Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬ್ಯಾಂಕ್‌ಗಳಿಗೆ ರಜೆ: ಎಟಿಎಂ ಮುಂದೆ...

ಬ್ಯಾಂಕ್‌ಗಳಿಗೆ ರಜೆ: ಎಟಿಎಂ ಮುಂದೆ ಹೆಚ್ಚಿದ ಜನಸಂದಣಿ

ವಾರ್ತಾಭಾರತಿವಾರ್ತಾಭಾರತಿ20 Nov 2016 11:47 PM IST
share

ಮುಂಬೈ, ನ.20: ಬ್ಯಾಂಕ್‌ಗಳಿಗೆ ಇಂದು ರಜೆ ಇದ್ದ ಕಾರಣ ಎಟಿಎಂ ಕೇಂದ್ರಗಳೆದುರು ಇಂದು ಜನಸಂದಣಿ ಹೆಚ್ಚಿತ್ತು. ಬಹುತೇಕ ಎಟಿಎಂಗಳಲ್ಲಿ ಹಣದ ಲಭ್ಯತೆ ಇದ್ದ ಹಿನ್ನೆಲೆಯಲ್ಲಿ ಶನಿವಾರ ತಡರಾತ್ರಿವರೆಗೂ ಜನ ಎಟಿಎಂನಿಂದ ಹಣ ಪಡೆಯಲು ಸಾಧ್ಯವಾಗಿದೆ. ಆದರೆ ರವಿವಾರ ಪರಿಸ್ಥಿತಿ ಭಿನ್ನವಿತ್ತು. ಹೆಚ್ಚಿನ ಎಟಿಎಂ ಎದುರು ಜನ ಸಾಲುಗಟ್ಟಿ ನಿಂತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಶನಿವಾರ ರಾತ್ರಿ 11 ಗಂಟೆ ವೇಳೆಗೆ ಕೆಲಸ ಮುಗಿಸಿ ಲೋಕಲ್ ರೈಲಿನಲ್ಲಿ ಥಾಣೆಗೆ ವಾಪಸಾಗುತ್ತಿದ್ದಾಗ ಸ್ನೇಹಿತನ ಕರೆ ಬಂತು. ವಿಕ್ರೋಲಿಯ ಎಟಿಎಂ ನಲ್ಲಿ ರಶ್ ಕಡಿಮೆ ಇದೆ. ಸುಲಭದಲ್ಲಿ ಹಣ ಪಡೆಯಬಹುದು ಎಂದ. ತಕ್ಷಣ ಅಲ್ಲಿ ಇಳಿದು ವಿಕ್ರೋಲಿಗೆ ತೆರಳಿ 10 ನಿಮಿಷದೊಳಗೆ ಹಣ ಪಡೆದು ಬಂದೆ ಎಂದು ಥಾಣೆಯ ನಿವಾಸಿ ಸುನಿಲ್ ಗಾವ್ಡೆ ಎಂಬವರು ತಿಳಿಸಿದ್ದಾರೆ. ಆದರೆ ನಟ ಮತ್ತು ಮಾಡೆಲ್ ಆಗಿರುವ ವಿನ್ ರಾಣಾರಿಗೆ ಎರಡು ಗಂಟೆ ಕ್ಯೂನಲ್ಲಿ ನಿಂತರೂ ಹಣ ಪಡೆಯಲು ಸಾಧ್ಯವಾಗಿಲ್ಲ. ಇವರ ಸರದಿ ಬರುವ ವೇಳೆಗೆ ಎಟಿಎಂನಲ್ಲಿ ಹಣ ಖಾಲಿಯಾಗಿತ್ತು. ವಿರಾರ್ ಉಪನಗರದಲ್ಲಿ ಎಟಿಎಂ ಎದುರು ವಿಪರೀತ ಕ್ಯೂ ಇದ್ದ ಕಾರಣ ಸರದಿ ಸಾಲಿನಲ್ಲಿ ನಿಂತವರಿಗೆ ಕುಳಿತು ದಣಿವಾರಿಸಿಕೊಳ್ಳಲು ಕುರ್ಚಿಗಳನ್ನು, ಕುಡಿಯಲು ನೀರನ್ನು ಒದಗಿಸಲಾಯಿತು. ಶನಿವಾರ ತಡರಾತ್ರಿವರೆಗೂ ಎಟಿಎಂಗಳಲ್ಲಿ ಹಣ ಇತ್ತು ಮತ್ತು ರವಿವಾರ ಮುಂಜಾನೆಯೂ ಎಟಿಎಂ ಕಾರ್ಯಾಚರಿಸುತ್ತಿತ್ತು. ಇದೊಂದು ಶುಭ ಸೂಚನೆ ಎಂದು ವಿರಾರ್ ಉಪನಗರದ ನಿವಾಸಿ ಮಮತಾ ತಿಳಿಸಿದರು. ಗೋರೆಗಾಂವ್ ಉಪನಗರದಲ್ಲಿ ಎಟಿಎಂ ಎದುರು ಸರತಿ ಸಾಲಿನಲ್ಲಿ ನಿಂತಿದ್ದವರು ಹಿರಿಯ ನಾಗರಿಕರೋರ್ವರಿಗೆ ಮೊದಲು ಹಣ ಪಡೆಯಲು ಅವಕಾಶ ಮಾಡಿಕೊಟ್ಟರು. ದಿನ ಕಳೆದಂತೆ ಒಟ್ಟಾರೆ ಪರಿಸ್ಥಿತಿಯಲ್ಲಿ ಸುಧಾರಣೆಯಾಗುತ್ತಿದೆ. ಆದರೆ ಹಣದ ಬಿಕ್ಕಟ್ಟು ಮತ್ತು ಕೆಲವು ಎಟಿಎಂಗಳಲ್ಲಿ ಹಣ ಇಲ್ಲದಿರುವ ಪರಿಸ್ಥಿತಿಯಿಂದ ಮುಂದಿನ ದಿನಗಳಲ್ಲಿ ಜನಸಾಮಾನ್ಯರಿಗೆ ಮತ್ತಷ್ಟು ತೊಂದರೆಯಾಗಬಹುದು ಎಂದು ಹಿರಿಯ ನಾಗರಿಕರೋರ್ವರು ಅಭಿಪ್ರಾಯ ಪಟ್ಟಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X