Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಇಂದಿನಿಂದ ‘ಆಳ್ವಾಸ್ ನುಡಿಸಿರಿ-2016’

ಇಂದಿನಿಂದ ‘ಆಳ್ವಾಸ್ ನುಡಿಸಿರಿ-2016’

ವಾರ್ತಾಭಾರತಿವಾರ್ತಾಭಾರತಿ17 Nov 2016 11:55 PM IST
share
ಇಂದಿನಿಂದ ‘ಆಳ್ವಾಸ್ ನುಡಿಸಿರಿ-2016’

ಮೂಡುಬಿದಿರೆ, ನ.17: ಸಾಹಿತ್ಯಕ, ಸಾಂಸ್ಕೃತಿಕ ರಾಷ್ಟ್ರೀಯ ಸಮ್ಮೇಳನ ನುಡಿಜಾತ್ರೆ 13ನೆ ವರ್ಷದ ‘ಆಳ್ವಾಸ್ ನುಡಿಸಿರಿ’ ನ.18ರಿಂದ ಆರಂಭಗೊಳ್ಳಲಿದೆ. ಮೂರು ದಿನಗಳ ಕಾಲ ಹಲವು ಸಿರಿಗಳ ಕೂಡುವಿಕೆಯಲ್ಲಿ ‘ಕರ್ನಾಟಕ: ನಾಳೆಗಳ ನಿರ್ಮಾಣ’ ಎಂಬ ಪರಿಕಲ್ಪನೆಯೊಂದಿಗೆ ಅನಾವರಣಗೊಳ್ಳಲಿದೆ.

ಮೂಡುಬಿದಿರೆಯ ವಿದ್ಯಾಗಿರಿಯ ರತ್ನಾಕರವರ್ಣಿ ವೇದಿಕೆಯ ಪುಂಡಲೀಕ ಹಾಲಂಬಿ ಸಭಾಂಗಣದಲ್ಲಿ ಖ್ಯಾತ ವಿಮರ್ಶಕರು ಮತ್ತು ಸಂಸ್ಕೃತಿ ಚಿಂತಕಿ ಡಾ.ಬಿ.ಎನ್.ಸುಮಿತ್ರಾಬಾಯಿ ಸರ್ವಾಧ್ಯಕ್ಷತೆಯಲ್ಲಿ ಸಮ್ಮೇಳನ ನಡೆಯಲಿದ್ದು, ಬೆಳಗ್ಗೆ 8ರಿಂದ ಸಂಜೆ 6ರವರೆಗೆ ಸಾಹಿತ್ಯ, ಸಂಸ್ಕೃತಿ, ಭಾಷೆ, ಸಮಾಜ, ನೆಲ-ಜಲ, ಆರೋಗ್ಯ-ಆಹಾರ, ಸಂಸ್ಮರಣೆ, ಹಿರಿಯರ ಸ್ಮರಣೆ, ನಮ್ಮ ಕತೆ ನಿಮ್ಮ ಜೊತೆ ಮುಂತಾದುವುಗಳ ಕುರಿತು ಚಿಂತನ-ಮಂಥನ ನಡೆಯಲಿದೆ.

*ದಶ ವೇದಿಕೆಗಳಲ್ಲಿ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು.

ರತ್ನಾಕರವರ್ಣಿ ವೇದಿಕೆ, ಕೆ.ವಿ.ಸುಬ್ಬಣ್ಣ ಬಯಲು ರಂಗಮಂದಿರ, ಸಿದ್ಧಕಟ್ಟೆ ವಿಶ್ವನಾಥ ಶೆಟ್ಟಿ ವೇದಿಕೆ, ಡಾ.ಶಿವರಾಮ ಕಾರಂತ ವೇದಿಕೆ, ಮಿಜಾರು ಅಣ್ಣಪ್ಪ ವೇದಿಕೆ, ಬೋಲ ಚಿತ್ತರಂಜನದಾಸ್ ಶೆಟ್ಟಿ ವೇದಿಕೆ, ಸುಬಾಶ್ಚಂದ್ರ ಪಡಿವಾಳ್ ವೇದಿಕೆ, ಕು.ಶಿ.ಹರಿದಾಸ ಭಟ್ಟ ವೇದಿಕೆ, ಸಿದ್ಧಕಟ್ಟೆ ಚೆನ್ನಪ್ಪ ಶೆಟ್ಟಿ ವೇದಿಕೆ ಮತ್ತು ಕುವೆಂಪು ಸಭಾಂಗಣದಲ್ಲಿ ಹೀಗೆ ಒಟ್ಟು ಹತ್ತು ವೇದಿಕೆಗಳಲ್ಲಿ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಲಿವೆ.

ಡಾ.ಬಿ.ಎನ್.ಸುಮಿತ್ರಾಬಾಯಿ ಸರ್ವಾಧ್ಯಕ್ಷತೆಯಲ್ಲಿ ಡಾ.ಜಯಂತ ಕಾಯ್ಕಿಣಿ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ.

*ವಿಚಾರಗೋಷ್ಠಿ, ವಿಶೇಷೋಪನ್ಯಾಸಗಳು:

ಪ್ರತಿ ವರ್ಷದಂತೆ ಈ ಬಾರಿಯು ಅತ್ಯುತ್ತಮ ನಾಲ್ಕುಗೋಷ್ಠಿಗಳು, ಐದು ವಿಶೇಷೋಪನ್ಯಾಸಗಳು ನಡೆಯಲಿವೆ. *ನಮ್ಮ ಕತೆ ನಿಮ್ಮ ಜೊತೆ:  ಈ ಬಾರಿ ಹೊಸದಾಗಿ ‘ನಮ್ಮ ಕತೆ ನಿಮ್ಮ ಜೊತೆ’ ಎಂಬ ಶೀರ್ಷಕೆಯೊಂದಿಗೆ ಡಾ.ಬಿ.ಜಯಶ್ರೀ ಮತ್ತು ಜಬ್ಬರ್ ಸಮೋ ಮಾತುಗಳನ್ನು ಹಂಚಿಕೊಳ್ಳಲಿದ್ದಾರೆ. ಉಳಿದಂತೆ ಸಂಸ್ಮರಣೆ, ಕವಿಸಮಯ-ಕವಿನಮನ, ಶತಮಾನ ನಮನ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ನುಡಿಸಿರಿಯಲ್ಲಿ ಸಿನಿಸಿರಿ: ಈ ಬಾರಿಯ ನುಡಿಸಿರಿಯಲ್ಲಿ ಇದೇ ಮೊದಲನೆಯ ಬಾರಿ ನಾಲ್ಕು ದಿನಗಳ ಕಾಲ ಗುಬ್ಬಚ್ಚಿ ಗಳು, ನಾನು ನನ್ನ ಕನಸು, ಸಿಂಹದ ಮರಿ ಸೈನ್ಯ, ಬಂಗಾರದ ಮನುಷ್ಯ, ಅಮೇರಿಕಾ ಅಮೇರಿಕಾ, ದ್ವೀಪ, ಡಿಸೆಂಬರ್-1, ಅಮೃತಧಾರೆ, ಪುಷ್ಪಕ ವಿಮಾನ, ಕಸ್ತೂರಿ ನಿವಾಸ, ಸತ್ಯಹರೀಶ್ಚಂದ್ರ ಮತ್ತು ನಾಗರಹಾವು 12 ಸಿನೆಮಾಗಳು ಪ್ರದರ್ಶನಗೊಳ್ಳಲಿದ್ದು, ಸಿನಿಪ್ರಿಯರ ಮನಸೂರೆಗೊಳ್ಳಲಿದೆ.

ಈ ಬಾರಿಯ ಕೃಷಿಸಿರಿಯಲ್ಲಿ ಶ್ವಾನ ಮತ್ತು ಫಲಪುಷ್ಪ ಪಶುಗಳ ಪ್ರದರ್ಶನವೂ ನಡೆಯಲಿದ್ದು, ನುಡಿಸಿರಿಗೆ ಸಾಥ್ ನೀಡಲಿದೆ.

ಸಜ್ಜಾಗಿದೆ ವಿದ್ಯಾಗಿರಿ

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಮೂರು ದಿನಗಳು ನಡೆಯುವ ‘ಆಳ್ವಾಸ್ ನುಡಿಸಿರಿ-2016’ ನಾಡು ನುಡಿ ಸಮ್ಮೇಳನಕ್ಕೆ ವಿದ್ಯಾಗಿರಿಯ ಆವರಣವು ಮದುವಣಗಿತ್ತಿಯಂತೆ ಶೃಂಗಾರಗೊಂಡಿದೆ.

ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ವಿದ್ಯಾಗಿರಿಯಲ್ಲಿ ಹೊಸ ಶೈಲಿಯ ಸ್ವಾಗತಗೋಪುರವನ್ನು ನಿರ್ಮಿಸಲಾಗಿದೆ. ಗುತ್ತಿನ ಮನೆಯ ಛಾವಣಿಯ ಮಾದರಿಯಲ್ಲಿ ಛಾವಣಿ ಅಳವಡಿಸಲಾಗಿದ್ದು, ಬೃಹತ್ ಮಟ್ಟದಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ನುಡಿಸಿರಿ ನಡೆಯುವ ರತ್ನಾಕರವರ್ಣಿ ವೇದಿಕೆಯ ಪಕ್ಕದಲ್ಲಿ ವ್ಯವಸ್ಥೆ ಮಾಡಲಾಗಿದೆ. ಆಳ್ವಾಸ್‌ನ ಸಾಂಪ್ರದಾಯಿಕ ಶೈಲಿಯ ಅಲಂಕಾರಗಳಾದ ಬಣ್ಣದ ಬಟ್ಟೆಗಳ ಪೂಕರೆ, ವಿದ್ಯುತ್ ದೀಪಾಲಂಕೃತಗೊಂಡು ಸಜ್ಜಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X