Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೂರನೆ ದಿನವೂ ಸಂಸತ್ತು ಅಸ್ತವ್ಯಸ್ತ

ಮೂರನೆ ದಿನವೂ ಸಂಸತ್ತು ಅಸ್ತವ್ಯಸ್ತ

ವಾರ್ತಾಭಾರತಿವಾರ್ತಾಭಾರತಿ21 Nov 2016 8:46 PM IST
share
ಮೂರನೆ ದಿನವೂ ಸಂಸತ್ತು ಅಸ್ತವ್ಯಸ್ತ

ಹೊಸದಿಲ್ಲಿ, ನ.21: ನೋಟು ರದ್ದತಿಯ ಬಳಿಕ ಬ್ಯಾಂಕ್‌ಗಳ ಸರತಿಯ ಸಾಲುಗಳಲ್ಲಿ ಮೃತಪಟ್ಟವರಿಗೆ ಸಂತಾಪ ನಿರ್ಣಯವನ್ನು ಅಂಗೀಕರಿಸಬೇಕು ಹಾಗೂ ಮತ ವಿಭಜನೆಗೆ ಅವಕಾಶವಿರುವ ನಿಯಮದನ್ವಯ ಚರ್ಚೆ ನಡೆಯಬೇಕೆಂದು ಆಗ್ರಹಿಸಿ ರಾಜ್ಯಸಭೆಯ ವಿಪಕ್ಷಗಳು ಕೋಲಾಹಲವೆಬ್ಬಿಸಿದ ಕಾರಣ ಇಂದು ಸಹ ಸಂಸತ್ ಕಲಾಪಕ್ಕೆ ಅಡಚಣೆಯಾಗಿದೆ.

ಸುಮಾರು 70 ಮಂದಿಯ ಸಾವಿಗೆ ಸಂತಾಪ ನಿರ್ಣಯ ಕೈಗೊಳ್ಳದೆ ನೋಟು ರದ್ದತಿಯ ಕುರಿತು ಚರ್ಚೆಗೆ ಅವಕಾಶ ನೀಡುವುದಿಲ್ಲವೆಂದು ಒಗ್ಗಟ್ಟಾದ ವಿಪಕ್ಷಗಳು ಒತ್ತಿ ಹೇಳಿರುವುದು ಮೇಲ್ಮನೆಯ ಕಲಾಪಕ್ಕೆ ಹೊಸ ಆಯಾಮ ನೀಡಿದೆ.

ಲೋಕಸಭೆಯಲ್ಲೂ ವಿಪಕ್ಷಗಳು ನೋಟು ರದ್ದತಿಯ ಕುರಿತು ನಿಲುವಳಿ ಗೊತ್ತುವಳಿ ಹಾಗೂ ಮತ ವಿಭಜನೆಗೆ ಅವಕಾಶವಿರುವ ನಿಯಮದನ್ವಯ ಚರ್ಚೆಗೆ ಆಗ್ರಹಿಸಿದುದರಿಂದಾಗಿ ಸತತ ಮೂರನೆಯ ದಿನವಾದ ಇಂದು ಯಾವುದೇ ಕಲಾಪ ನಡೆಯಲಿಲ್ಲ.

ಕಾಂಗ್ರೆಸ್, ಬಿಎಸ್ಪಿ, ಟಿಎಂಸಿ ಹಾಗೂ ಸಿಪಿಐ ಪಕ್ಷಗಳು ಸಂತಾಪ ನಿರ್ಣಯಕ್ಕಾಗಿ ಆಗ್ರಹಿಸಿದವು.

ವಿಪಕ್ಷಗಳು ನೋಟು ರದ್ದತಿ ಚರ್ಚೆಯಿಂದ ಪಲಾಯನ ಮಾಡುತ್ತಿವೆಯೆಂದು ಸದನ ನಾಯಕ ಹಾಗೂ ವಿತ್ತ ಸಚಿವ ಅರುಣ್ ಜೇಟ್ಲಿ ಆರೋಪಿಸಿದರು.

ಒಳಿತು ಕೆಡುಕುಗಳ ಬಗ್ಗೆ ಚರ್ಚೆಯಲ್ಲಿ ಹೊರಗೆ ಬರುತ್ತದೆ. ವಿಪಕ್ಷಗಳು ಚರ್ಚೆಯಿಂದ ಪಲಾಯನ ಮಾಡುವುದೇಕೆ? ವಿಪಕ್ಷಗಳು ಚರ್ಚೆಗೆ ಸಿದ್ಧವಿಲ್ಲ ಹಾಗೂ ಸದನವನ್ನು ಅಡ್ಡಿಪಡಿಸಲು ಹೊಸ ನೆಪದೊಂದಿಗೆ ಮುಂದೆ ಬಂದಿವೆಯೆಂಬುದು ಇದರಿಂದ ಸ್ಪಷ್ಟವಾಗುತ್ತದೆಯೆಂದು ಸದನದ ಅಂಗಳದಲ್ಲಿ ವಿಪಕ್ಷೀಯರ ಘೋಷಣೆಗಳ ನಡುವೆಯೇ ಜೇಟ್ಲಿ ಹೇಳಿದರು.

ನಿಯಮ 267ರನ್ವಯ ಕಲಾಪ ಅಮಾನತು ನೋಟಿಸನ್ನು ಚಳಿಗಾಲದ ಅಧಿವೇಶನದ ಮೊದಲ ದಿನವೇ ಅಂಗೀಕರಿಸಲಾಗಿದೆ. ಚರ್ಚೆ ಆರಂಭವಾಗಿದೆ. ಸಾವುಗಳ ಕುರಿತಾದ ವರದಿಯ ಬಗ್ಗೆ ಚರ್ಚೆಯ ವೇಳೆ ಪ್ರಸ್ತಾಪವಾಗುತ್ತದೆ. ಸರಕಾರ ಅದಕ್ಕೆ ಉತ್ತರ ನೀಡುತ್ತದೆಂದು ಅವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X