Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ತೆಂಗಿನ ಉತ್ಪನ್ನ ಬೆಲೆಕುಸಿತದಿಂದ...

ತೆಂಗಿನ ಉತ್ಪನ್ನ ಬೆಲೆಕುಸಿತದಿಂದ ಬೆಳೆಗಾರ ಕಂಗಾಲು

ತೆಂಗಿನಕಾಯಿ, ತೆಂಗಿನೆಣ್ಣೆ ಅಪಪ್ರಚಾರ ತಡೆಯಲು ಆಗ್ರಹ

ವಾರ್ತಾಭಾರತಿವಾರ್ತಾಭಾರತಿ18 Nov 2016 7:29 PM IST
share

ಉಡುಪಿ, ನ.12: ತೆಂಗಿನ ಉತ್ಪನ್ನಗಳ ಬೆಲೆ ಕುಸಿತದಿಂದ ಬೆಳೆಗಾರರು ಆರ್ಥಿಕವಾಗಿ ಸಂಕಷ್ಟದಲ್ಲಿದ್ದಾರೆ. ವರ್ಷದಿಂದ ವರ್ಷಕ್ಕೆ ತೆಂಗು ಬೆಳೆಯುವ ಪ್ರದೇಶದಲ್ಲಿ ಯಾವುದೇ ಏರಿಕೆಯಾಗುತ್ತಿಲ್ಲ. ತೆಂಗಿಗೆ ಬೇಡಿಕೆ ಹೆಚ್ಚುತಿದ್ದರೂ ದರದಲ್ಲಿ ಮಾತ್ರ ಯಾವುದೇ ಚೇತರಿಕೆ ಕಾಣುತ್ತಿಲ್ಲ. ಇದರಿಂದ ತೆಂಗು ಬೆಳೆಗಾರರು ಕಂಗಾಲಾಗಿದ್ದಾರೆ ಎಂದು ಭಾರತೀಯ ಕಿಸಾನ್ ಸಂಘದ ಜಿಲ್ಲಾಧ್ಯಕ್ಷ ಬಿ.ವಿ.ಪೂಜಾರಿ ಹೇಳಿದ್ದಾರೆ.

ಸರಕಾರಗಳು ತೆಂಗಿನಎಣ್ಣೆ ಹಾಗೂ ಅದರ ಉತ್ಪನ್ನಗಳಿಗೆ ಪ್ರೋತ್ಸಾಹ ನೀಡದೆ ಪಾಮ್ ಹಾಗೂ ಸೂರ್ಯಕಾಂತಿ ಎಣ್ಣೆಗಳಿಗೆ ನೀಡುತ್ತಿರುವ ಉತ್ತೇಜನ, ದರ ಕುಸಿತಕ್ಕೆ ಇನ್ನೊಂದು ಕಾರಣವಾಗಿದೆ. ಈ ನಿಟ್ಟಿನಲ್ಲಿ ಸರಕಾರದ ನೀತಿಗಳು ಬದಲಾಗಬೇಕು. ಪಡಿತರ ವ್ಯವಸ್ಥೆಯ ಜೊತೆಗೆ ನೀಡುವ ಎಣ್ಣೆಯಲ್ಲಿ ತೆಂಗಿನೆಣ್ಣೆಗೆ ಪ್ರಾಧಾನ್ಯತೆ ನೀಡಬೇಕು. ಜೊತೆಗೆ ತೆಂಗಿನಕಾಯಿ, ಎಳನೀರು, ಎಣ್ಣೆಗಳ ಬಗ್ಗೆ ಜಾಹಿರಾತು ನೀಡಿ ಜನರಲ್ಲಿ ಆಸಕ್ತಿ ಮೂಡಿಸಬೇಕು. ಆಗ ಮಾತ್ರ ರೈತರಿಗೆ ಉತ್ತಮ ಧಾರಣೆ ಸಿಗಲು ಸಾಧ್ಯ ಎಂದವರು ಸಲಹೆ ನೀಡಿದರು.

ಸರಕಾರದ ಅಧೀನದಲ್ಲಿರುವ ದೇವಸ್ಥಾನಗಳಿಗೆ ತೆಂಗಿನ ಕಾಯಿ ಮತ್ತು ಎಣ್ಣೆಗಳನ್ನು ಜಿಲ್ಲಾಮಟ್ಟದ ರೈತರು ಹಾಗೂ ರೈತರ ಸಂಸ್ಥೆಗಳಿಂದಲೇ ಖರೀದಿಸ ಬೇಕು. ಹೊರರಾಜ್ಯಗಳಿಂದ ಆಮದಿಗೆ ಅವಕಾಶ ನೀಡಬಾರದು. ಪಡಿತರ ವ್ಯವಸ್ಥೆಯೊಂದಿಗೆ ಹಂಚಲಾಗುವ ಪಾಮ್‌ಎಣ್ಣೆ ಹಾಗೂ ಇತರ ಎಣ್ಣೆಗಳನ್ನು ನಿಲ್ಲಿಸಿ ತೆಂಗಿನ ಎಣ್ಣೆಗೆ ಅವಕಾಶ ಮಾಡಿಕೊಡಬೇಕು. ತೆಂಗಿನಎಣ್ಣೆಯ ವಿರುದ್ಧ ನಡೆಯುತ್ತಿರುವ ಅಪಪ್ರಚಾರವನ್ನು ತಡೆಗಟ್ಟಲು ಸರಕಾರ ಕ್ರಮಕೈಗೊಳ್ಳಬೇಕು ಇವೇ ಮೊದಲಾದ ಬೇಡಿಕೆಗಳನ್ನು ಸರಕಾರದ ಮುಂದಿಡಲು ನಿರ್ಣಯಿಸ ಲಾಯಿತು.

ಸಭೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸತ್ಯನಾರಾಯಣ ಉಡುಪ ಜಪ್ತಿ, ಪದಾಧಿಕಾರಿಗಳಾದ ವಾಸುದೇವ ಶ್ಯಾನುಬಾಗ್,ಸದಾನಂದ ಶೆಟ್ಟಿ, ಸೀತಾರಾಮ ಉಡುಪ, ಶ್ರೀನಿವಾಸ ಶೆಟ್ಟಿ, ರಾಮ್‌ರಾವ್, ಜಯರಾಮ ಉಡುಪ, ಎಸ್. ಎಂ. ರಾವ್, ದೀಪಾ ಹೆಗ್ಡೆ ಮೊದಲಾದವರು ಉಪಸ್ಥಿತರಿದ್ದರು. ತಾಲೂಕು ಪ್ರಧಾನ ಕಾರ್ಯದರ್ಶಿ ಆಸ್ತೀಕ ಶಾಸ್ತ್ರಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X