Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ದ್ವಿತೀಯ ಟೆಸ್ಟ್: ಇಂಗ್ಲೆಂಡ್‌ಗೆ 405...

ದ್ವಿತೀಯ ಟೆಸ್ಟ್: ಇಂಗ್ಲೆಂಡ್‌ಗೆ 405 ರನ್ ಗುರಿ

ವಾರ್ತಾಭಾರತಿವಾರ್ತಾಭಾರತಿ20 Nov 2016 12:46 PM IST
share
ದ್ವಿತೀಯ ಟೆಸ್ಟ್: ಇಂಗ್ಲೆಂಡ್‌ಗೆ 405 ರನ್ ಗುರಿ

 ವಿಶಾಖಪಟ್ಟಣ, ನ.20: ಬಂದರು ನಗರಿಯಲ್ಲಿ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್ ತಂಡದ ಗೆಲುವಿಗೆ 405 ರನ್ ಗುರಿ ನೀಡಿದೆ.

ನಾಲ್ಕನೆ ದಿನದಾಟವಾದ ರವಿವಾರ ಅತ್ಯುತ್ತಮ ದಾಳಿ ಸಂಘಟಸಿದ ಇಂಗ್ಲೆಂಡ್‌ನ ವೇಗಿ ಸ್ಟುವರ್ಟ್ ಬ್ರಾಡ್(4-33) ಹಾಗೂ ಸ್ಪಿನ್ನರ್ ಆದಿಲ್ ರಶೀದ್(4-82) ಭಾರತವನ್ನು ಎರಡನೆ ಇನಿಂಗ್ಸ್‌ನಲ್ಲಿ 204 ರನ್‌ಗೆ ಆಲೌಟ್ ಮಾಡಿದರು. ಕೊನೆಯ ವಿಕೆಟ್‌ಗೆ ಉಪಯುಕ್ತ 42 ರನ್ ಜೊತೆಯಾಟ ನಡೆಸಿದ ಜಯಂತ್ ಯಾದವ್(ಅಜೇಯ 27) ಹಾಗೂ ಮುಹಮ್ಮದ್ ಶಮಿ(19) ಭಾರತ ತಂಡ ಇಂಗ್ಲೆಂಡ್‌ಗೆ 405 ರನ್ ಗುರಿ ನಿಗದಿಪಡಿಸಲು ನೆರವಾದರು.

ರವಿವಾರ 2ನೆ ಇನಿಂಗ್ಸ್ ಆರಂಭಿಸಿದ ನಾಯಕ ವಿರಾಟ್ ಕೊಹ್ಲಿ(81) ಹಾಗೂ ಅಜಿಂಕ್ಯ ರಹಾನೆ (26) ಜೋಡಿಯನ್ನು ಬೇಗನೆ ಬೇರ್ಪಡಿಸಲು ಬ್ರಾಡ್ ಯಶಸ್ವಿಯಾದರು. ರಹಾನೆ ನಿನ್ನೆಯ ಸ್ಕೋರ್‌ಗೆ ಕೇವಲ 4 ರನ್ ಸೇರಿಸಿ ವಿಕೆಟ್ ಒಪ್ಪಿಸಿದರು. ಕೊಹ್ಲಿ ಹಾಗೂ ರಹಾನೆ 4ನೆ ವಿಕೆಟ್‌ಗೆ 77 ರನ್ ಜೊತೆಯಾಟ ನಡೆಸಿ ತಂಡಕ್ಕೆ ಆಸರೆಯಾಗಿದ್ದರು. ಇದು ಭಾರತ 2ನೆ ಇನಿಂಗ್ಸ್‌ನಲ್ಲಿ ದಾಖಲಿಸಿದ ಗರಿಷ್ಠ ಜೊತೆಯಾಟವಾಗಿದೆ.

 ರಹಾನೆ ಔಟಾದ ಬೆನ್ನಿಗೆ ಆರ್.ಅಶ್ವಿನ್(7) ಬ್ರಾಡ್‌ಗೆ ವಿಕೆಟ್ ಒಪ್ಪಿಸಿದರು. ವೃದ್ದಿಮಾನ್ ಸಹಾ ಹಾಗೂ ರವೀಂದ್ರ ಜಡೇಜರನ್ನು ರಶೀದ್ ಪೆವಿಲಿಯನ್‌ಗೆ ಕಳುಹಿಸಿದರು. 109 ಎಸೆತಗಳಲ್ಲಿ 8 ಬೌಂಡರಿಗಳ ಸಹಿತ 81 ರನ್ ಗಳಿಸಿದ್ದ ಕೊಹ್ಲಿಗೆ ರಶೀದ್ ಶತಕವನ್ನು ನಿರಾಕರಿಸಿದರು.

ಉಮೇಶ್ ಯಾದವ್ ಶೂನ್ಯಕ್ಕೆ ಔಟಾದಾಗ ಭಾರತಕ್ಕೆ 400ಕ್ಕೂ ಅಧಿಕ ಮುನ್ನಡೆ ಸಾಧಿಸಲು 38 ರನ್ ಅಗತ್ಯವಿತ್ತು. ಆಗ 10ನೆ ವಿಕೆಟ್‌ಗೆ 42 ರನ್ ಸೇರಿಸಿದ ಜಯಂತ್ ಯಾದವ್(ಅಜೇಯ 27) ಹಾಗೂ ಮುಹಮ್ಮದ್ ಶಮಿ(19) ಇಂಗ್ಲೆಂಡ್ ಗೆಲುವಿಗೆ 405 ರನ್ ನಿಗದಿಪಡಿಸಲು ಕಾರಣರಾದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X