Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪಕ್ಷದೊಳಗೆ ತಳಮಳ: ಮೂರು ದಿನಗಳಲ್ಲಿ...

ಪಕ್ಷದೊಳಗೆ ತಳಮಳ: ಮೂರು ದಿನಗಳಲ್ಲಿ ಪಕ್ಷದ ಸಂಸದರ ಎರಡು ಸಭೆ ರದ್ದು ಮಾಡಿದ ಬಿಜೆಪಿ

ವಾರ್ತಾಭಾರತಿವಾರ್ತಾಭಾರತಿ19 Nov 2016 12:05 PM IST
share
ಪಕ್ಷದೊಳಗೆ ತಳಮಳ:  ಮೂರು ದಿನಗಳಲ್ಲಿ ಪಕ್ಷದ ಸಂಸದರ ಎರಡು ಸಭೆ ರದ್ದು ಮಾಡಿದ ಬಿಜೆಪಿ

ಹೊಸದಿಲ್ಲಿ, ನ.19: ಹೆಚ್ಚಿನ ಬಿಜೆಪಿ ಸಂಸದರು 500 ಹಾಗೂ 1000 ರೂ. ನೋಟು ಅಮಾನ್ಯದ ವಿರುದ್ಧವಾಗಿದ್ದಾರೆಂಬ ಕಾರಣಕ್ಕೆ ಬಿಜೆಪಿ ನಾಯಕತ್ವ ಕಳೆದ ಮೂರು ದಿನಗಳಲ್ಲಿ ನಡೆಯಬೇಕಿದ್ದ ಪಕ್ಷ ಸಂಸದರ ಎರಡು ಸಭೆಗಳನ್ನು ರದ್ದುಗೊಳಿಸಿದೆಯೆಂದು ತಿಳಿದು ಬಂದಿದೆ. ಸಂಸದರ ಆಕ್ರೊಶಕ್ಕೆ ತುತ್ತಾಗಬೇಕಾದೀತೆಂಬ ಭಯವೇ ಇದಕ್ಕೆ ಕಾರಣವೆನ್ನಲಾಗಿದೆ.
ಮೊದಲ ಸಭೆ ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭವಾದ ದಿನವಾದ ಬುಧವಾರದಂದು ನಡೆಯಬೇಕಿದ್ದರೆ, ಎರಡನೇ ಸಭೆ ಶುಕ್ರವಾರ ನಡೆಯಬೇಕಿತ್ತು. ಈ ಸಭೆಗಳ ರದ್ದತಿಗೆ ಪಕ್ಷ ನಾಯಕತ್ವ ಯಾವುದೇ ಕಾರಣ ನೀಡದೇ ಇದ್ದರೂ, ಬಿಜೆಪಿ ಸಂಸದರ ಅಧಿಕೃತ ಸಭೆ ನಡೆಸಿದ್ದೇ ಆದಲ್ಲಿ ಅವರೆಲ್ಲರೂ ತಮ್ಮ ಅಸಮಾಧಾನ ಹೊರಗೆಡಹಿ ಸರಕಾರಕ್ಕೆ ಇರಿಸುಮುರಿಸು ಉಂಟು ಮಾಡಬಹುದೆಂಬ ಭಯವೇ ಇದಕ್ಕೆ ಕಾರಣವೆಂದು ಪಕ್ಷದ ಕೆಲ ಮೂಲಗಳು ತಿಳಿಸಿವೆ.
ತಮ್ಮ ಹೆಸರನ್ನು ಬಹಿರಂಗಪಡಿಸಲಿಚ್ಛಿಸದ ಬಿಜೆಪಿ ಸಂಸದರೊಬ್ಬರ ಪ್ರಕಾರ ಶುಕ್ರವಾರದ ಸಭೆ ಕಳೆದ ಕೆಲದಿನಗಳ ಹಿಂದೆಯೇ ನಿಗದಿಯಾಗಿದ್ದು ಸಂಸದರಿಗೆ ನೋಟು ಅಮಾನ್ಯದ ವಿಚಾರವಾಗಿ ಹಲವು ವಿಷಯಗಳಲ್ಲಿ ಅರಿವನ್ನುಂಟು ಮಾಡುವ ಉದ್ದೇಶ ಹೊಂದಿತ್ತು. ಸಭೆಯಲ್ಲಿ ಪವರ್ ಪಾಯಿಂಟ್ ಪ್ರೆಸೆಂಟೇಶನ್ ಒಂದು ನಡೆಯಲಿದೆಯೆಂದು ನಮಗೆ ತಿಳಿಸಲಾಗಿತ್ತಲ್ಲದೆ, ಹಳೆಯ 500 ಹಾಗೂ 1000 ರೂ. ನೋಟುಗಳ ಅಮಾನ್ಯ ನಿರ್ಧಾರದ ಹಿಂದಿನ ಕಾರಣಗಳನ್ನೂ ಮನದಟ್ಟು ಮಾಡಲು ನಿರ್ಧರಿಸಲಾಗಿತ್ತು.
ಆದರೆ ಸಭೆ ನಡೆಯಬೇಕಿದ್ದ ಕೆಲವೇ ಗಂಟೆಗಳ ಮೊದಲು ಅದು ರದ್ದಾದ ವಿಚಾರ ಸಂಸದರಿಗೆ ತಿಳಿಸಲಾಗಿತ್ತು. ಈ ಸಭೆ ಮುಂದಿನ ವಾರ ನಡೆಯಲಿದೆಯೆಂಬ ಮಾಹಿತಿಯಿದೆ ಎಂದು ಆ ಸಂಸದರು ಹೇಳಿಕೊಂಡಿದ್ದಾರೆ.
ಅಂತೆಯೇ ನವೆಂಬರ್ 16ರಂದು ಸಂಸದರನ್ನು ಏಳು ಗಂಟೆಗೆ ಸಭೆಗೆ ಬರುವಂತೆ ಪಕ್ಷದ ಅಧ್ಯಕ್ಷ ಅಮಿತ್ ಷಾ ಹೇಳಿದರೆ ಯಾವುದೇ ಕಾರಣ ನೀಡದೆ ಆ ಸಭೆಯನ್ನು ರದ್ದುಗೊಳಿಸಲಾಗಿತ್ತು.
ಈಗಾಗಲೇ ಪೋರ್ ಬಂದರ್ಸಂಸದ ವಿಠಲ್ ರಡದಿಯಾ ನೋಟು ಅಮಾನ್ಯ ಕ್ರಮವನ್ನು ಟೀಕಿಸಿರುವ ಹಿನ್ನೆಲೆಯಲ್ಲಿ ಇತರ ಸಂಸದರೂ ಹಾಗೆಯೇ ತಮ್ಮ ಪ್ರತಿಕ್ರಿಯೆ ನೀಡಬಹುದೆಂಬ ಭಯವೇ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಷಾ ಅವರನ್ನು ಈ ಸಭೆಗಳನ್ನು ರದ್ದುಗೊಳಿಸಲು ಪ್ರೇರೇಪಿಸಿತೆನ್ನಲಾಗಿದೆ. ಅವರ ಈ ಭಯ ಕಾರಣವಿಲ್ಲದೇ ಇಲ್ಲ. ಚಳಿಗಾಲದ ಅಧಿವೇಶನದ ಆರಂಭದ ದಿನಗಳಲ್ಲಿ ಸಂಸತ್ತಿನಲ್ಲಿ ವಿಪಕ್ಷಗಳ ಟೀಕೆಗಳಿಗೆ ಸರಿಯಾದ ಪ್ರತ್ಯುತ್ತರ ನೀಡಲು ಅಲ್ಲಿ ಪಕ್ಷದ ಸಾಕಷ್ಟು ಸಂಸದರು ಹಾಜರಿರಲಿಲ್ಲ. ರಾಜ್ಯಸಭೆಯಲ್ಲೂ ಇದೇ ಸ್ಥಿತಿಯಿತ್ತು. ಕೊನೆಗೆ ಶುಕ್ರವಾರ ಎಲ್ಲಾ ಸಂಸದರು ಹಾಜರಿರಬೇಕೆಂದು ಪಕ್ಷ ವಿಪ್ ಜಾರಿಮಾಡಿ ಮುಜುಗರ ತಪ್ಪಿಸುವ ಪ್ರಯತ್ನ ಮಾಡಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X