Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪರವಾನಿಗೆ ರಹಿತ ಕೊಳವೆಬಾವಿ : ಕ್ರಮ...

ಪರವಾನಿಗೆ ರಹಿತ ಕೊಳವೆಬಾವಿ : ಕ್ರಮ ಕೈಗೊಳ್ಳದಿರುವುದಕ್ಕೆ ಆಕ್ಷೇಪ

ಸುಳ್ಯದಲ್ಲಿ ಪರಿಶಿಷ್ಟ ಜಾತಿ -ಪಂಗಡಗಳ ಕುಂದುಕೊರತೆ ಸಭೆ

ವಾರ್ತಾಭಾರತಿವಾರ್ತಾಭಾರತಿ19 Nov 2016 5:59 PM IST
share
ಪರವಾನಿಗೆ ರಹಿತ ಕೊಳವೆಬಾವಿ : ಕ್ರಮ ಕೈಗೊಳ್ಳದಿರುವುದಕ್ಕೆ ಆಕ್ಷೇಪ

ಸುಳ್ಯ, ನ.19: ಪರಿಶಿಷ್ಟ ಜಾತಿ-ಪಂಗಡಗಳ ಕುಂದುಕೊರತೆ ಸಭೆ ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ತಹಶೀಲ್ದಾರ್ ಎನ್.ಎಂ.ಗಣೇಶ್‌ರ ಅಧ್ಯಕ್ಷತೆಯಲ್ಲಿ ನಡೆಯಿತು.

ತಾಲೂಕು ವೈದ್ಯಾಧಿಕಾರಿ ಡಾ.ಸುಬ್ರಹ್ಮಣ್ಯ, ಎಸ್ಸೈ ಚಂದ್ರಶೇಖರ್, ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ, ಕಾರ್ಯನಿರ್ವಹಣಾಧಿಕಾರಿ ಮಧುಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಪ್ರಭಾರ ಸಹಾಯಕ ನಿರ್ದೇಶಕ ಚಂದ್ರಶೇಖರ ಪೇರಾಲು, ನಗರ ಪಂಚಾಯತ್ ಮುಖ್ಯಾಧಿಕಾರಿ ಚಂದ್ರಕುಮಾರ್, ಹೆಡ್‌ಕಾನ್‌ಸ್ಟೇಬಲ್ ನಾರಾಯಣ ರೈ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸುಳ್ಯ ನಗರ ಪಂಚಾಯತ್ ಸದಸ್ಯ ಗೋಕುಲ್‌ದಾಸ್ ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದಿದ್ದು, ಅದನ್ನು ರದ್ದು ಮಾಡಲು ಹಿಂದಿನ ಸಭೆಗಳಲ್ಲಿ ಆಗ್ರಹಿಸಲಾಗಿದ್ದರೂ ಇನ್ನೂ ಕ್ರಮ ಕೈಗೊಂಡಿಲ್ಲ ಎಂದು ಸಂಜಯಕುಮಾರ್ ಆಕ್ಷೇಪಿಸಿದರು. ಒಂದು ತಿಂಗಳ ಅವಕಾಶ ನೀಡಿ ವಿಚಾರಣೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ತಹಶೀಲ್ದಾರ್ ಉತ್ತರಿಸಿದರು. ಡಿಸಿ ಮನ್ನಾ ಜಮೀನು ಸರ್ವೆ ಮಾಡುವ ಸಂದರ್ಭ ಹೋರಾಟ ಸಮಿತಿಯವರನ್ನು ಕರೆಯುವುದಿಲ್ಲ ಎಂದು ಅಚ್ಚುತ ಮಲ್ಕಜೆ ಆರೋಪಿಸಿದರು.

ತಾಲೂಕಿನಲ್ಲಿ 764 ಡಿಸಿ ಮನ್ನಾ ಜಮೀನುಗಳಿದ್ದು, ಅದರಲ್ಲಿ 476 ಕಡೆಗಳಲ್ಲಿ ಪರಿಶಿಷ್ಟರ ವಶದಲ್ಲಿದೆ. 68 ಕಡೆ ಇತರರು ಅತಿಕ್ರಮಣ ಮಾಡಿದ್ದಾರೆ. 18 ಕಡೆಗಳಲ್ಲಿ ಸಂಘ-ಸಂಸ್ಥೆಗಳು ಅತಿಕ್ರಮಣ ಮಾಡಿವೆ ಎಂದು ತಹಶೀಲ್ದಾರ್ ಹೇಳಿದರು.

ಸುಬ್ರಹ್ಮಣ್ಯ ಅಂಗನವಾಡಿ ಜಮೀನು ವಿವಾದದಲ್ಲಿದ್ದು, ಅನುದಾನ ಹಿಂದಕ್ಕೆ ಹೋಗದಂತೆ ವ್ಯವಸ್ಥೆ ಮಾಡುವಂತೆ ಆನಂದ ಬೆಳ್ಳಾರೆ ಆಗ್ರಹಿಸಿದರು. ಬದಲಿ ನಿವೇಶನದ ವ್ಯವಸ್ಥೆ ಆದರೆ ಕಾಮಗಾರಿಯನ್ನು ಆರಂಭಿಸಬಹುದು ಎಂದು ಇಒ ಉತ್ತರಿಸಿದರು. ಗೌರಿಹೊಳೆಗೆ ಅಕ್ರಮವಾಗಿ ಮಣ್ಣು ಸುರಿದಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳುವಂತೆ ಆನಂದ ಬೆಳ್ಳಾರೆ ಆಗ್ರಹಿಸಿದರು.

ಗುತ್ತಿಗಾರು ಗ್ರಾಮದಲ್ಲಿ ಖಾಸಗಿಯವರೊಬ್ಬರು ಪರವಾನಿಗೆ ಇಲ್ಲದೆ ಕೊಳವೆ ಬಾವಿ ಕೊರೆಸುತ್ತಿರುವ ದೂರು ಸ್ವೀಕರಿಸಲು ಪೊಲೀಸರು ನಿರಾಕರಿಸಿರುವ ವಿಚಾರ ಪರಿಶಿಷ್ಟ ಜಾತಿ-ಪಂಗಡದ ಕುಂದುಕೊರತೆ ಸಭೆಯಲ್ಲಿ ತೀವ್ರ ಚರ್ಚೆಗೆ ಕಾರಣವಾಯಿತು. ಸ್ಥಳಕ್ಕೆ ಕಂದಾಯ, ಪೊಲೀಸ್ ಇಲಾಖೆ ಹಾಗೂ ಪಿಡಿಒ ಆಗಮಿಸಿ ಕಾಮಗಾರಿ ತಡೆದು ಲಾರಿಯನ್ನು ಠಾಣೆಗೆಂದು ಕೊಂಡೊಯ್ದರು. ಆದರೆ ಲಾರಿಯನ್ನು ಅರ್ಧದಲ್ಲೇ ಪೊಲೀಸರು ಬಿಟ್ಟಿದ್ದು ಪ್ರಕರಣ ದಾಖಲಿಸಲು ನಿರಾಕರಿಸಿದ್ದಾರೆ ಎಂದು ಗುತ್ತಿಗಾರು ಗ್ರಾಮ ಪಂಚಾಯತ್ ಅಧ್ಯಕ್ಷ ಅಚ್ಚುತ ಗುತ್ತಿಗಾರು ಆರೋಪಿಸಿದರು.

ಕಳಂಜ ಗ್ರಾಮದಲ್ಲಿ ಸರ್ವೆ ನಂಬರ್ 52ರಲ್ಲಿ 82 ಸೆಂಟ್ಸ್ ಜಮೀನು ದಲಿತರಿಗೆ ಮಂಜೂರಾಗಿದ್ದು, ಅಲ್ಲಿ ಬೇರೆಯವರು ಮನೆ ಕಟ್ಟಿಕೊಂಡಿದ್ದಾರೆ. ಬೆಳ್ಳಾರೆಯ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಆನಂದ ಬೆಳ್ಳಾರೆ ದೂರಿದರು. ಉಬರಡ್ಕದಲ್ಲಿ ಸರ್ವೇ ನಂಬರ್ 112ರಲ್ಲಿ ಸರಕಾರಿ ಜಮೀನು ಅತಿಕ್ರಮಣ ಆಗಿದ್ದು, ಅದನ್ನು ಸ್ವಾಧೀನಪಡಿಸಿ ಪರಿಶಿಷ್ಟರಿಗೆ ನಿವೇಶನಕ್ಕೆ ಕಾಯ್ದಿರಿಸುವಂತೆ ಅಚ್ಚುತ ಮಲ್ಕಜೆ ಆಗ್ರಹಿಸಿದರು.

ಗುತ್ತಿಗಾರಿನಲ್ಲಿ ಸ್ಮಶಾನಕ್ಕೆ ಕಾಯ್ದಿರಿಸಿದ ಜಮೀನ್ನು ಅತಿಕ್ರಮಿಸಿ ಅಲ್ಲಿ ರಬ್ಬರ್ ಗಿಡಗಳನ್ನು ನೆಡಲಾಗಿದೆ ಎಂದು ಅಚ್ಚುತ ಗುತ್ತಿಗಾರು ಆಗ್ರಹಿಸಿದರು. ಪರಿಶೀಲನೆ ಮಾಡಿ ಅಗತ್ಯ ಬಿದ್ದರೆ ಪೊಲೀಸರ ಸಹಕಾರ ಪಡೆದು ಅದನ್ನು ತೆರವು ಮಾಡುವಂತೆ ಪಿಡಿಒಗೆ ಇಒ ಸೂಚಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X