Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಿಎಂ ಸುರಕ್ಷತಾ ಹೊಣೆ ಹೊತ್ತ ಪ್ರಪ್ರಥಮ...

ಸಿಎಂ ಸುರಕ್ಷತಾ ಹೊಣೆ ಹೊತ್ತ ಪ್ರಪ್ರಥಮ ಮಹಿಳಾ ಐಪಿಎಸ್ ಅಧಿಕಾರಿಣಿ ಸುಭಾಷಿಣಿ

ವಾರ್ತಾಭಾರತಿವಾರ್ತಾಭಾರತಿ21 Nov 2016 2:24 PM IST
share
ಸಿಎಂ ಸುರಕ್ಷತಾ ಹೊಣೆ ಹೊತ್ತ ಪ್ರಪ್ರಥಮ ಮಹಿಳಾ ಐಪಿಎಸ್ ಅಧಿಕಾರಿಣಿ ಸುಭಾಷಿಣಿ

ಹೊಸದಿಲ್ಲಿ, ನ.21: ಸ್ವಾತಂತ್ರ್ಯೋತ್ತರ ಭಾರತದಲ್ಲಿ ಮುಖ್ಯಮಂತ್ರಿಯೊಬ್ಬರ ಸುರಕ್ಷೆಯ ಹೊಣೆಗಾರಿಕೆ ಹೊತ್ತುಕೊಂಡ ಪ್ರಥಮ ಮಹಿಳಾ ಐಪಿಎಸ್ ಅಧಿಕಾರಿಯಾಗಿದ್ದಾರೆ ಸುಭಾಷಿಣಿ ಶಂಕರನ್. ಸೆಪ್ಟೆಂಬರ್ ತಿಂಗಳಲ್ಲಿ ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೋನೋವಾಲ್ ಅವರು ಹೊಜೈ ನಿಂದ ಗುವಾಹಟಿಗೆ  ತೆರಳುವಾಗ ಅಗತ್ಯ ಸುರಕ್ಷಾ ಕ್ರಮಗಳನ್ನು ಕೈಗೊಳ್ಳುವ ಉಸ್ತುವಾರಿಯನ್ನು ಸುಭಾಷಿಣಿಯವರಿಗೆ ವಹಿಸಲಾಗಿತ್ತು.

ಮುಖ್ಯಮಂತ್ರಿ ಹೋಗುವ ದಾರಿಗಳನ್ನು ಅವರಿಗಾಗಿ ಸುರಕ್ಷಿತಗೊಳಿಸುವುದು, ಸಂಬಂಧಿತ ಸುರಕ್ಷಾ ತಂಡಗಳೊಂದಿಗೆ  ನಿಕಟ ಸಂಪರ್ಕದಿಂದಿರುವುದು,   ಅಧಿಕಾರಿಗಳಿಗೆ ಸೂಕ್ತ ಮಾಹಿತಿ ನೀಡುವುದು ಮುಂತಾದ   ಕಾರ್ಯಗಳನ್ನು ಆಕೆ ನಿರ್ವಹಿಸಬೇಕಿತ್ತು. ಈ ದಕ್ಷ ಅಧಿಕಾರಿಣಿ ತಮಗೆ ನೀಡಿದ ಎಲ್ಲಾ ಜವಾಬ್ದಾರಿಯನ್ನೂ ಅಚ್ಚುಕಟ್ಟಾಗಿ ನಿರ್ವಹಿಸಿ ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದಾರೆ.
ತಮಿಳುನಾಡಿನ ತಂಜಾವೂರು ಜಿಲ್ಲೆಯ ಕುಂಭಕೋಣಂ ಸುಭಾಷಿಣಿ ಅವರ ಹುಟ್ಟೂರು. ಅವರ ತಂದೆ ಖಾಸಗಿ ಕಂಪೆನಿಯೊಂದರ ಕೈಗಾರಿಕಾ ಸುರಕ್ಷಾ ವಿಭಾಗದಲ್ಲಿ ಉದ್ಯೋಗಿಯಾಗಿದ್ದರೆ ತಾಯಿ ಗೃಹಿಣಿಯಾಗಿದ್ದಾರೆ. 80ರ ದಶಕದಲ್ಲಿ ಸುಭಾಷಿಣಿಯ ಹೆತ್ತವರು ಮುಂಬೈಗೆ ಸ್ಥಳಾಂತರಗೊಂಡ ನಂತರ ಆಕೆ ಥಾಣೆ ಹಾಗೂ ಕಲ್ಯಾಣ್ ನಲ್ಲಿ ಶಾಲಾ ಶಿಕ್ಷಣ ಮುಗಿಸಿ ಮುಂದೆ  ಸೈಂಟ್ ಕ್ಸೇವಿಯರ್ ಕಾಲೇಜಿನಿಂದ ಸಮಾಜಶಾಸ್ತ್ರದಲ್ಲಿ  ಪದವಿ ಪಡೆದರು. ನಂತರ ದೆಹಲಿಯ ಜೆ ಎನ್ಯು ವಿನಲ್ಲಿ ಸ್ನಾತ್ತಕೋತ್ತರ ಪದವಿ ತರಗತಿಗಳಿಗೆ ಸೇರಿದ ಅವರು ಅದೇ ಸಮಯ ಐಪಿಎಸ್ ಪರೀಕ್ಷೆಗೆ ತಯಾರಿ ನಡೆಸಲು ಆರಂಭಿಸಿದ್ದರು.

ಐಪಿಎಸ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಅವರು ಹೈದರಾಬಾದಿನ ಸರ್ದಾರ್ ವಲ್ಲಭಭಾಯಿ ಪೊಲೀಸ್ ಅಕಾಡೆಮಿಯಲ್ಲಿ ತರಬೇತಿ ಪಡೆದು ಅಸ್ಸಾಂನಲ್ಲಿ ಅವರಿಗೆ ಮೊದಲ ಪೋಸ್ಟಿಂಗ್ ದೊರೆಯಿತು.  ಮುಖ್ಯಮಂತ್ರಿಯಂತಹ ಉನ್ನತ ಹುದ್ದೆಯಲ್ಲಿರುವವರ ಸುರಕ್ಷಾ ಮುಖ್ಯಸ್ಥೆಯಾಗಿ ಆಕೆಯನ್ನು ಯಾರಾದರೂ ನೋಡಿದಾಗ ಒಮ್ಮೆ  ಆಕೆ ವಕೀಲೆಯೇನೋ ಎಂಬಂಥಹ ಭಾವನೆ ಹಲವರಿಗೆ ಬಂದದ್ದಿದೆ. ಅದಕ್ಕೆ ಕಾರಣವೂ ಇಲ್ಲದಿಲ್ಲ. ಆಕೆ ಕಪ್ಪು ಬಣ್ಣದ ಪ್ಯಾಂಟ್, ಬಿಳಿ ಶರ್ಟ್ ಹಾಗೂ ಕಪ್ಪು ಕೋಟು ಧರಿಸುತ್ತಾರೆ. ಇಂತಹ ಸಮವಸ್ತ್ರ ಆಕೆಗೆ ತನ್ನ ಬಳಿಯಿರುವ ಪಿಸ್ತೂಲನ್ನೂ ಯಾರಿಗೂ  ಕಾಣಿಸದಂತೆ ಇಡಲು ಸಹಕಾರಿಯಾಗಿದೆ.

ಅಸ್ಸಾಂ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ಸಾಕಷ್ಟು ಸವಾಲಿನ ಕೆಲಸವಾಗಿದ್ದು  ಮಾವೋವಾದಿಗಳ ಹಾವಳಿ, ಮತೀಯ ಉದ್ವಿಗ್ನತೆ, ಕಾಡು ಪ್ರಾಣಿಗಳ ಹತ್ಯೆ, ಡ್ರಗ್ಸ್ ಜಾಲ ಇವುಗಳೆಲ್ಲವೂ  ಪೊಲೀಸ್ ಅಧಿಕಾರಿಯೊಬ್ಬರ ದಕ್ಷತೆಯನ್ನು ಪರೀಕ್ಷಿಸುತ್ತವೆ.
ಮುಖ್ಯಮಂತ್ರಿಯ ಸುರಕ್ಷಾ ವಿಭಾಗದ  ಎಸ್ಪಿಯಾಗುವ ಮೊದಲು ಸುಭಾಷಿಣಿ ಅಸ್ಸಾಂ ರಾಜ್ಯದ ಹಲವೆಡೆ ಸೇವೆ ಸಲ್ಲಿಸಿದ್ದಾರೆ. ಮೊದಲು ಆಕೆ ಗುವಾಹಟಿಯ ಅಝಾರ ಪೊಲೀಸ್ ಠಾಣೆಯಲ್ಲಿ ಎಎಸ್ಪಿಯಾಗಿ  ಕಾರ್ಯನಿರ್ವಹಿಸಿದ್ದು  ನಂತರ ಬಿಸ್ವನಾಥ್ ಜಿಲ್ಲೆ, ಸಿಲ್ಚಾರ್ ಹಾಗೂ ತೇಜಪುರದಲ್ಲಿ ಹೆಚ್ಚುವರಿ ಎಸ್ಪಿ ಆಗಿ ಕೆಲಸ ಮಾಡಿದ್ದರು. ಡಿಸೆಂಬರ್ 23, 2014 ರಲ್ಲಿ ಉಗ್ರಗಾಮಿಗಳು ಸೋನಿತ್ ಪುರ ಜಿಲ್ಲೆಯಲ್ಲಿ 30 ಮಂದಿ ಆದಿವಾಸಿಗಳನ್ನು ಹತ್ಯೆಗೈದಾಗ ಪರಿಸ್ಥಿತಿಯ ಗಂಭೀರತೆಯನ್ನು ಅರಿತು ಅಲ್ಲಿಗೆ ಧಾವಿಸಿದ್ದ ಸುಭಾಷಿಣಿ ನೇತೃತ್ವದ ಪೊಲೀಸ್ ತಂಡವು ಗ್ರಾಮಸ್ಥರು ತಮ್ಮವರ ಕಳೇಬರಗಳನ್ನು ನೋಡಿ ಉದ್ವಿಗ್ನಗೊಳ್ಳುವ ಮುನ್ನ ಅವುಗಳನ್ನು ಅಲ್ಲಿಂದ ಸಾಗಿಸಿ ಪರಿಸ್ಥಿತಿ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದರು.

ಆಕೆ ಜೆ ಎನ್ ಯುವಿನಲ್ಲಿ ತನ್ನ ಎಂಫಿಲ್ ಗಾಗಿ ಆಯ್ದುಕೊಂಡ ವಿಷಯ `ಮಹಿಳೆ ಮತ್ತು ಉಗ್ರವಾದ' ವಾಗಿತ್ತು. ಸುಭಾಷಿಣಿಯ ಕಾರ್ಯನಿರ್ವಹಣಾ ಶೈಲಿ ಈಗಾಗಲೇ ಸಾಕಷ್ಟು ಮಂದಿಯಿಂದ ಪ್ರಶಂಸೆಗೊಳಗಾಗಿದ್ದು ಆಕೆ ಯುವತಿಯರು ಪೊಲೀಸ್ ಇಲಾಖೆಗೆ ಸೇರಲು ಸ್ಫೂರ್ತಿಯಾಗಿದ್ದಾರೆ 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X