Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪಂಜಾಬ್ ಕಾಂಗ್ರೆಸ್ ಮೇಲೆ ಕೇಜ್ರಿವಾಲ್ '...

ಪಂಜಾಬ್ ಕಾಂಗ್ರೆಸ್ ಮೇಲೆ ಕೇಜ್ರಿವಾಲ್ ' ಸರ್ಜಿಕಲ್ ದಾಳಿ'

ಅಮರಿಂದರ್ ಸಿಂಗ್ ಕುರಿತ ಸ್ಪೋಟಕ ದಾಖಲೆ ಬಹಿರಂಗ

ವಾರ್ತಾಭಾರತಿವಾರ್ತಾಭಾರತಿ21 Nov 2016 10:26 PM IST
share
ಪಂಜಾಬ್ ಕಾಂಗ್ರೆಸ್ ಮೇಲೆ ಕೇಜ್ರಿವಾಲ್  ಸರ್ಜಿಕಲ್ ದಾಳಿ




 

ಚಂಡಿಗಡ,ನ.21: ಪಂಜಾಬಿನ ಮಾಜಿ ಮುಖ್ಯಮಂತ್ರಿ ಹಾಗೂ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಕ್ಯಾ.ಅಮರಿಂದರ್ ಸಿಂಗ್ ಮತ್ತು ಅವರ ಕುಟುಂಬದ ಸ್ವಿಸ್ ಬ್ಯಾಂಕ್ ಖಾತೆಗಳನ್ನು ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಸೋಮವಾರ ಬಹಿರಂಗಗೊಳಿಸಿದರು.

ತನ್ನ 11 ದಿನಗಳ ಪಂಜಾಬ್ ಪ್ರವಾಸದ ಎರಡನೇ ದಿನವಾದ ಇಂದು ಬಠಿಂಡಾ ಬಳಿಯ ಕೋಟ್‌ಶಮೀರ್‌ನಲ್ಲಿ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಸಿಂಗ್ ಅವರ ಪತ್ನಿ ಮಾಜಿ ಕೇಂದ್ರ ಸಚಿವೆ ಪ್ರಣೀತ್ ಕೌರ್ ಮತ್ತು ಪುತ್ರ ರಣಿಂದರ್ ಸಿಂಗ್ ಅವರು 2005ರಲ್ಲಿ ಒಂದೇ ದಿನ ಸ್ವಿಸ್ ಬ್ಯಾಂಕಿನಲ್ಲಿ ಖಾತೆಗಳನ್ನು ತೆರೆದಿದ್ದರು ಎಂದು ಹೇಳಿದರಲ್ಲದೆ, ಆ ಖಾತೆಗಳ ಸಂಖ್ಯೆಗಳು ಮತ್ತು ವಿವರಗಳನ್ನು ಬಹಿರಂಗಗೊಳಿಸಿದರು.

ಸಿಂಗ್ ಕುಟುಂಬವು ಒಂದು ಟ್ರಸ್ಟ್‌ನ್ನೂ ರಚಿಸಿದ್ದು ತನ್ನ ಅಕ್ರಮ ಹಣವನ್ನು ಅದು ಈ ಟ್ರಸ್ಟ್‌ನಲ್ಲಿ ಹೂಡಿಕೆ ಮಾಡುತ್ತಿದೆ ಎಂದು ಆರೋಪಿಸಿದ ಅವರು,ಅದರ ಬ್ಯಾಂಕ್ ಖಾತೆ ಸಂಖ್ಯೆಯನ್ನೂ ಬಹಿರಂಗಗೊಳಿಸಿದರು. ತಾನು ಬಹಿರಂಗಗೊಳಿಸಿರುವ ಯಾವುದೇ ಮಾಹಿತಿ ತಪ್ಪಾಗಿದ್ದರೆ ತನ್ನ ವಿರುದ್ಧ ಮಾನನಷ್ಟ ಮೊಕದ್ದಮೆಯನ್ನು ಹೂಡಲು ಮತ್ತು ತನ್ನನ್ನು ಜೈಲಿಗೆ ಕಳುಹಿಸಲು ಸಿಂಗ್ ಸ್ವತಂತ್ರರಿದ್ದಾರೆ ಎಂದು ಕೇಜ್ರಿ ಸವಾಲು ಹಾಕಿದರು.

 ಮಾಜಿ ಮುಖ್ಯಮಂತ್ರಿ ವಿರುದ್ಧ ತೀವ್ರ ಟೀಕಾಪ್ರಹಾರ ಮಾಡಿದ ಅವರು, 2002ರಲ್ಲಿ ಅಧಿಕಾರಕ್ಕೇರುವ ಮುನ್ನ ಸಿಂಗ್ ದಿವಾಳಿಯೆದ್ದಿದ್ದರು ಮತ್ತು ತನ್ನ ‘ಮೋತಿ ಮಹಲ್ ’ಗೆ ಸುಣ್ಣ ಬಳಿಸಲೂ ಸಾಕಷ್ಟು ಹಣ ಅವರ ಬಳಿಯಿದ್ದಿರಲಿಲ್ಲ ಎಂದರು. ಅಧಿಕಾರಕ್ಕೆ ಬಂದ ಮೂರೇ ವರ್ಷಗಳಲ್ಲಿ ಸಿಂಗ್ ಮತ್ತು ಅವರ ಕುಟುಂಬ ಸ್ವಿಸ್ ಬ್ಯಾಂಕಿನಲ್ಲಿ ಖಾತೆಗಳನ್ನು ತೆರೆದಿದ್ದು, ಪ್ರತಿ ತಿಂಗಳು ಭಾರೀ ಮೊತ್ತವನ್ನು ವರ್ಗಾಯಿಸುತ್ತಿದ್ದರು ಎಂದು ಆರೋಪಿಸಿದರು.

ಸಿಂಗ್ ಮತ್ತು ಅವರ ಕುಟುಂಬ ವಿದೇಶಿ ಬ್ಯಾಂಕುಗಳಲ್ಲಿ ಗುಡ್ಡೆ ಹಾಕಿರುವ ಹಣವನ್ನು ವಾಪಸ್ ತರುವ ಇಚ್ಛಾಶಕ್ತಿ ಮತ್ತು ಧೈರ್ಯ ನಿಮಗಿದೆಯೇ ಎಂದು ಕೇಜ್ರಿ ಈ ಸಂದರ್ಭ ಪ್ರಧಾನಿ ನರೇಂದ್ರ ಮೋದಿಯವರಿಗೆ ಸವಾಲು ಹಾಕಿದರು. ಕೇಜ್ರಿವಾಲ್ ಆರೋಪವನ್ನು ತಳ್ಳಿಹಾಕಿದ ಅಮರಿಂದರ್ ಸಿಂಗ್, ಅವರು ಕೇಂದ್ರ ವಿತ್ತಸಚಿವ ಅರುಣ್ ಜೇಟ್ಲಿಯವರಿಂದ ‘ಹಣ ಪಡೆದಿರುವ ಏಜೆಂಟ್’ ರೀತಿ ವರ್ತಿಸುತ್ತಿದ್ದಾರೆ ಎಂದರು.

ಸ್ವಿಸ್ ಬ್ಯಾಂಕ್ ಖಾತೆಗಳ ಕಪೋಲಕಲ್ಪಿತ ಮತ್ತು ರಾಜಕೀಯ ಪ್ರೇರಿತ ಆರೋಪವನ್ನು ಮತ್ತೊಮ್ಮೆ ಕೆದಕಿದ್ದಕ್ಕಾಗಿ ಕೇಜ್ರಿವಾಲ್‌ರನ್ನು ಗೇಲಿ ಮಾಡಿದ ಸಿಂಗ್, ಅವರು ಈ ವಿವರಗಳನ್ನು ಸುದ್ದಿಗೋಷ್ಠಿಯಲ್ಲಿ ಬಹಿರಂಗಗೊಳಿಸಬಹುದಿತ್ತು. ಆದರೆ ಸುಳ್ಳು ಆರೋಪಗಳ ಬಗ್ಗೆ ಮಾಧ್ಯಮಗಳನ್ನು ಎದುರಿಸುವುದು ಕಷ್ಟ ಎಂದು ಗೊತ್ತಿದ್ದೇ ಅವರು ಬಹಿರಂಗ ಸಭೆಯಲ್ಲಿ ಇದನ್ನು ಹೇಳಿದ್ದಾರೆ. ಅಲ್ಲಿ ಯಾರೂ ಪ್ರಶ್ನಿಸುವುದಿಲ್ಲ ಎನ್ನುವುದು ಅವರಿಗೆ ಗೊತ್ತು. ಕೇಜ್ರಿ ಬಿಡುಗಡೆಗೊಳಿಸಿರುವ ಬ್ಯಾಂಕ್ ಖಾತೆಗಳ ಸಂಖ್ಯೆಗಳನ್ನೇ 2016,ಮಾರ್ಚ್‌ನಲ್ಲಿ ತನ್ನ ಸಹೋದ್ಯೋಗಿ ಆಶಿಷ್ ಖೇತಾನ್ ಬಿಡುಗಡೆಗೊಳಿಸಿದ್ದರು. ಅದು ಸುಳ್ಳೆಂದು ತಾನೀಗಾಗಲೇ ಸಾಬೀತು ಮಾಡಿದ್ದೇನೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X