ಅಗತ್ಯ ಬಂದೋಬಸ್್ತಗೆ ಅಧಿಕಾರಿಗಳಿಗೆ ಡಿಸಿ: ಸೂಚನೆ
ಚಿಕ್ಕಮಗಳೂರು, ನ.24: ದತ್ತ ಜಯಂತಿ ನಡೆಯಲಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಶಾಂತಿಸುವ್ಯವಸ್ಥೆ ಕಾಪಾಡಲು ಅಗತ್ಯ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಜಿ.ಸತ್ಯವತಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಗುರುವಾರ ತಮ್ಮ ಕಚೇರಿ ಸಭಾಂಗಣದಲ್ಲಿ ಡಿ. 11 ರಿಂದ 13 ರವರೆಗೆ ನಡೆಯಲಿರುವ ದತ್ತಜಯಂತಿ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿ, ಅಭಿಯಾನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಶಾಂತಿಸುವ್ಯವಸ್ಥೆಯಲ್ಲಿ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಬಂದೋಬಸ್ತ್ ಕಲ್ಪಿಸಬೇಕು ಎಂದುಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಿದ ಅವರು, ಸೆಕ್ಟರ್ ಮ್ಯಾಜಿಸ್ಟೇಟರ್ಗಳನ್ನು ನಿಯೋಜ ನೆ ಮಾಡಲು ಸಹ ತಿಳಿಸಿದರು. ಐಡಿ ಪೀಠದ ಶ್ರೀ ಗುರು ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ಡಿ.11 ರಿಂದ 13 ರವರೆಗೆ ನಡೆಯಲಿರುವ ದತ್ತಮಾಲಾ ಅಭಿಯಾನ ಮತ್ತು ದತ್ತ ಜಯಂತಿ ಉತ್ಸವಕ್ಕೆ ಆಗಮಿಸಲಿರುವ ಭಕ್ತರಿಗೆ ಕುಡಿಯುವ ನೀರು, ತಾತ್ಕಾಲಿಕ ಆಸ್ಪತ್ರೆ ವ್ಯವಸ್ಥೆ ಸೇರಿದಂತೆ ಆ್ಯಂಬುಲೆನ್ಸ್ ಮತ್ತು ವೈದ್ಯಾಧಿಕಾರಿಗಳನ್ನು ನೇಮಿಸುವುದರ ಜೊತೆಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು.
ದತ್ತ ಜಯಂತಿ ಕಾರ್ಯಕ್ರಮದ ಸಮಯದಲ್ಲಿ ನಿರಂತರ ವಿದ್ಯುತ್ ಸರಬರಾಜು ನೋಡಿಕೊಳ್ಳ ಬೇಕೆಂದು ಮೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು, ನಗರದಿಂದ ಐಡಿ ಪೀಠಕ್ಕೆ ಹೋಗುವ ರಸ್ತೆಯ ವಾಹನ ಸಂಚಾರಕ್ಕೆ ಯೋಗ್ಯರೀತಿಯಲ್ಲಿರುವಂತೆ ಅಗತ್ಯ ದುರಸ್ತಿ ಕಾರ್ಯಗಳನ್ನು ಕೈಗೊಳ್ಳಬೇಕು ಹಾಗೂ ರಸ್ತೆ ತಿರುವುಗಳಲ್ಲಿ ಸೂಚನಾ ಫಲಕಗಳನ್ನು ಅಳ ವಡಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಭಕ್ತರು ವಿವಿಧ ಜಿಲ್ಲೆಗಳಿಂದ ವಾಹನಗಳ ಮೂಲಕ ಆಗಮಿಸುತ್ತಿರುವ ಹಿನ್ನೆಲೆ ಆಗಮನ ಮತ್ತು ನಿರ್ಗಮನ ವ್ಯವಸ್ಥೆಯಲ್ಲಿ ಯಾವುದೇ ರೀತಿಯಲ್ಲಿ ಸಂಚಾರಕ್ಕೆ ತೊಂದರೆಯಾಗದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಮುನ್ನೆಚ್ಚರಿಕೆ ಕ್ರಮವಾಗಿ ಒಂದು ಕ್ರೈನನ್ನು ಐಡಿ ಪೀಠಕ್ಕೆ ಚಾಲಕರೊಂದಿಗೆ ನಿಯೋಜಿಸಬೇಕು. ಐಡಿ ಪೀಠದ ಸ್ವಚ್ಛತೆಯನ್ನು ಕಾಪಾಡುವುದರೊಂದಿಗೆ ಗುಹೆಯ ಆವರಣ ಹಾಗೂ ಒಳಭಾಗದಲ್ಲಿ ಕ್ಯಾಮರ, ವೀಡಿಯೋ ಕ್ಯಾಮರ ಹಾಗೂ ಮೊಬೈಲ್ಗಳನ್ನುನಿಷೇಧಿಸಲಾಗಿದೆ ಎಂದ ಅವರು, ನ್ಯಾಯಾಲ ಯದ ಆದೇಶದ ವ್ಯಾಪ್ತಿಯೊಳಗೆ ದತ್ತ ಜಯಂತಿಗೆಎಲ್ಲ ಸಹಕಾರವನ್ನೂ ನೀಡಬೇಕೆಂದು ಜಿಲ್ಲಾಧಿಕಾರಿ ಗಳು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಎಂ.ಎಲ್.ವೈಶಾಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಕೆ.ಅಣ್ಣಾಮಲೈ, ಉಪವಿಭಾಗಾಧಿಕಾರಿ ಸಂಗಪ್ಪ,ಸರೋಜಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಅಣ್ಣಪ್ಪ ಜಿ.ಪಂ ಉಪ ಕಾರ್ಯದರ್ಶಿರಾಜಗೋಪಾಲ್, ತಾಲೂಕಿನ ತಹಶೀಲ್ದಾರ್ಗಳು ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳುಉಪಸ್ಥಿತರಿದ್ದರು.





