Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮನಪಾ: ಪ್ರೀಮಿಯಂ ಎಫ್‌ಎಆರ್‌ನಡಿ...

ಮನಪಾ: ಪ್ರೀಮಿಯಂ ಎಫ್‌ಎಆರ್‌ನಡಿ ಕಾಮಗಾರಿಗೆ ಅನುಮೋದನೆ

107.68 ಕೋ.ರೂ. ವೆಚ್ಚ: ವಿಪಕ್ಷ ಆಕ್ಷೇಪ

ವಾರ್ತಾಭಾರತಿವಾರ್ತಾಭಾರತಿ18 Nov 2016 11:41 PM IST
share

ಮಂಗಳೂರು, ನ.18: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರೀಮಿಯಂ ಎಫ್‌ಎಆರ್‌ನಡಿ 107.68 ಕೋಟಿ ರೂ. ವೆಚ್ಚದಲ್ಲಿ ವಿವಿಧ ವಾರ್ಡ್‌ಗಳಲ್ಲಿ ರಸ್ತೆ ಕಾಮಗಾರಿಗಳನ್ನು ಹಮ್ಮಿಕೊಳ್ಳಲು ವಿಪಕ್ಷದ ಆಕ್ಷೇಪದ ನಡುವೆ ಇಂದು ಅನುಮೋದನೆ ನೀಡಲಾಯಿತು. ಮೇಯರ್ ಹರಿನಾಥ್ ಅಧ್ಯಕ್ಷತೆಯಲ್ಲಿ ಮನಪಾ ಸಭಾಂಗಣದಲ್ಲಿ ನಡೆದ ವಿಶೇಷ ಸಭೆಯಲ್ಲಿ ವಿಸ್ತೃತ ಚರ್ಚೆ, ಆಕ್ಷೇಪ, ವಾದ-ಪ್ರತಿವಾದಗಳ ನಡುವೆ ಪ್ರೀಮಿಯಂ ಎಫ್‌ಎಆರ್‌ನ ವಿವಿಧ ಕಾಮಗಾರಿಗಳ ಕ್ರಿಯಾ ಯೋಜನೆಯಲ್ಲಿ ಬದಲಾವಣೆ ಇದ್ದಲ್ಲಿ ಮೇಯರ್‌ಗೆ ಅಧಿಕಾರ ನೀಡಿ, ವಿಪಕ್ಷದ ಆಕ್ಷೇಪ ದಾಖಲಿಸಿಕೊಂಡು ಅನುಮೋದಿಸಲು ನಿರ್ಧರಿಸಲಾಯಿತು. ಸಭೆ ಆರಂಭಗೊಳ್ಳುತ್ತಿರುವಂತೆಯೇ, ಕ್ರಿಯಾ ಯೋಜನೆ ಮಂಜೂರಾತಿಗೆ ಸದನದ ಒಪ್ಪಿಗೆ ಕೇಳುತ್ತಿದ್ದಂತೆ ಮಧ್ಯ ಪ್ರವೇಶಿಸಿದ ಪ್ರತಿಪಕ್ಷದ ನಾಯಕಿ ರೂಪಾ ಡಿ. ಬಂಗೇರ, ಅಭಿವೃದ್ಧಿ ಕಾಮಗಾರಿ ಪರಿಶೀಲನಾ ಸಭೆ ಕೇವಲ ಕಾಟಾಚಾರಕ್ಕೆ ಮಾತ್ರ ನಡೆಯುತ್ತಿದೆ. ಅಜೆಂಡಾಕ್ಕೆ ಪೂರಕವಾದ ಯಾವುದೇ ಚರ್ಚೆ ನಡೆಯುತ್ತಿಲ್ಲ. ಪ್ರೀಮಿಯಂ ಎ್ಎಆರ್‌ನಿಂದ ಸಂಗ್ರಹಿಸಿದ 130 ಕೋ.ರೂ. ಪಾಲಿಕೆಯ ಬ್ಯಾಂಕ್ ಖಾತೆಯಲ್ಲಿ ಇದೆ. ಈ ಹಣವನ್ನು ವೃತ್ತ ನಿರ್ಮಾಣಕ್ಕೆ ಬಳಸಲಾಗುತ್ತಿದೆ. ಚುನಾವಣೆಯ ದೃಷ್ಟಿಯನ್ನಿಟ್ಟುಕೊಂಡು ಕಾಂಕ್ರಿಟೀಕರಣ ನಡೆಸಲಾಗುತ್ತಿದೆ ಎಂದು ಆಕ್ಷೇಪಿಸಿದರು. ಸರಕಾರದ ಕಾನೂನಿನ ತೊಡಕಿನಿಂದ ಪ್ರೀಮಿಯಂ ಎ್ಎಆರ್ ಹಣ ಬಳಕೆಗೆ ವಿಳಂಬವಾಗಿದೆ. ಪ್ರೀಮಿಯಂ ಎ್ಎಆರ್ ಹಣವನ್ನು ುಟ್‌ಪಾತ್, ಚರಂಡಿ ಮತ್ತು ಅಗಲೀಕರಿಸಿದ ರಸ್ತೆಗೆ ಮಾತ್ರ ಬಳಸಲಾಗುತ್ತಿದೆ ಎಂದು ಕಾಂಗ್ರೆಸ್ ಸದಸ್ಯ ಮಹಾಬಲ ಮಾರ್ಲ ಸ್ಪಷ್ಟೀಕರಿಸಲೆತ್ನಿಸಿದರು. ಬಿಜೆಪಿಯ ಕೆ. ಮಧುಕಿರಣ್ ಮಾತನಾಡಿ, ಸರಕಾರದ ಮಾರ್ಗಸೂಚಿಯ ಬಗ್ಗೆ ಸದನಕ್ಕೆ ಮಾಹಿತಿ ನೀಡದೆ ಸರಕಾರದ ನಿಯಮಾವಳಿ ಉಲ್ಲಂಘಿಸಲಾಗುತ್ತಿದೆ. ಕಾವೂರು- ಗಾಂಧಿನಗರ ರಸ್ತೆಗೆ ಪ್ರೀಮಿಯಂ ಇಟ್ಟಿಲ್ಲ ಎಂದು ಆಕ್ಷೇಪಿಸಿದರು. ಪಾಲಿಕೆ ಆಯುಕ್ತ ಮುಹಮ್ಮದ್ ನಝೀರ್ ಮಾತನಾಡಿ, ರಾಜ್ಯ ಸರಕಾರ ಈಗಾಗಲೇ ಸುತ್ತೋಲೆ ಹೊರಡಿಸಿದ್ದು, ಅದರಂತೆ ಕ್ರಿಯಾ ಯೋಜನೆ ತಯಾರಿಸಲಾಗಿದೆ. ಸುತ್ತೋಲೆಯ ಯಾವುದೇ ಅಂಶದ ಉಲ್ಲಂಘನೆಯಾಗಿಲ್ಲ ಎಂದರು.

 ಆದರೆ ಕ್ರಿಯಾಯೋಜನೆಯಲ್ಲಿ, ಈಗಾಗಲೇ ಅಭಿವೃದ್ಧಿ ಆದ ರಸ್ತೆಗಳಿಗೂ ಹಣ ಇಡಲಾಗಿದೆ. ಅಲ್ಲದೆ, ಸರಕಾರಿ ಸುತ್ತೋಲೆಯಂತೆ ರಸ್ತೆ ವಿಸ್ತರಣೆ ಹೊರತುಪಡಿಸಿ ಇತರ ಕಾಮಗಾರಿಗಳಿಗೆ ಅವಕಾಶವಿಲ್ಲ. ಹಾಗಿದ್ದರೂ ಅವಕಾಶ ನೀಡುವ ಮೂಲಕ ಸುತ್ತೋಲೆಯನ್ನು ಉಲ್ಲಂಘಿಸಲಾಗಿದೆ ಎಂದು ಪ್ರೇಮಾನಂದ ಶೆಟ್ಟಿ ದೂರಿದರು. ಕಾರ್ಯಸೂಚಿಯಲ್ಲಿ ಎಲ್ಲಿಂದ ಎಷ್ಟು ಪ್ರೀಮಿಯರ್ ಎಫ್‌ಎಆರ್ ಹಣ ಸಂಗ್ರಹಿಸಲಾಗಿದೆ, ಆ ಹಣದಲ್ಲಿ ಯಾವ ರಸ್ತೆಗೆ ಎಷ್ಟು ಹಣ ನಿಗದಿಪಡಿಸಲಾಗಿದೆ ಎಂಬ ಬಗ್ಗೆ ಸ್ಪಷ್ಟ ಮಾಹಿತಿ ನೀಡಲಾಗಿಲ್ಲ. ಇದರಿಂದಾಗಿ ಕ್ರಿಯಾ ಯೋಜನೆಯನ್ನು ಪುನರ್‌ಪರಿಶೀಲಿಸುವ ಅಗತ್ಯ ಎಂದು ಸುಧೀರ್ ಶೆಟ್ಟಿ ಒತ್ತಾಯಿಸಿದರು.

ಚರ್ಚೆಯಲ್ಲಿ ಜೆಡಿಎಸ್ ಸದಸ್ಯರಾದ ಅಬ್ದುಲ್ ಅಝೀಝ್ ಕುದ್ರೋಳಿ ಹಾಗೂ ರಮೀಝಾ ಬಾನು ದನಿಗೂಡಿಸಿದರು. 56 ರಸ್ತೆಗಳು 15 ವೃತ್ತಗಳು ಸೇರಿದಂತೆ ಒಟ್ಟು 75 ಕಾಮಗಾರಿಗಳಿಗೆ ಕ್ರಿಯಾ ಯೋಜನೆ ತಯಾರಿಸಲಾಗಿದೆ. ಕೆಲವು ಕಡೆ ರಸ್ತೆ ಫುಟ್‌ಪಾತ್, ಮಳೆ ನೀರು ಚರಂಡಿ ಅಭಿವೃದ್ಧಿಗೆ ಹಣವನ್ನು ನಿಗದಿಪಡಿಸಲಾಗಿದೆ ಎಂದು ಆಯುಕ್ತರು ತಿಳಿಸಿದರು.

ಈ ಬಗ್ಗೆ ಕೆಲ ಹೊತ್ತು ಆಡಳಿತ ಹಾಗೂ ವಿಪಕ್ಷ ಸದಸ್ಯರ ನಡುವೆ ವಾಗ್ವಾದ ನಡೆದು, ಕೊನೆಗೆ ವಿಪಕ್ಷದ ಆಕ್ಷೇಪದ ನಡುವೆ ಕ್ರಿಯಾಯೋಜನೆಗೆ ಅನುಮೋದನೆ ನೀಡಲಾಯಿತು. ಉಪ ಮೇಯರ್ ಸುಮಿತ್ರಾ ಕೆ., ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಕವಿತಾ ಸನಿಲ್, ಅಪ್ಪಿಲತಾ, ಲ್ಯಾನ್ಸಿ ಲೋಟ್ ಪಿಂಟೊ, ಬಶೀರ್ ಅಹ್ಮದ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X