ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ
ಪುತ್ತೂರು, ನ.23: ಸುಮಾರು ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನೋರ್ವ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.
ಪರ್ಪುಂಜ ಗುರಿಕುಮೇರು ನಿವಾಸಿ ಆನಂದ ನಾಯ್ಕ(30) ಎಂಬಾತ ಕಳೆದ ಮೂರು ದಿನಗಳ ಹಿಂದೆ ಕೆಲಸಕ್ಕೆಂದು ಬೆಳಗ್ಗೆ ಮನೆಯಿಂದ ತೆರಳಿದಾತ ಬಳಿಕ ಮನೆಗೆ ವಾಪಸಾಗದೆ ನಾಪತ್ತೆಯಾಗಿದ್ದ. ಪುತ್ತೂರಿನ ಕೊರಿಯರ್ ಸಂಸ್ಥೆಯಲ್ಲಿ ಡೆಲಿ ವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಆನಂದ ಸೋಮವಾರ ಬೆಳಗ್ಗೆ 6ಗಂಟೆಗೆ ಮನೆಯಿಂದ ಹೊರಟ್ಟಿದ್ದರೆಂದು ತಿಳಿದು ಬಂದಿದೆ. ಮೂರು ದಿನ ಮನೆ ಮಂದಿ ಹುಡುಕಾಟ ನಡೆಸಿದರೂ ಅವರು ಪತ್ತೆಯಾಗಿರಲಿಲ್ಲ. ಬುಧವಾರ ಮನೆ ಸಮೀಪದ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಪತ್ತೆಯಾಗಿತ್ತು.
ಘಟನಾ ಸ್ಥಳಕ್ಕೆ ಸಂಪ್ಯ ಪೊಲೀಸರು ಭೆೇಟಿ ನೀಡಿ ತನಿಖೆ ನಡೆಸಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಸಂಪ್ಯ ಠಾಣೆಯಲ್ಲಿ ಕೇಸು ದಾಖಲಾಗಿದೆ.
Next Story