Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೋಟು ರದ್ದು ‘ಮಹತ್ವದ ಹೆಜ್ಜೆ’ ಎಂದಿದ್ದ...

ನೋಟು ರದ್ದು ‘ಮಹತ್ವದ ಹೆಜ್ಜೆ’ ಎಂದಿದ್ದ ಬಿಲ್ ಗೇಟ್ಸ್ ತಿಪ್ಪರಲಾಗ

ಈಗ ಏನು ಹೇಳುತ್ತಾರೆ ?

ವಾರ್ತಾಭಾರತಿವಾರ್ತಾಭಾರತಿ19 Nov 2016 12:01 PM IST
share
ನೋಟು ರದ್ದು ‘ಮಹತ್ವದ ಹೆಜ್ಜೆ’ ಎಂದಿದ್ದ ಬಿಲ್ ಗೇಟ್ಸ್ ತಿಪ್ಪರಲಾಗ

ಹೊಸದಿಲ್ಲಿ, ನ.19: ಮೋದಿ ಸರಕಾರ 500 ಹಾಗೂ 1000 ರೂ. ನೋಟುಗಳನ್ನು ರದ್ದುಪಡಿಸಿದ ಕ್ರಮವನ್ನು 'ದಿಟ್ಟಕ್ರಮ'ವೆಂದು ಮೈಕ್ರೋಸಾಫ್ಟ್ ಸ್ಥಾಪಕ ಬಿಲ್ ಗೇಟ್ಸ್ ಬುಧವಾರದಂದು ಪ್ರಶಂಸಿಸಿದ್ದರೆ ಮರುದಿನವೇ ತಿಪ್ಪರಲಾಗ ಹಾಕಿದ್ದು ‘‘ಈ ವಿಚಾರದಲ್ಲಿ ನನ್ನ ಯಾವುದೇ ಅಭಿಪ್ರಾಯವಿಲ್ಲ’’ ಎಂದಿದ್ದಾರೆ. ಸರಕಾರದ ಕ್ರಮದ ಬಗ್ಗೆ ಹಲವು ಪ್ರಶ್ನೆಗಳ ಹೊರತಾಗಿಯೂ ಪ್ರತಿಕ್ರಿಯಿಸಲು ಅವರು ನಿರಾಕರಿಸಿದ್ದಾರೆ.

ಬುಧವಾರದಂದು ನೀತಿ ಆಯೋಗ ಆಯೋಜಿಸಿದ್ದ ಭಾಷಣ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಬಿಲ್‌ ಗೇಟ್ಸ್ ಸರಕಾರದ ಕ್ರಮವನ್ನು ಸ್ವಾಗತಿಸುತ್ತಾ ಡಿಜಿಟಲ್ ವ್ಯವಹಾರಗಳು ಇಲ್ಲಿ ಹೆಚ್ಚಾಗುವವು ಎಂದಿದ್ದರು.
ಆದರೆ ಗುರುವಾರ ಕೆಲ ಆಯ್ದ ಪತ್ರಕರ್ತರೊಂದಿಗೆ ಮಾತನಾಡುವಾಗ ‘‘ಜನರು ಹಣ ಪಡೆಯುವ ಸಲುವಾಗಿ ಸರತಿ ಸಾಲು ನಿಲ್ಲುವುದು ಉತ್ತಮ ಆಡಳಿತದ ಲಕ್ಷಣವೇ?’’ ಎಂಬ ಪತ್ರಕರ್ತರ ಪ್ರಶ್ನೆಯೊಂದಕ್ಕೆ ಅವರು ಉತ್ತರಿಸುತ್ತಾ ‘‘ನನಗೆ ಈ ಕ್ರಮದಿಂದ ಏನೂ ಮಾಡಲು ಇಲ್ಲ. ಯಾರೂ ನನ್ನ ಪ್ರತಿಕ್ರಿಯೆ ಕೇಳಿಲ್ಲ’’ ಎಂದರು. ನಿಖರ ಉತ್ತರಕ್ಕಾಗಿ ಆಗ್ರಹಿಸಿದಾಗ ‘‘ಈ ವಿಚಾರವಾಗಿ ಯಾರೂ ನಮ್ಮೊಡನೆ ಹಿಂದೆಯೂ ನಂತರವೂ ಸಲಹೆ ಕೇಳಿಲ್ಲ. ಪತ್ರಿಕೆಗಳ ಮೂಲಕ ಇದರ ಬಗ್ಗೆ ತಿಳಿದುಕೊಂಡೆ. ನಾನು ವಿಮಾನ ನಿಲ್ದಾಣದಲ್ಲಿದ್ದಾಗ ಅಲ್ಲಿ ದೊಡ್ಡ ಕ್ಯೂ ಇತ್ತು. ಸರಕಾರದ ನೋಟು ರದ್ದತಿ ಕ್ರಮದಿಂದ ಹೀಗಾಗಿದೆ ಎಂದು ಯಾರೋ ಹೇಳಿದರು. ನೋಟು ರದ್ದತಿಯ ವಿಚಾರವನ್ನು ಬದಿಗಿಟ್ಟು ಮಾತನಾಡುವುದಾದರೆ ಡಿಜಿಟಲ್ ವ್ಯವಹಾರಗಳು ಉತ್ತಮ’’ ಎಂದರು.
‘‘ನೋಟು ಅಮಾನ್ಯದ ಬಗ್ಗೆ ನನ್ನ ಯಾವುದೇ ಅಭಿಪ್ರಾಯವಿಲ್ಲ. ಅದೇನೆಂದು ನನಗಿಂತ ನಿಮಗೆ ಚೆನ್ನಾಗಿ ಗೊತ್ತು’’ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X