Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಇಸ್ಲಾಮ್ ವೈಯಕ್ತಿಕ ಕಾನೂನು ಭಾರತದ...

ಇಸ್ಲಾಮ್ ವೈಯಕ್ತಿಕ ಕಾನೂನು ಭಾರತದ ಸಂವಿಧಾನಕ್ಕೆ ಪರ್ಯಾಯವಾದ ವ್ಯವಸ್ಥೆ ಅಲ್ಲ: ಅಬ್ದುಸ್ಸಲಾಮ್ ಪುತ್ತಿಗೆ

ವಾರ್ತಾಭಾರತಿವಾರ್ತಾಭಾರತಿ17 Nov 2016 11:09 PM IST
share
ಇಸ್ಲಾಮ್ ವೈಯಕ್ತಿಕ ಕಾನೂನು ಭಾರತದ ಸಂವಿಧಾನಕ್ಕೆ ಪರ್ಯಾಯವಾದ ವ್ಯವಸ್ಥೆ ಅಲ್ಲ: ಅಬ್ದುಸ್ಸಲಾಮ್ ಪುತ್ತಿಗೆ

ಉಡುಪಿ, ನ.17: ಇಸ್ಲಾಮ್ ವೈಯಕ್ತಿಕ ಕಾನೂನು ಎಂಬುದು ಭಾರತದ ಸಂವಿಧಾನಕ್ಕೆ ಪರ್ಯಾಯವಾದ ವ್ಯವಸ್ಥೆ ಅಲ್ಲ. ಇದು ಬಹಳ ಸೀಮಿತವಾಗಿ ಕುಟುಂಬದಲ್ಲಿನ ಸಮಸ್ಯೆಗಳಿಗೆ ಪರಿಹಾರಕ್ಕೆ ಇರುವ ವಿನಾಯತಿಯಾಗಿದೆ ಎಂದು ವಾರ್ತಾಭಾರತಿ ಪತ್ರಿಕೆಯ ಸಂಪಾದಕ ಅಬ್ದುಸ್ಸಲಾಮ್ ಪುತ್ತಿಗೆ ಹೇಳಿದ್ದಾರೆ.

ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ವತಿಯಿಂದ ಗುರುವಾರ ಉಡುಪಿ ದುರ್ಗಾ ಇಂಟರ್‌ನ್ಯಾಶನಲ್ ಹೊಟೇಲಿನ ಸಭಾಂಗಣದಲ್ಲಿ ಆಯೋಜಿಸಲಾದ ಸ್ನೇಹ ಸಂವಾದ ಕಾರ್ಯಕ್ರಮದಲ್ಲಿ ‘ಸಮಾನ ನಾಗರಿಕ ಸಂಹಿತೆ ಮತ್ತು ವೈಯಕ್ತಿಕ ಕಾನೂನು’ ಕುರಿತು ಅವರು ವಿಷಯ ಮಂಡಿಸಿ ದರು.
ಭಾರತದಲ್ಲಿರುವ ಶೇ.99ರಷ್ಟು ಕಾನೂನು ಎಲ್ಲ ನಾಗರಿಕರಿಗೂ ಸಮಾನ ವಾಗಿ ಅನ್ವಯವಾಗುತ್ತದೆ. ಇದರಲ್ಲಿ ವಿವಾಹ, ವಿಚ್ಛೇಧನ, ಆಸ್ತಿ ಹಂಚಿಕೆ ಸೇರಿದಂತೆ ಕೆಲವು ಸೀಮಿತ ವಿಚಾರಗಳನ್ನು ಇಸ್ಲಾಮ್ ಧರ್ಮ ಎಂಬ ಕಾರಣಕ್ಕೆ ಮುಸ್ಲಿಮರಿಗೆ ವಿನಾಯಿತಿ ನೀಡಲಾಗಿದೆ. ಆದರೆ ಇದರ ವ್ಯಾಪ್ತಿ ಮಾತ್ರ ಬಹಳ ಸಣ್ಣದ್ದಾಗಿದೆ ಎಂದರು.

ತಲಾಕ್ ವಿಚಾರದ ಚರ್ಚೆಯಲ್ಲಿ ಇಂದು ಮಹಿಳೆಯರ ಬಗ್ಗೆ ಹೆಚ್ಚು ಹೆಚ್ಚು ಅನುಕಂಪ ವ್ಯಕ್ತವಾಗುತ್ತಿದೆ. ಆದರೆ ಈ ದೇಶದಲ್ಲಿ ಪ್ರತಿ 16ನಿಮಿಷಕ್ಕೆ ಒಂದು ಅತ್ಯಾಚಾರ, ಪ್ರತಿ ನಾಲ್ಕು ನಿಮಿಷಕ್ಕೆ ಮಹಿಳಾ ದೌರ್ಜನ್ಯ ಸೇರಿದಂತೆ ಪ್ರತಿ ಒಂದು ಗಂಟೆಗೆ 26 ಗಂಭೀರ ಅಪರಾಧ ಪ್ರಕರಣಗಳು ಮಹಿಳೆಯರಿಗೆ ಸಂಬಂಧಿಸಿ ನಡೆಯುತ್ತಿದೆ. ಇಷ್ಟಾದರೂ ಇಂದು ಈ ವಿಷಯಗಳ ಬಗ್ಗೆ ಎಲ್ಲೂ ಈ ರೀತಿಯ ಗಂಭೀರ ಚರ್ಚೆಗಳು ನಡೆಯುತ್ತಿಲ್ಲ ಎಂದು ಅವರು ತಿಳಿಸಿದರು.

ಯಾವುದೇ ಸಮಸ್ಯೆಯ ಕುರಿತು ಊಹೆ ಮಾಡದೆ ಅದನ್ನು ಅಧ್ಯಯನದ ಮೂಲಕ ತಿಳಿದುಕೊಳ್ಳಬೇಕು. ಮುಸ್ಲಿಮ್ ಸಮುದಾಯದಲ್ಲಿ ತಲಾಕ್ ಸಮಸ್ಯೆ ಇರುವುದು ನಿಜ. ಆದರೆ ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಸರಿಯಲ್ಲ. ತಲಾಕ್ ಸಮಸ್ಯೆ ಇತ್ಯರ್ಥಕ್ಕೆ ಇಸ್ಲಾಮ್ ಧರ್ಮದೊಳಗೆ ಪರಿಹಾರವಿದೆ. ಅದರ ಆಧಾರದಲ್ಲಿ ಅದನ್ನು ಬಗೆಹರಿಸಲು ಸಾಧ್ಯ ಎಂದು ಅವರು ಹೇಳಿದರು.

ತಲಾಕ್‌ನ್ನು ಯಾವುದೇ ಮುಸ್ಲಿಮ್ ಬೆಂಬಲಿಸುವುದಿಲ್ಲ. ಅದು ಅನಿಷ್ಟ ಎಂಬುದಾಗಿ ಒಪ್ಪುತ್ತಾರೆ. ತಲಾಕ್‌ನ್ನು ಮೊತ್ತ ಮೊದಲ ಬಾರಿಗೆ ಪರಿಚಯಿ ಸಿದ್ದು ಇಸ್ಲಾಮ್ ಧರ್ಮ. ಇದು ಮಹಿಳೆಯರನ್ನು ದಂಡಿಸಲು ಬಂದ ಕಾನೂನು ಅಲ್ಲ. ಇಸ್ಲಾಮ್ ಧರ್ಮದಲ್ಲಿ ವಧು ದಕ್ಷಿಣೆಯಂತಹ ವ್ಯವಸ್ಥೆ ಇರುವಾಗ ಇದು ಪುರುಷರನ್ನು ದಂಡಿಸುವ ನಿಯಮ ಎಂಬುದಾಗಿ ನಾವು ಅರ್ಥ ಮಾಡಿಕೊಳ್ಳಬಹುದು ಎಂದರು.

ಮುಸ್ಲಿಮರಲ್ಲಿ ತ್ರಿವಳಿ ತಲಾಕ್‌ಗೆ ತುತ್ತಾಗಿರುವ ಮಹಿಳೆಯರ ಸಂಖ್ಯೆ ಶೇ.1ಕ್ಕಿಂತ ಕಡಿಮೆ. ಇದಕ್ಕಿಂತ ಹೆಚ್ಚು ಬಡತನದ ಕಾರಣಕ್ಕೆ ಭಿಕ್ಷಾಟನೆ, ವ್ಯಭಿಚಾರಕ್ಕೆ ಒಳಗಾಗಿರುವ ಲಕ್ಷಾಂತರ ಮುಸ್ಲಿಮ್ ಮಹಿಳೆಯರು ಇದ್ದಾರೆ. ಮೊದಲು ಅವರಿಗೆ ಘನತೆಯ ಬದುಕು ಕಲ್ಪಿಸುವ ಕೆಲಸ ಮಾಡಬೇಕು. ಮುಸ್ಲಿಮ್ ಮಹಿಳೆಯರ ಆರ್ಥಿಕ, ಸಾಮಾಜಿಕ ಸಮಸ್ಯೆಗೆ ಪರಿಹಾರ ಕಲ್ಪಿಸುವ ಕಾರ್ಯ ಆಗಬೇಕು ಎಂದು ಅವರು ತಿಳಿಸಿದರು. ಸಮಾನ ನಾಗರಿಕ ಸಂಹಿತೆಯನ್ನು ಜಾರಿಗೊಳಿಸಲು ಮುಂದಾಗಿರುವ ಸರಕಾರ ಮೊದಲು ಅದರ ಕರಡು ಪ್ರತಿಯನ್ನು ತಯಾರಿಸಿ ಜನರ ಮುಂದೆ ಇಡಬೇಕು. ಮುಂದೆ ಜನ ಅದಕ್ಕೆ ಪ್ರತಿಕ್ರಿಯಬೇಕು. ಅದು ಸ್ವೀಕಾರ್ಹವಾಗಿ ದ್ದರೆ ಎಲ್ಲರೂ ಒಪ್ಪಿಗೆ ನೀಡುತ್ತಾರೆ. ಅದರಲ್ಲಿ ಸಂಶಯವೇ ಬೇಡ ಎಂದು ಅವರು ತಿಳಿಸಿದರು.

ಬಳಿಕ ನಡೆದ ಪ್ರಶ್ನೋತ್ತರ ಕಾರ್ಯಕ್ರಮದಲ್ಲಿ ಸಭಿಕರ ಪ್ರಶ್ನೆಗೆ ಉತ್ತರಿಸ ಲಾಯಿತು. ಇದೇ ಸಂದರ್ಭದಲ್ಲಿ ಆಯ್ದ ಸಭಿಕರು ತಮ್ಮ ಅಭಿಪ್ರಾಯಗಳನ್ನು ಮಂಡಿಸಿದರು. ಒಕ್ಕೂಟದ ಜಿಲ್ಲಾಧ್ಯಕ್ಷ ಯಾಸೀನ್ ಮಲ್ಪೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಹಾಫಿಝ್ ಯೂನುಸ್ ಕುರಾನ್ ಪಠಿಸಿದರು. ಸಲಾವುದ್ದೀನ್ ಶೇಖ್ ಅನುವಾದಿಸಿದರು. ಸ್ನೇಹ ಸಂವಾದದ ಸಂಚಾಲಕ ಸಾದಿಕ್ ಉಡುಪಿ ವಂದಿಸಿದರು. ಪ್ರಧಾನ ಕಾರ್ಯದರ್ಶಿ ಹುಸೈನ್ ಕೋಡಿಬೆಂಗ್ರೆ ಕಾರ್ಯ ಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X