ಸ್ವೀಕರಿಸುತ್ತಾರೆಂಬುದರ ಬಗ್ಗೆ ಯಾವುದೂ ಸ್ಪಷ್ಟವಿಲ್ಲವಾದರೂ ಈ ಬಗ್ಗೆ ಶುಕ್ರವಾರ ಮಾಹಿತಿ ಹೊರಬೀಳುವ ಸಾಧ್ಯತೆಯಿದೆ.

ಬಾಬ್ ಡೈಲಾನ್ ಅವರು ಬರೆದಿರುವ ವೈಯಕ್ತಿಕ ಪತ್ರ ತನಗೆ  ತಲುಪಿದೆ ಹಾಗೂ ತಾನು ಅವರ ನಿರ್ಧಾರವನ್ನು ಗೌರವಿಸುತ್ತೇನೆ ಎಂದು ಸ್ವೀಡಿಶ್ ಅಕಾಡಮಿ ಹೇಳಿದೆಯಲ್ಲದೆ ಪ್ರಶಸ್ತಿ ಸ್ವೀಕರಿಸಲು ಬಾರದೇ ಇರುವುದು ಅಸಹಜವಾದರೂ, ಅಪವಾದವಲ್ಲ ಎಂದು ಹೇಳಿದೆ. ಆದರೂ ಅವರು ಡಿಸೆಂಬರ್ 10 ರಿಂದ ಆರು ತಿಂಗಳೊಳಗೆ ನೀಡಬೇಕಾಗಿರುವ ನೊಬೆಲ್ ಭಾಷಣವನ್ನು ನಾವು  ಎದುರು ನೋಡುತ್ತಿದ್ದೇವೆ, ಎಂದು ಅಕಾಡಮಿ ಹೇಳಿದೆ.

ತಮಗೆ ಪ್ರಶಸ್ತಿ ಬಂದಾಗ ಮೊದಲು ಏನೂ ಪ್ರತಿಕ್ರಿಯಿಸದೇ ಇದ್ದ ಡೈಲಾನ್ ನಂತರ ಈ ಪ್ರಶಸ್ತಿ ತಮ್ಮನ್ನು ಮೂಕನನ್ನಾಗಿಸಿದೆ ಎಂದಿದ್ದರು. ಪ್ರೆಸಿಡೆನ್ಶಿಯಲ್ ಮೆಡಲ್ ಫಾರ್ ಫ್ರೀಡಂ ಸಹಿತ ಹಲವಾರು ಪ್ರಶಸ್ತಿಗಳನ್ನು ಡೈಲಾನ್ ಈಗಾಗಲೇ ಪಡೆದಿದ್ದಾರೆ.
2004 ರಲ್ಲಿ ಆಸ್ಟ್ರಿಯಾದ ನಾಟಕಕಾರ ಹಾಗೂ ಕಾದಂಬರಿಕಾರ ಎಲ್ಫ್ರೀಡ್ ಜೆಲಿನೆಕ್  ಸೋಶಿಯಲ್ ಫೋಬಿಯಾ ನೆಪವೊಡ್ಡಿ ಪ್ರಶಸ್ತಿ ಸ್ವೀಕರಿಸಲು ಹಾಜರಾಗಿರಲಿಲ್ಲ 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X