Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇಸ್ಲಾಮಿಕ್ ಬ್ಯಾಂಕಿಂಗ್ ಪ್ರಾರಂಭಕ್ಕೆ...

ಇಸ್ಲಾಮಿಕ್ ಬ್ಯಾಂಕಿಂಗ್ ಪ್ರಾರಂಭಕ್ಕೆ ರಿಸರ್ವ್ ಬ್ಯಾಂಕ್ ನಿಂದ ಮಹತ್ವದ ಹೆಜ್ಜೆ

ನನಸಾಗುವತ್ತ ಬಡ್ಡಿ ರಹಿತ ಆರ್ಥಿಕ ವ್ಯವಸ್ಥೆಯ ಕನಸು

ವಾರ್ತಾಭಾರತಿವಾರ್ತಾಭಾರತಿ20 Nov 2016 4:23 PM IST
share
ಇಸ್ಲಾಮಿಕ್ ಬ್ಯಾಂಕಿಂಗ್ ಪ್ರಾರಂಭಕ್ಕೆ ರಿಸರ್ವ್ ಬ್ಯಾಂಕ್ ನಿಂದ ಮಹತ್ವದ ಹೆಜ್ಜೆ

ಹೊಸದಿಲ್ಲಿ,ನ.20: ದೇಶದಲ್ಲಿ ಶರಿಯಾಕ್ಕೆ ಅನುಗುಣವಾಗಿ ಬಡ್ಡಿಮುಕ್ತ ಬ್ಯಾಂಕಿಂಗ್‌ನ್ನು ಹಂತಹಂತವಾಗಿ ಪರಿಚಯಿಸಲು ಸಾಂಪ್ರದಾಯಿಕ ಬ್ಯಾಂಕುಗಳಲ್ಲಿ ‘ಇಸ್ಲಾಮಿಕ್ ಗವಾಕ್ಷಿ ’ಯನ್ನು ಪ್ರಾರಂಭಿಸುವ ಪ್ರಸ್ತಾವನೆಯೊಂದನ್ನು ಭಾರತೀಯ ರಿಜರ್ವ್ ಬ್ಯಾಂಕ್ ಹೊಂದಿದೆ.

ಧಾರ್ಮಿಕ ಕಾರಣಗಳಿಂದಾಗಿ ಬ್ಯಾಂಕಿಂಗ್ ವ್ಯವಸ್ಥೆಯಿಂದ ಹೊರಗುಳಿದಿರುವ ಸಮಾಜದ ವರ್ಗಗಳ ಆರ್ಥಿಕ ಸೇರ್ಪಡೆಯನ್ನು ಖಚಿತಪಡಿಸಲು ಇಸ್ಲಾಮಿಕ್ ಬ್ಯಾಂಕಿಂಗ್‌ನ್ನು ಆರಂಭಿಸುವ ಸಾಧ್ಯತೆಯನ್ನು ಕೇಂದ್ರ ಮತ್ತು ಆರ್‌ಬಿಐ ಬಹುಸಮಯದಿಂದ ಪರಿಶೀಲಿಸುತ್ತಿದ್ದವು.

ಇಸ್ಲಾಮಿಕ್ ಹಣಕಾಸಿನ ಸಂಕೀರ್ಣತೆಗಳು ಮತ್ತು ಈ ವಿಷಯಕ್ಕೆ ಸಂಬಂಧಿಸಿದಂತೆ ವಿವಿಧ ನಿಯಂತ್ರಣ ಹಾಗೂ ಉಸ್ತುವಾರಿ ಸವಾಲುಗಳನ್ನು ಪರಿಗಣಿಸಿ,ಜೊತೆಗೆ ಭಾರತೀಯ ಬ್ಯಾಂಕುಗಳು ಈ ಕ್ಷೇತ್ರದಲ್ಲಿ ಅನುಭವ ಹೊಂದಿಲ್ಲವಾದ್ದರಿಂದ ದೇಶದಲ್ಲಿ ಇಸ್ಲಾಮಿಕ್ ಬ್ಯಾಂಕಿಂಗ್‌ನ್ನು ಹಂತಹಂತವಾಗಿ ಜಾರಿಗೊಳಿಸಬಹುದು ಎನ್ನುವುದು ನಮ್ಮ ಖಚಿತ ಅಭಿಪ್ರಾಯವಾಗಿದೆ. ಆರಂಭದಲ್ಲಿ ಸರಕಾರದಿಂದ ಅಗತ್ಯ ಅಧಿಸೂಚನೆ ಹೊರಬಿದ್ದ ಬಳಿಕ ಸಾಂಪ್ರದಾಯಕ ಬ್ಯಾಂಕುಗಳಲ್ಲಿರುವ ಹಣಕಾಸು ಯೋಜನೆಗಳಂತಹ ಕೆಲವು ಸರಳ ಉತ್ಪನ್ನಗಳನ್ನು ಇಸ್ಲಾಮಿಕ್ ಗವಾಕ್ಷಿಯ ಮೂಲಕ ಪರಿಚಯಿಸುವುದನ್ನು ಪರಿಗಣಿಸಬಹುದಾಗಿದೆ. ಕಾಲಕ್ರಮೇಣ ಅನುಭವದ ಆಧಾರದಲ್ಲಿ ನಂತರದ ಹಂತದಲ್ಲಿ ಲಾಭ-ನಷ್ಟ ಹಂಚಿಕೆಯ ಸಂಕೀರ್ಣ ಉತ್ಪನ್ನಗಳೊಂದಿಗೆ ಪೂರ್ಣ ಪ್ರಮಾಣದಲ್ಲಿ ಇಸ್ಲಾಮಿಕ್ ಬ್ಯಾಂಕಿಂಗ್‌ನ್ನು ಆರಂಭಿಸಬಹುದಾಗಿದೆ ಎಂದು ಆರ್‌ಬಿಐ ಪತ್ರವೊಂದರಲ್ಲಿ ವಿತ್ತ ಸಚಿವಾಲಯಕ್ಕೆ ತಿಳಿಸಿದೆ. ಸುದ್ದಿಸಂಸ್ಥೆಯು ಆರ್‌ಟಿಐ ಕಾಯ್ದೆಯಡಿ ಸಲ್ಲಿಸಿದ್ದ ಅರ್ಜಿಗೆ ಉತ್ತರವಾಗಿ ಈ ಪತ್ರದ ಪ್ರತಿಯು ಲಭ್ಯವಾಗಿದೆ.

ಇಸ್ಲಾಮ್ ಧರ್ಮದಲ್ಲಿ ಬಡ್ಡಿಯನ್ನು ನಿಷೇಧಿಸಲಾಗಿದ್ದು, ಇಸ್ಲಾಮಿಕ್ ಅಥವಾ ಶರಿಯಾ ಬ್ಯಾಂಕಿಂಗ್ ಬಡ್ಡಿಯನ್ನು ವಿಧಿಸದಿರುವ ನೀತಿಗಳನ್ನು ಆಧರಿಸಿರುವ ಹಣಕಾಸು ವ್ಯವಸ್ಥೆಯಾಗಿದೆ.

 ಆರ್ಥಿಕ ಸೇರ್ಪಡೆಗೆ ಆಸ್ತಿ ಮತ್ತು ಬಾಧ್ಯತೆ ಈ ಎರಡೂ ವಿಭಾಗಗಳಲ್ಲಿ ಬಡ್ಡಿಮುಕ್ತ ಬ್ಯಾಂಕಿಂಗ್‌ಗೆ ಶರಿಯಾಕ್ಕೆ ಅನುಗುಣವಾಗಿದೆಯೆಂಬ ಪ್ರಮಾಣೀಕೃತ ಉತ್ಪನ್ನಗಳು ಅಗತ್ಯವಾಗಿವೆ ಹಾಗೂ ಬಡ್ಡಿಮುಕ್ತ ಬ್ಯಾಂಕಿಂಗ್‌ನಡಿ ಸಂಗ್ರಹಿತ ಹಣವನ್ನು ಇತರ ಹಣದೊಂದಿಗೆ ಸೇರಿಸುವಂತಿಲ್ಲ,ಹೀಗಾಗಿ ಪ್ರತ್ಯೇಕ ಗವಾಕ್ಷಿಯಡಿ ಈ ಬ್ಯಾಂಕಿಂಗ್‌ನ್ನು ನಿರ್ವಹಿಸಬೇಕಾಗುತ್ತದೆ ಎನ್ನುವುದು ನಮ್ಮ ಅಭಿಪ್ರಾಯವಾಗಿದೆ ಎಂದೂ ಆರ್‌ಬಿಐ ಪತ್ರವು ತಿಳಿಸಿದೆ.

ಆರ್‌ಬಿಐ ಪ್ರಸ್ತಾವನೆಯು ಅಂತರ್ ಇಲಾಖಾ ಸಮಿತಿಯ ಶಿಫಾರಸುಗಳ ಆಧಾರದಲ್ಲಿ ಭಾರತದಲ್ಲಿ ಇಸ್ಲಾಮಿಕ್ ಬ್ಯಾಂಕಿಂಗ್‌ನ್ನು ಪರಿಚಯಿಸುವ ಸಾಧ್ಯಾಸಾಧ್ಯತೆಗಳಿಗೆ ಸಂಬಂಧಿಸಿದಂತೆ ನಡೆಸಲಾದ ಕಾನೂನಾತ್ಮಕ,ತಾಂತ್ರಿಕ ಮತ್ತು ನಿಯಂತ್ರಣ ವಿಷಯಗಳ ಪರಿಶೀಲನೆಯನ್ನು ಆಧರಿಸಿದೆ.

ಆರ್‌ಬಿಐ ತಾಂತ್ರಿಕ ವಿಶ್ಲೇಷಣೆ ವರದಿಯೊಂದನ್ನೂ ಸಿದ್ಧಪಡಿಸಿದ್ದು, ಅದನ್ನು ವಿತ್ತ ಸಚಿವಾಲಯದ ಪರಿಶೀಲನೆಗೆ ಕಳುಹಿಸಲಾಗಿದೆ.

ಭಾರತದಲ್ಲಿ ಇಸ್ಲಾಮಿಕ್ ಬ್ಯಾಂಕಿಂಗ್ ಉತ್ಪನ್ನಗಳನ್ನು ಪರಿಚಯಿಸಲು ನಿರ್ಧರಿಸಿದ ಪಕ್ಷದಲ್ಲಿ ಅದಕ್ಕಾಗಿ ಆರ್‌ಬಿಐ ನಿರ್ವಹಣೆ ಮತ್ತು ನಿಯಂತ್ರಣ ಮಾರ್ಗಸೂಚಿಯನ್ನು ರೂಪಿಸುವುದು ಅಗತ್ಯವಾಗುತ್ತದೆ ಎಂದೂ ಪತ್ರವು ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X