Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವೀಣೆ ಶೇಷಣ್ಣ, ವಿ.ಎನ್.ರಾವ್ ರಾಷ್ಟ್ರೀಯ...

ವೀಣೆ ಶೇಷಣ್ಣ, ವಿ.ಎನ್.ರಾವ್ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ19 Nov 2016 9:39 PM IST
share
ವೀಣೆ ಶೇಷಣ್ಣ, ವಿ.ಎನ್.ರಾವ್ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

ಉಡುಪಿ, ನ.19: ನಾಡಿನ ಖ್ಯಾತನಾಮ ವೀಣಾ ವಾದಕ ಡಿ.ಬಾಲಕೃಷ್ಣ ಹಾಗೂ ಶಾಸ್ತ್ರೀಯ ಹಾಡುಗಾರ್ತಿ ಬಾಂಬೆ ಜಯಶ್ರೀ ರಾಮನಾಥ್ ಅವರಿಗೆ ಇಂದು ರಾಜಾಂಗಣದಲ್ಲಿ ನಡೆದಿರುವ ವೀಣೆ ಶೇಷಣ್ಣ ಸ್ಮಾರಕ ಸಂಗೀತೋತ್ಸವ ‘ವೀಣೆಯ ಬೆಡಗು’ ಕಾರ್ಯಕ್ರಮದಲ್ಲಿ ಕ್ರಮವಾಗಿ ವೀಣೆ ಶೇಷಣ್ಣ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿ ಹಾಗೂ ಸ್ವರಮೂರ್ತಿ ವಿ.ಎನ್.ರಾವ್ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು.

ಪರ್ಯಾಯ ಶ್ರೀ ಪೇಜಾವರ ಮಠ ಮತ್ತು ಬೆಂಗಳೂರಿನ ಸ್ವರಮೂರ್ತಿ ವಿ.ಎನ್. ರಾವ್ ಮೆಮೋರಿಯಲ್ ಟ್ರಸ್ಟ್ ವತಿಯಿಂದ ರಾಜಾಂಗಣದಲ್ಲಿ ನಡೆದಿರುವ ‘ವೀಣೆಯ ಬೆಡಗು’ ವೀಣೆ ಶೇಷಣ್ಣ ಸಂಗೀತೋತ್ಸವದ ಎರಡನೇ ದಿನದಲ್ಲಿ ಪರ್ಯಾಯ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಡಿ.ಬಾಲಕೃಷ್ಣ ಹಾಗೂ ಬಾಂಬೆ ಜಯಶ್ರೀಯವರಿಗೆ ಈ ಪ್ರಶಸ್ತಿ ಪ್ರದಾನ ಮಾಡಿದರು.

ಈ ಸಂದರ್ಭದಲ್ಲಿ ಆಶೀರ್ವಚನ ನೀಡಿದ ಶ್ರೀವಿಶ್ವೇಶತೀರ್ಥರು, ವೀಣೆ ಮತ್ತು ಕೊಳಲು (ವೇಣು) ನಮ್ಮ ಪ್ರಾಚೀನ ವಾದ್ಯಗಳಾಗಿದೆ. ಸಂಸ್ಕೃತಿಯ ಉಳಿವಿಗೆ ಋಷಿಮುನಿಗಳು, ಶಾಸ್ತ್ರ, ಪುರಾಣಗಳು ಹೇಗೆ ಕಾರಣವಾದವೊ ಹಾಗೆಯೇ ಇಂದು ಲಲಿತಕಲೆ, ಸಂಗೀತ, ನೃತ್ಯ, ಶಿಲ್ಪ ಇನ್ನಿತರ ಕಲೆಗಳು ಸಂಸ್ಕೃತಿ ಉಳಿವಿನಲ್ಲಿ ಪೋಷಕ ಪಾತ್ರ ವಹಿಸಿವೆ ಎಂದರು.

ಸಮಾರಂಭದಲ್ಲಿ ಭಾಗವಹಿಸಿದ್ದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಮಾತನಾಡಿ, ಆಧುನಿಕ ವಿದೇಶಿ ಸಂಗೀತಗಳ ಧಾವಂತದಲ್ಲಿ ಎಲ್ಲಿ ನಮ್ಮ ಶಾಸ್ತ್ರೀಯ ಸಂಗೀತಗಳು ಮರೆಯಾಗಿ ಬಿಡುತ್ತದೋ ಎಂಬ ಆತಂಕ ಕೆಲ ವರ್ಷಗಳ ಹಿಂದಿತ್ತು. ಆದರೆ ಇಂದು ಶಾಸ್ತ್ರೀಯ ಸಂಗೀತ ಮತ್ತೆ ಚಿಗುರೊಡೆದು ಹೆಮ್ಮರವಾಗಿದೆ. ಬಾಲಪ್ರತಿಭೆಗಳು ಹೆಚ್ಚುತ್ತಿರುವುದೇ ಇದರ ಸಂಕೇತ. ಯಾವುದೇ ಕಾರ್ಯಗಳಲ್ಲೂ ಹಿರಿಯರನ್ನು ಗೌರವಿಸಿ, ಕಿರಿಯರನ್ನು ಪ್ರೋತ್ಸಾಹಿಸಿ ಪ್ರೇರೇಪಿಸುವ ಕಾರ್ಯವಾಗಬೇಕು ಎಂದು ಹೇಳಿದರು.

ಸ್ವರಮೂರ್ತಿ ವಿ.ಎನ್. ರಾವ್ ಟ್ರಸ್ಟ್ ವತಿಯಿಂದ ಕಲಾವಿದರಿಗೆ ನೀಡುವ ಪ್ರಶಸ್ತಿಯ ಮೊತ್ತ 50 ಸಾವಿರ ರೂ. ಇದ್ದುದನ್ನು ಸಂಘಟಕರ ಮನವಿಯಂತೆ ಈ ವರ್ಷದಿಂದಲೇ ಒಂದು ಲಕ್ಷ ರೂ.ಗೆ ಹೆಚ್ಚಿಸಲಾಗುವುದು ಎಂದು ಡಾ. ವೀರೇಂದ್ರ ಹೆಗ್ಗಡೆ ಘೋಷಿಸಿದರು.

ಪೇಜಾವರ ಮಠದ ಕಿರಿಯ ಯತಿ ಶ್ರೀವಿಶ್ವಪ್ರಸನ್ನತೀರ್ಥ ಶ್ರೀಪಾದರು, ನ್ಯಾಶನಲ್ ಎಜುಕೇಶನ್ ಸೊಸೈಟಿ ಅಧ್ಯಕ್ಷ ಡಾ.ಎ.ಎಚ್. ರಾಮರಾವ್, ವಿದ್ವಾನ್ ಆರ್.ಎನ್.ತ್ಯಾಗರಾಜನ್, ಎನ್.ಆರ್.ಅನಂತನಾರಾಯಣ ಉಪಸ್ಥಿತರಿದ್ದರು.

ಟ್ರಸ್ಟ್ ಅಧ್ಯಕ್ಷ ಪ್ರೊ. ಮೈಸೂರು ವಿ. ಸುಬ್ರಹ್ಮಣ್ಯ ಸ್ವಾಗತಿಸಿದರು. ಕಲಾವಿದೆ ಉಮಾಶಂಕರಿ ಕಾರ್ಯಕ್ರಮ ನಿರೂಪಿಸಿ ಪ್ರೊ.ಎಂ.ಎಲ್.ಸಾಮಗ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X