Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಸ್ವದೇಶದಲ್ಲಿ ಅಜೇಯ ದಾಖಲೆ ಕಾಯ್ದುಕೊಂಡ...

ಸ್ವದೇಶದಲ್ಲಿ ಅಜೇಯ ದಾಖಲೆ ಕಾಯ್ದುಕೊಂಡ ಭಾರತ

ವಾರ್ತಾಭಾರತಿವಾರ್ತಾಭಾರತಿ21 Nov 2016 11:25 PM IST
share
ಸ್ವದೇಶದಲ್ಲಿ ಅಜೇಯ ದಾಖಲೆ ಕಾಯ್ದುಕೊಂಡ ಭಾರತ

 ಹೊಸದಿಲ್ಲಿ, ನ.21: ವಿಶಾಖಪಟ್ಟಣದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಎರಡನೆ ಟೆಸ್ಟ್ ಪಂದ್ಯವನ್ನು ಭರ್ಜರಿಯಾಗಿ ಗೆದ್ದುಕೊಂಡಿರುವ ವಿರಾಟ್ ಕೊಹ್ಲಿ ಪಡೆ ಸ್ವದೇಶದಲ್ಲಿ ಸತತ 16ನೆ ಗೆಲುವು ದಾಖಲಿಸಿದೆ.

ಭಾರತ 1977-80ರಲ್ಲಿ ಸ್ವದೇಶದಲ್ಲಿ ಸತತ 20 ಪಂದ್ಯಗಳನ್ನು ಗೆದ್ದ ಸಾಧನೆ ಮಾಡಿತ್ತು. ಕೊಹ್ಲಿ ಪಡೆ ಸ್ವದೇಶದಲ್ಲಿ ಇನ್ನೂ 8 ಟೆಸ್ಟ್ ಪಂದ್ಯಗಳನ್ನು ಆಡುತ್ತಿರುವ ಹಿನ್ನೆಲೆಯಲ್ಲಿ ಸ್ವದೇಶದಲ್ಲಿ ಭಾರತೀಯರು ದಾಖಲಿಸಿರುವ ಗರಿಷ್ಠ ಗೆಲುವಿನ ದಾಖಲೆ ಸರಿಗಟ್ಟುವ ಉತ್ತಮ ಅವಕಾಶವಿದೆ.

2012ರ ಡಿಸೆಂಬರ್‌ನಲ್ಲಿ ಕೋಲ್ಕತಾದ ಈಡನ್‌ಗಾರ್ಡನ್ಸ್‌ನಲ್ಲಿ ಅಲಿಸ್ಟರ್ ಕುಕ್ ನೇತೃತ್ವದ ಇಂಗ್ಲೆಂಡ್‌ನ ವಿರುದ್ಧ ಎಂಎಸ್ ಧೋನಿ ನೇತೃತ್ವದ ಭಾರತ ಸೋಲುಂಡಿತ್ತು. ಆ ಬಳಿಕ ಸ್ವದೇಶದಲ್ಲಿ ಆಡಿರುವ 16 ಪಂದ್ಯಗಳ ಪೈಕಿ 13ರಲ್ಲಿ ಜಯ, 3ರಲ್ಲಿ ಡ್ರಾ ಸಾಧಿಸಿ ಅಜೇಯ ದಾಖಲೆ ಕಾಯ್ದುಕೊಂಡಿದೆ.

 ಆಸ್ಟ್ರೇಲಿಯ(4-0,2013ರಲ್ಲಿ), ವೆಸ್ಟ್‌ಇಂಡೀಸ್(2-0,2013ರಲ್ಲಿ), ದಕ್ಷಿಣ ಆಫ್ರಿಕ(3-0,2015ರಲ್ಲಿ )ಹಾಗೂ ನ್ಯೂಝಿಲೆಂಡ್(3-0, 2016) ಹಾಗೂ ಇದೀಗ ಇಂಗ್ಲೆಂಡ್(ವಿಶಾಖಪಟ್ಟಣ, 246 ರನ್) ವಿರುದ್ಧ ಜಯ ಸಾಧಿಸಿದೆ.

 ಭಾರತ ಕ್ರಿಕೆಟ್ ತಂಡ 1977-80ರಲ್ಲಿ ಸತತ 20 ಪಂದ್ಯಗಳನ್ನು ಜಯಿಸಿತ್ತು. 1977, ಜನವರಿ 28 ರಿಂದ 1980 ಫೆ.3ರ ವರೆಗೆ ಬಿಶನ್ ಸಿಂಗ್ ಬೇಡಿ, ಸುನೀಲ್ ಗವಾಸ್ಕರ್ ಹಾಗೂ ಜಿ. ವಿಶ್ವನಾಥ್ ನಾಯಕತ್ವದಲ್ಲಿ ಭಾರತ ಸತತ 20ಪಂದ್ಯಗಳನ್ನು ಜಯಿಸಿತ್ತು. ಇಂಗ್ಲೆಂಡ್(2), ವೆಸ್ಟ್‌ಇಂಡೀಸ್(6), ಆಸ್ಟ್ರೇಲಿಯ(6) ಹಾಗೂ ಪಾಕಿಸ್ತಾನ(6) ವಿರುದ್ಧ ಈ ಸಾಧನೆ ಮಾಡಿತ್ತು.

 ಇದೀಗ ಭಾರತ ಸತತ 16 ಟೆಸ್ಟ್ ಪಂದ್ಯಗಳನ್ನು ಜಯಿಸಲು ಪ್ರಮುಖ ಪಾತ್ರವಹಿಸಿದ್ದು ಸ್ಪಿನ್ನರ್ ಆರ್.ಅಶ್ವಿನ್. ಅಶ್ವಿನ್ 113 ವಿಕೆಟ್‌ಗಳನ್ನು ಕಬಳಿಸಿದ್ದು, ಇದರಲ್ಲಿ 12 ಐದು ವಿಕೆಟ್ ಗೊಂಚಲುಗಳಿವೆ. ನಾಲ್ಕು ಬಾರಿ 10 ವಿಕೆಟ್ ಗೊಂಚಲು ಪಡೆದಿದ್ದಾರೆ. ಅಶ್ವಿನ್‌ಗೆ ರವೀಂದ್ರ ಜಡೇಜ(70 ವಿಕೆಟ್) ಹಾಗೂ ವೇಗದ ಬೌಲರ್ ಮುಹಮ್ಮದ್ ಶಮಿ(24) ಉತ್ತಮ ಸಹಕಾರ ನೀಡಿದ್ದಾರೆ.

ಬ್ಯಾಟ್ಸ್‌ಮನ್‌ಗಳ ಪೈಕಿ ಚೇತೇಶ್ವರ ಪೂಜಾರ ಗರಿಷ್ಠ ರನ್(1412, 5 ಶತಕ) ಗಳಿಸಿದ್ದಾರೆ. ಆ ಬಳಿಕ ಕೊಹ್ಲಿ(1,293), ಮುರಳಿ ವಿಜಯ್(1,075) ಹಾಗೂ ಅಜಿಂಕ ರಹಾನೆ(684) ಭಾರತಕ್ಕೆ ಕಾಣಿಕೆ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X