ಹೃದ್ರೋಗ ಹಾಗೂ ಮಧುಮೇಹ ಉಚಿತ ತಪಾಸಣಾ ಶಿಬಿರ
ಬೆಳ್ತಂಗಡಿ,ನ.18: ಒಮೇಗಾ ಆಸ್ಪತ್ರೆ ಮಂಗಳೂರು, ಮಂಗಳೂರು ಹಾರ್ಟ್ಸ್ಕ್ಯಾನ್ ಫೌಂಡೇಶನ್ ಮಂಗಳೂರು, ಶ್ರೀ ಗುರುನಾರಾಯಣ ಸ್ವಾಮೀ ಸೇವಾ ಸಂಘ, ಯುವ ವಾಹಿನಿ ಹಾಗೂ ಔಷಧಿ ವ್ಯಾಪಾರಸ್ಥರ ಸಂಘ ಬೆಳ್ತಂಗಡಿ ತಾಲೂಕು ವತಿಯಂದ ಹೃದ್ರೋಗ ಹಾಗೂ ಮಧುಮೇಹ ಉಚಿತ ತಪಾಸಣಾ ಶಿಬಿರವು ನ. 27 ರಂದು ನಡೆಯಲಿದೆ ಎಂದು ಗುರುನಾರಾಯಣ ಸೇವಾ ಸಂಘದ ಅಧ್ಯಕ್ಷ ಭಗೀರಥ ಜಿ. ತಿಳಿಸಿದರು.
ಅವರು ಗುರುವಾರ ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ವಿವರ ನೀಡಿದರು. ಬೆಳ್ತಂಗಡಿ ಆಶಾ ಸಾಲಿಯಾನ್ ಸಭಾ ಭವನದಲ್ಲಿ ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯುವ ಶಿಬಿರವನ್ನು ಶಾಸಕ ಕೆ. ವಸಂತ ಬಂಗೇರ ಉದ್ಘಾಟಿಸಲಿದ್ದಾರೆ. ಅತಿಥಿಗಳಾಗಿ ಪ.ಪಂ.ಅಧ್ಯಕ್ಷ ಮುಗುಳಿ ನಾರಾಯಣ ರಾವ್ ಉಪಸ್ಥಿತರಿರಲಿದ್ದಾರೆ. ಹೃದ್ರೋಗ ತಜ್ಞ ಡಾ ಕೆ. ಮುಕುಂದ ಅವರ ನೇತೃತ್ವದಲ್ಲಿ ತಪಾಸಣೆ ನಡೆಯಲಿದೆ. ಶಿಬಿರದಲ್ಲಿ ರಕ್ತದೊತ್ತಡ ಪರೀಕ್ಷೆ, ಹೃದ್ರೋಗ ಸ್ಕ್ಯಾನಿಂಗ್,ಮಧುಮೇಹ ಪರೀಕ್ಷೆ ಉಚಿವಾಗಿ ಮಾಡಲಾಗುತ್ತದೆ. ಆಹಾರ ಪದ್ಧತಿಗಳ ಬಗ್ಗೆ ಸಲಹೆಂುನ್ನೂ ನೀಡಲಾಗುವುದು ಎಂದರು.
ಶಿಬಿರಾರ್ಥಿಗಳಿಗೆ ಯಶಸ್ವಿನಿ, ಆರೋಗ್ಯ ಭಾಗ್ಯ, ಬೀಡಿ ಕಾರ್ಮಿಕರಿಗೆ ಹಾಗೂ ಇನ್ನಿತರ ಸರಕಾರಿ ಇನ್ಷೂರೆನ್ಸ್ ಇರುವವರಿಗೆ ಹೆಚ್ಚಿನ ಚಿಕಿತ್ಸೆ ಲಭ್ಯವಿದ್ದು ಇತರರಿಗೆ ರಿಯಾಯಿತಿ ದರದಲ್ಲಿ ಚಿಕಿತ್ಸೆ ಲಭ್ಯವಿದೆ. ಶಿಬಿರಾರ್ಥಿಗಳು ತಮ್ಮ ಹಳೆಯ ವೈದ್ಯಕೀಯ ದಾಖಲೆಗಳಿದ್ದಲ್ಲಿ ತರಬೇಕು. ಹೆಚ್ಚಿನ ಮಾಹಿತಿಗಾಗಿ 9900700854 / 9449554848 / 9449770717 / 9449331447 ಕ್ಕೆ ಸಂಪರ್ಕಿಸಬಹುದಾಗಿದೆ.
ಗೋಷ್ಠಿಯಲ್ಲಿ ಔಷಧಿ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಡಿ. ಜಗದೀಶ್, ಒಮೆಗಾ ಆಸ್ಪತ್ರೆಯ ಸಂಪರ್ಕಾಧಿಕಾರಿಗಳಾದ ನಾಗಾರಾಜ ಟಿ., ಶ್ರೀನಾಥ್ ಪಿ. ಎನ್. ಇದ್ದರು.