Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೋಟು ರದ್ದತಿ ಕುರಿತ ಸಮೀಕ್ಷೆ: ...

ನೋಟು ರದ್ದತಿ ಕುರಿತ ಸಮೀಕ್ಷೆ: ಪ್ರಧಾನಿ ಮೋದಿ ಜನರಲ್ಲಿ ಕೇಳಬೇಕಾಗಿದ್ದ 10 ಪ್ರಶ್ನೆಗಳು

ವಾರ್ತಾಭಾರತಿವಾರ್ತಾಭಾರತಿ23 Nov 2016 11:59 PM IST
share
ನೋಟು ರದ್ದತಿ ಕುರಿತ ಸಮೀಕ್ಷೆ:   ಪ್ರಧಾನಿ ಮೋದಿ ಜನರಲ್ಲಿ ಕೇಳಬೇಕಾಗಿದ್ದ 10 ಪ್ರಶ್ನೆಗಳು

1 ಸಾವಿರ ರೂ. ಹಾಗೂ 500 ರೂ. ಮುಖಬೆಲೆಯ ನೋಟುಗಳನ್ನು ಅಮಾನ್ಯಗೊಳಿಸುವ ತನ್ನ ನಿರ್ಧಾರದಿಂದಾಗಿ ಭುಗಿಲೆದ್ದಿರುವ ವಿವಾದಗಳನ್ನು ಶಮನಗೊಳಿಸುವ ಪ್ರಯತ್ನವಾಗಿ ಪ್ರಧಾನಿ ನರೇಂದ್ರ ಮೋದಿ, ತನ್ನ ಅಧಿಕೃತ ಮೊಬೈಲ್ ಫೋನ್ ಆ್ಯಪ್ಲಿಕೇಶನ್ ಮೂಲಕ ಜನಾಭಿಪ್ರಾಯ ಸಂಗ್ರಹಿಸಿದ್ದರು.

ಆದರೆ ಈ ಸಮೀಕ್ಷೆಯಲ್ಲಿ ಪಾಲ್ಗೊಳ್ಳುವವರಿಗೆ, ತಮ್ಮ ಅಭಿಪ್ರಾಯಗಳನ್ನು ಮುಕ್ತವಾಗಿ ವ್ಯಕ್ತಪಡಿಸಲು ಅತ್ಯಂತ ಕಡಿಮೆ ಅವಕಾಶಗಳಿದ್ದವು. ಅದರ ಬದಲಾಗಿ ಸರಕಾರವು ಬಯಸುತ್ತಿರುವಂತಹ ಉತ್ತರಗಳೇ ಜನರಿಂದ ದೊರೆಯುವಂತಹ ರೀತಿಯಲ್ಲಿ ಈ ಪ್ರಶ್ನೆಗಳನ್ನು ರೂಪಿಸಲಾಗಿತ್ತು.

‘‘ಭಾರತದಲ್ಲಿ ಕಪ್ಪು ಹಣವು ಅಸ್ತಿತ್ವದಲ್ಲಿದೆಯೇ ಎಂಬುದಾಗಿ ನೀವು ಭಾವಿಸುವಿರಾ?’’ ಹಾಗೂ ಭ್ರಷ್ಟಾಚಾರ ಹಾಗೂ ಕಪ್ಪು ಹಣದ ದುಷ್ಟಪಿಡುಗನ್ನು ನಿರ್ಮೂಲನೆಗೊಳಿಸುವ ಅಗತ್ಯವಿದೆಯೆಂದು ನೀವು ಭಾವಿಸಿದ್ದೀರಾ? ’’ ಎಂಬಂತಹ ಪ್ರಶ್ನೆಗಳನ್ನು ಈ ಸಮೀಕ್ಷೆಯು ಒಳಗೊಂಡಿತ್ತು. ಒಂದು ವೇಳೆ ಮೋದಿಯವರಿಗೆ ದೇಶದ ಪ್ರಜೆಗಳಿಂದ ನೈಜವಾದ ಪ್ರತಿಕ್ರಿಯೆಯನ್ನು ಪಡೆಯಲು ಬಯಸಿದ್ದರೆ, ಅವರು ಕೇಳಬೇಕಾಗಿದ್ದ 10 ಪ್ರಶ್ನೆಗಳನ್ನು ಇಲ್ಲಿ ನೀಡಲಾಗಿದೆ.

1. ನಿಮ್ಮ ಖಾತೆಯಿಂದ ನಿಮ್ಮ ಹಣವನ್ನು ಪಡೆಯಲು ಬ್ಯಾಂಕ್ ಅಥವಾ ಎಟಿಎಂಗಳಲ್ಲಿ ಎಷ್ಟು ಸಮಯವನ್ನು ಕಳೆದಿದ್ದೀರಿ?.

2. ನಿಮಗೆ ಅಗತ್ಯವಿರುವಷ್ಟು ಮೊತ್ತವನ್ನು ನೀವು ಪಡೆಯುತ್ತಿದ್ದೀರಾ?. ಒಂದು ವೇಳೆ ಹೌದಾಗಿದ್ದಲ್ಲಿ ಇದಕ್ಕಾಗಿ ನೀವು ಎಷ್ಟು ಬಾರಿ ಪ್ರಯತ್ನಿಸಿದ್ದೀರಿ?.

3.ನೀವು ಎದುರಿಸುತ್ತಿರುವ ಸಮಸ್ಯೆಗಳು ಇವುಗಳ ಪೈಕಿ ಯಾವುದನ್ನು ಸೂಚಿಸುತ್ತವೆಯೆದು ನೀವು ಭಾವಿಸಿದ್ದೀರಿ?.

ಎ) ಕಪ್ಪು ಹಣದ ವಿರುದ್ಧ ಹೋರಾಡುವ ಸರಕಾರದ ನಿರ್ಧಾರದಿಂದ ಅನಿವಾರ್ಯವಾಗಿ ಉದ್ಭವಿಸಿರುವ ಪರಿಣಾಮ ಇದಾಗಿದೆ.
ಬಿ) 125 ಕೋಟಿ ಜನಸಂಖ್ಯೆಯಿರುವ ಈ ದೇಶದಲ್ಲಿ ಇದೊಂದು ತಪ್ಪಿಸಲು ಸಾಧ್ಯವಿಲ್ಲದ ಸಮಸ್ಯೆಯಾಗಿದೆ.
ಸಿ) ನೋಟು ಅಮಾನ್ಯತೆಯನ್ನು ಅನುಷ್ಠಾನಗೊಳಿಸುವಲ್ಲಿ ಸರಕಾರದಿಂದ ಸಮರ್ಪಕ ಪೂರ್ವಸಿದ್ಧತೆಯ ಕೊರತೆ.


 4) 500 ರೂ. ಹಾಗೂ 1 ಸಾವಿರ ರೂ. ಮುಖಬೆಲೆಯ ನೋಟುಗಳು ಅಮಾನ್ಯಗೊಂಡಿರುವುದರಿಂದ ಭಯೋತ್ಪಾದಕರಿಗೆ ತಮ್ಮ ಚಟುವಟಿಕೆಗಳನ್ನು ನಡೆಸುವುದಕ್ಕೆ ಹಣದ ಅಭಾವವುಂಟಾಗುವುದೆಂದು ನೀವು ಭಾವಿಸುತ್ತೀರಾ?.

 5). ಅಧಿಕ ವೌಲ್ಯದ ಕರೆನ್ಸಿ ನೋಟುಗಳು ಭ್ರಷ್ಟಾಚಾರ ಸ್ನೇಹಿ ಹಾಗೂ ಕಪ್ಪುಹಣದ ಸಂಗ್ರಹವನ್ನು ಸುಲಭಗೊಳಿಸುತ್ತವೆ. ಹೀಗಿರುವಾಗ 2 ಸಾವಿರ ರೂ. ಮುಖಬೆಲೆಯ ನೋಟುಗಳನ್ನು ಜಾರಿಗೊಳಿಸುವ ನಿರ್ಧಾರವನ್ನು ನೀವು ಬೆಂಬಲಿಸುವಿರಾ?.

6). 2 ಸಾವಿರ ರೂ. ಮುಖಬೆಲೆಯ ನೋಟುಗಳು ಯಾವುದೇ ಹೆಚ್ಚುವರಿ ಭದ್ರತಾ ಅಂಶಗಳನ್ನು ಒಳಗೊಂಡಿರುವುದಿಲ್ಲ.ಅವುಗಳ ಖೋಟಾ ನೋಟುಗಳನ್ನು ತಯಾರಿಸಲಾಗುತ್ತದೆ ಹಾಗೂ ಅವುಗಳನ್ನು ಭಯೋತ್ಪಾದಕರು ಬಳಸಿಕೊಳ್ಳಲಿದ್ದಾರೆಂದು ನೀವು ಭಾವಿಸುತ್ತೀರಾ?.

7). ಈ ಯೋಜನೆಯ ಪ್ರಾಥಮಿಕ ಗುರಿ ಏನೆಂದು ನೀವು ಭಾವಿಸುವಿರಿ?

ಎ) ಆರ್ಥಿಕ
 ಬಿ) ಇದೊಂದು ಭ್ರಷ್ಟಾಚಾರದ ವಿರುದ್ಧ ದಾಳಿಯಾಗಿದೆ.
ಇ) ರಾಜಕೀಯ

8.ರಾಷ್ಟ್ರೀಯ ಹಿತಾಸಕ್ತಿಯ ದೃಷ್ಟಿಯಿಂದ ನೀವು ಬ್ಯಾಂಕ್ ಹಾಗೂ ಎಟಿಎಂಗಳ ಮುಂದೆ ಸಮಯವನ್ನು ತ್ಯಾಗ ಮಾಡಿದ್ದೀರಿ ಹಾಗೂ ನೀವು ಸಮಸ್ಯೆಗಳನ್ನು ಎದುರಿಸುತ್ತಿದ್ದೀರಿ ಎಂದು ಭಾವಿಸುತ್ತೀರಾ? ಅಥವಾ ಯಾರೋ ಮಾಡಿದ ತಪ್ಪಿಗಾಗಿ ನೀವು ಬೆಲೆತೆರಬೇಕಾಗಿ ಬಂದಿದೆಯೆಂದು ಯೋಚಿಸುತ್ತೀರಾ?.

9. ನಗದು ಅಮಾನ್ಯತೆಯ ಬಳಿಕ ಜನರು ಸಾವನ್ನಪ್ಪುತ್ತಿರುವ ಅಥವಾ ಅನುಭವಿಸುತ್ತಿರುವ ಬವಣೆಗಳ ಕುರಿತು ಪ್ರಕಟವಾಗುತ್ತಿರುವ ವರದಿಗಳು ನಕಲಿ ಅಥವಾ ರಾಜಕೀಯ ಪ್ರೇರಿತವೆಂದು ನೀವು ಭಾವಿಸುವಿರಾ?.

10. ನೋಟುಗಳನ್ನು ನಿಷೇಧಿಸುವ ನಿರ್ಧಾರ ಹಾಗೂ ಈ ನೀತಿಯನ್ನು ಜಾರಿಗೊಳಿಸಿದ ರೀತಿ ಇವೆರಡೂ ಪ್ರತ್ಯೇಕ ವಿಷಯಗಳಾಗಿವೆ ಹಾಗೂ ಆ ಬಗ್ಗೆ ಎರಡು ವಿಭಿನ್ನ,ತದ್ವಿರುದ್ಧ ಅಭಿಪ್ರಾಯಗಳಿರಬಹುದು ಎಂದು ನೀವು ಭಾವಿಸುತ್ತೀರಾ?.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X