Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಚ್ಛೇ ದಿನ್ ಕಳೆದುಕೊಂಡ ಪಾನ್ ವಾಲಾ!

ಅಚ್ಛೇ ದಿನ್ ಕಳೆದುಕೊಂಡ ಪಾನ್ ವಾಲಾ!

ಇದ್ದಕ್ಕಿದ್ದಂತೆ ಬ್ಯಾಂಕ್ ಖಾತೆಗೆ ಬಿದ್ದಿದ್ದು ಎಷ್ಟು ಕೋಟಿ ಗೊತ್ತೇ ?

ವಾರ್ತಾಭಾರತಿವಾರ್ತಾಭಾರತಿ21 Nov 2016 12:13 PM IST
share
ಅಚ್ಛೇ ದಿನ್ ಕಳೆದುಕೊಂಡ ಪಾನ್ ವಾಲಾ!

ಪಾಟ್ನಾ, ನ.21:  ಜಾರ್ಖಂಡ್ ರಾಜ್ಯದ ಗಿರಿಡಿಹ್ ಜಿಲ್ಲೆಯ ಸಾಮಾನ್ಯ ಪಾನ್ ವಾಲಾ ದಿನ ಬೆಳಗಾಗುವುದರೊಳಗಾಗಿ ತನ್ನ ಬ್ಯಾಂಕ್ ಖಾತೆಯಲ್ಲಿ ರೂ 9.99 ಕೋಟಿ  ಹೊಂದಿರುವ ಘಟನೆಯೊಂದು ವರದಿಯಾಗಿದೆ. ಕಾಳಧನ ಹೊಂದಿರುವವರು ಅದನ್ನು ವಿಲೇವಾರಿಗೊಳಿಸುವ ನಿಟ್ಟಿನಲ್ಲಿ ಈ ಅಮಾಯಕನ ಬ್ಯಾಂಕ್ ಖಾತೆಗೆ ಅದನ್ನು ಜಮೆಗೊಳಿಸಿರಬಹುದೆಂದು ತನಿಖಾಕಾರರು ಅಭಿಪ್ರಾಯಪಟ್ಟಿದ್ದಾರೆ.

ಪಪ್ಪು ಕುಮಾರ್ ತಿವಾರಿ ಎಂಬ ಹೆಸರಿನ ಯುವ ಪಾನ್ ವಾಲಾನೊಬ್ಬ ಗಿರಿಡಿಹ್ ಜಿಲ್ಲೆಯ ಗಂಡೆ ಎಂಬಲ್ಲಿ ಪಾನ್ ಅಂಗಡಿಯೊಂದನ್ನು ಹೊಂದಿದ್ದಾನೆ. ಆತ ಎಟಿಎಂ ಒಂದರಲ್ಲಿ ರೂ 1000 ಹಿಂಪಡೆಯಲು ಹೋಗಿದ್ದಾಗ ಆತನ ಎಸ್ ಬಿ ಐ ಖಾತೆಯನ್ನು ಬ್ಯಾಂಕ್ ಅಧಿಕಾರಿಗಳು ಬ್ಲಾಕ್ ಮಾಡಿದ್ದಾರೆಂದು ತಿಳಿದು ಆಶ್ಚರ್ಯವಾಯಿತು.

ಆತ ಹಲವಾರು ಎಟಿಎಂಗಳನ್ನು ಸುತ್ತಿದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಕೊನೆಗೆ ಆತ ಹತ್ತಿರದ ಎಸ್ ಬಿ ಐ ಶಾಖೆಗೆ ಹೋಗಿ ತನ್ನ ಖಾತೆಯಲ್ಲಿ  ರೂ 4,580 ಇದ್ದರೂ ತನಗೇಕೆ ರೂ.1000 ಹಿಂಪಡೆಯಲು ಸಾಧ್ಯವಾಗುತ್ತಿಲ್ಲ ಎಂದು ಕೇಳಿದಾಗ ಬ್ಯಾಂಕ್ ಅಧಿಕಾರಿಗಳು ಆತನಲ್ಲಿ ಹಲವಾರು ಪ್ರಶ್ನೆಗಳನ್ನು ಕೇಳಿದರು. ಅಲ್ಲಿಯ ತನಕ ಆತನಿಗೆ ನಿಜಸಂಗತಿಯೇನೆಂದು ತಿಳಿದಿರಲಿಲ್ಲ. ಆದರೆ ಆತನೊಬ್ಬ ಸಾಮಾನ್ಯ ಪಾನ್ ವಾಲಾ ಎಂದು ಅಧಿಕಾರಿಗಳು ಒಪ್ಪಲು ತಯಾರಿರಲಿಲ್ಲ. ಬ್ಯಾಂಕ್ ಅಧಿಕಾರಿಗಳು ಪೊಲೀಸರಿಗೆ ಕರೆ ಮಾಡಿದಾಗ ಆತನಿಗೆ ಆಘಾತವಾಗಿತ್ತು. ನಂತರವಷ್ಟೇ ಅಧಿಕಾರಿಗಳು ಆತನ ಬ್ಯಾಂಕ್ ಖಾತೆಯಲ್ಲಿ ರೂ 9,99,95,498 ಇದೆ ಹಾಗೂ ಹೈದರಾಬಾದಿನ ಸೈಬರ್ ಕ್ರೈಮ್  ಘಟಕ ಆತನ ಖಾತೆಯನ್ನು ಬ್ಲಾಕ್ ಮಾಡಿದೆ ಎಂದು ತಿಳಿಸಿದರು.

ತನ್ನ ಬಳಿ ಈವರೆಗೆ ಇದ್ದ ಅತ್ಯಧಿಕ ಮೊತ್ತವೆಂದರೆ ರೂ 1.5 ಲಕ್ಷ ಎಂದು ತಿವಾರಿ  ಹೇಳಿದ್ದಾನೆ.  ಯಾವುದೇ ಕೆಲಸ ಮಾಡದೆ ಇಷ್ಟೊಂದು ಹಣ ನನ್ನ ಬ್ಯಾಂಕ್ ಖಾತೆಯಲ್ಲಿ ಹೊಂದುವುದು ನನಗಿಷ್ಟವಿಲ್ಲ ಎಂದು ಹೇಳುವ ತಿವಾರಿ ತನಗೆ ಹಾಗೂ ತನ್ನ ಕುಟುಂಬಕ್ಕೆ ನಿದ್ದೆ ಬರದಂತಾಗಿದೆ ಎಂದಿದ್ದಾನೆ.

ಘಟನೆಯ ಬಗ್ಗೆ ತನಿಖೆ ಮುಂದುವರಿದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X