Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ದಿಲ್ಲಿ ಹಾಫ್ ಮ್ಯಾರಥಾನ್: ಕೀನ್ಯದ...

ದಿಲ್ಲಿ ಹಾಫ್ ಮ್ಯಾರಥಾನ್: ಕೀನ್ಯದ ಕಿಪ್‌ಚೋಗ್ ಚಾಂಪಿಯನ್

ವಾರ್ತಾಭಾರತಿವಾರ್ತಾಭಾರತಿ20 Nov 2016 4:31 PM IST
share
ದಿಲ್ಲಿ ಹಾಫ್ ಮ್ಯಾರಥಾನ್: ಕೀನ್ಯದ ಕಿಪ್‌ಚೋಗ್ ಚಾಂಪಿಯನ್

 ಹೊಸದಿಲ್ಲಿ, ನ.20: ಹಾಲಿ ಒಲಿಂಪಿಕ್ ಮ್ಯಾರಥಾನ್ ಚಾಂಪಿಯನ್ ಕೀನ್ಯದ ಇಲಿಯುಡ್ ಕಿಪ್‌ಚೋಗ್ ನಿರೀಕ್ಷೆಯಂತೆಯೇ ದಿಲ್ಲಿ ಹಾಫ್ ಮ್ಯಾರಥಾನ್‌ನ ಪುರುಷರ ವಿಭಾಗದಲ್ಲಿ ಚಾಂಪಿಯನ್ ಆಗಿದ್ದಾರೆ.

ರವಿವಾರ ಬೆಳಗ್ಗೆ ರಾಷ್ಟ್ರರಾಜಧಾನಿಯಲ್ಲಿ ನಡೆದ ಮ್ಯಾರಥಾನ್‌ನಲ್ಲಿ ಸಾವಿರಾರು ಜನರು ಭಾಗವಹಿಸಿದ್ದರು. 21.097 ಕಿ.ಮೀ. ದೂರವನ್ನು 59 ನಿಮಿಷ ಹಾಗೂ 44 ಸೆಕೆಂಡ್‌ನಲ್ಲಿ ಗುರಿ ತಲುಪಿದ ಕಿಪ್‌ಚೋಗ್ ಮೊದಲ ಸ್ಥಾನ ಪಡೆದರು. ಇಥಿಯೋಪಿಯದ ಯಿಗ್ರೆಮ್ ಡೆಮೆಲಾಶ್(59.48 ಸೆ.) ಎರಡನೆ ಹಾಗೂ ಕೀನ್ಯದ ಇನ್ನೋರ್ವ ಓಟಗಾರ ಅಗಸ್ಟಿನ್ ಚೋಗ್(60.01) ಮೂರನೆ ಸ್ಥಾನ ಪಡೆದರು.

ಮಹಿಳೆಯರ ವಿಭಾಗದಲ್ಲಿ ಎಥಿಯೋಪಿಯದ ವರ್ಕ್‌ನೆಶ್ ಡೆಗೆಫಾ ಒಂದು ಗಂಟೆ, 7 ನಿಮಿಷ, 42 ಸೆಕೆಂಡ್‌ನಲ್ಲಿ ಗುರಿ ತಲುಪಿ ಚಾಂಪಿಯನ್ ಆದರು. ಇಥಿಯೋಪಿಯದ ಅಬಬೆಲ್ ಯೆಶನೆಹ್(1:07:52) ಹಾಗೂ ಕೀನ್ಯದ ಹೆಲ್ಹಾ ಕಿಪ್ರೊಪ್(1:08:11) ಕ್ರಮವಾಗಿ 2ನೆ ಹಾಗೂ 3ನೆ ಸ್ಥಾನ ಪಡೆದರು.

ಪುರುಷರ ಹಾಗೂ ಮಹಿಳಾ ವಿಭಾಗದ ಮ್ಯಾರಥಾನ್‌ನಲ್ಲಿ ಮೊದಲ ಸ್ಥಾನ ಪಡೆಯುವವರು 27,000 ಡಾಲರ್ ಬಹುಮಾನ ಗೆಲ್ಲಲಿದ್ದಾರೆ.

ಭಾರತದ ಓಟಗಾರರ ಪೈಕಿ ಜಿ.ಲಕ್ಷ್ಮಣನ್ 1 ಗಂಟೆ, 15 ನಿಮಿಷ ಹಾಗೂ 15 ಸೆಕೆಂಡ್‌ನಲ್ಲಿ ಗುರಿ ತಲುಪಿ ಮೊದಲ ಸ್ಥಾನ ಪಡೆದರು. ಮುಹಮ್ಮದ್ ಯೂನಿಸ್(1:04:38) ಹಾಗೂ ಮಾನ್ ಸಿಂಗ್(1:04:40) ಕ್ರಮವಾಗಿ ಎರಡನೆ ಹಾಗೂ ಮೂರನೆ ಸ್ಥಾನ ಪಡೆದರು. ಭಾರತೀಯ ಮಹಿಳೆಯರಲ್ಲಿ ಮೋನಿಕಾ ಅತ್ರೆ ವೈಯಕ್ತಿಕ ಶ್ರೇಷ್ಠ ಸಮಯದಲ್ಲಿ(1ಗಂಟೆ, 15 ನಿಮಿಷ, 34 ಸೆಕೆಂಡ್) ಗುರಿ ತಲುಪಿದರು. ಸಂಜೀವನಿ ಜಾಧವ್(1:15:35) ಎರಡನೆ ಹಾಗೂ ಸ್ವಾತಿ ಗಧಾವೆ(1:17:43) ಮೂರನೆ ಸ್ಥಾನ ಪಡೆದಿದ್ದಾರೆ.

  ‘‘ಎರಡನೆ ಬಾರಿ ಭಾರತದಲ್ಲಿ ಮ್ಯಾರಥಾನ್‌ನಲ್ಲಿ ಭಾಗವಹಿಸಿರುವುದಕ್ಕೆ ನನಗೆ ತುಂಬಾ ಸಂತೋಷವಾಗಿದೆ. ಇಲ್ಲಿನ ವಾತಾವರಣ ಉತ್ತಮವಾಗಿದೆ’’ ಎಂದು ಕೀನ್ಯದ ಓಟದ ದಂತಕತೆ, 2010ರ ದಿಲ್ಲಿ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ 5000 ಮೀ.ಓಟದಲ್ಲಿ ಬೆಳ್ಳಿ ಜಯಿಸಿದ್ದ ಕಿಪ್‌ಚೋಗ್ ಹೇಳಿದ್ದಾರೆ.

 ಒಟ್ಟು 2,70,000 ಡಾಲರ್ ಬಹುಮಾನ ಮೊತ್ತದ ಮ್ಯಾರಥಾನ್‌ನಲ್ಲಿ ಎಲೈಟ್ ಹಾಫ್ ಮ್ಯಾರಥಾನ್ ವಿಭಾಗದಲ್ಲಿ(21.097 ಕಿ.ಮೀ.) 12,000 ಓಟಗಾರರು, ಗ್ರೇಟ್ ದಿಲ್ಲಿ ರನ್‌ನಲ್ಲಿ(6 ಕಿ.ಮೀ.) 19,000 ಜನರು ಭಾಗವಹಿಸಿದ್ದರು. ಹಿರಿಯ ನಾಗರಿಕರ ಓಟದಲ್ಲಿ(4 ಕಿ.ಮೀ.) ಸುಮಾರು 1000 ಹಾಗೂ ಚಾಂಪಿಯನ್ಸ್‌ರೊಂದಿಗೆ ವಿಕಲಚೇತನರ ವಿಭಾಗದಲ್ಲಿ(4 ಕಿ.ಮೀ.) 500 ಮಂದಿ ಸೇರಿದಂತೆ ಒಟ್ಟು ಸುಮಾರು 34,000 ಮಂದಿ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X