Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಎಚ್ಚರ !: ಈಗಷ್ಟೇ ಹುಟ್ಟಿದ ಮಗು...

ಎಚ್ಚರ !: ಈಗಷ್ಟೇ ಹುಟ್ಟಿದ ಮಗು ಮೃತಪಟ್ಟಿದೆ ಎಂದು ವೈದ್ಯರು ಹೇಳಿದರೆ ಸರಿಯಾಗಿ ಖಚಿತಪಡಿಸಿಕೊಳ್ಳಿ

ವಾರ್ತಾಭಾರತಿವಾರ್ತಾಭಾರತಿ25 Nov 2016 4:49 PM IST
share
ಎಚ್ಚರ !: ಈಗಷ್ಟೇ ಹುಟ್ಟಿದ ಮಗು ಮೃತಪಟ್ಟಿದೆ ಎಂದು ವೈದ್ಯರು ಹೇಳಿದರೆ ಸರಿಯಾಗಿ ಖಚಿತಪಡಿಸಿಕೊಳ್ಳಿ

ಎಚ್ಚರವಿರಲಿ! ವೈದ್ಯರು ಅಥವಾ ಆಸ್ಪತ್ರೆಯ ಸಿಬ್ಬಂದಿ ನಿಮ್ಮ ನವಜಾತ ಮಗು ‘ಸತ್ತಿದೆ’ ಎಂದು ಹೇಳಿದರೆ ಅವರನ್ನು ತಕ್ಷಣವೇ ನಂಬಬೇಡಿ. ಮೃತದೇಹ ಮತ್ತು ಸಂಬಂಧಿಸಿದ ದಾಖಲೆಗಳನ್ನು ನೀಡುವಂತೆ ಅವರನ್ನು ಒತ್ತಾಯಿಸಿ. ಇಲ್ಲದಿದ್ದರೆ ನವಜಾತ ಶಿಶುಗಳ ಕಳ್ಳಸಾಗಣೆ ಜಾಲದಲ್ಲಿ ನೀವು ಸಿಕ್ಕಿಬೀಳಬಹುದು. ನಿಮ್ಮ ನವಜಾತ ಮಗು ಜೀವಂತವಾಗಿರಬಹುದು ಮತ್ತು ದಿಲ್ಲಿ,ಮುಂಬೈ.....ಅಷ್ಟೇ ಏಕೆ ಅಮೆರಿಕ ಮತ್ತು ಬ್ರಿಟನ್‌ಗಳಂತಹ ರಾಷ್ಟ್ರಗಳಲ್ಲಿಯ ಸಂತಾನಹೀನ ದಂಪತಿಗೆ ಮಾರಾಟವಾಗಬಹುದು.

ಪಶ್ಚಿಮ ಬಂಗಾಲದ ಸಿಐಡಿ ಪೊಲೀಸರು ಇತ್ತೀಚಿಗಷ್ಟೇ ನವಜಾತ ಶಿಶುಗಳ ಕಳ್ಳಸಾಗಣೆ ಜಾಲವೊಂದನ್ನು ಭೇದಿಸಿ 13 ಜನರನ್ನು ಬಂಧಿಸಿದ್ದಾರೆ.

 ಪಶ್ಚಿಮ ಭಾರತದಲ್ಲಿಯೇ ದೊಡ್ಡದಾದ ಈ ಜಾಲ ಕೋಲ್ಕತಾದ ವಿವಿಧ ನರ್ಸಿಂಗ್ ಹೋಮ್‌ಗಳಲ್ಲಿ ಸಕ್ರಿಯವಾಗಿತ್ತು. ಸಂತಾನಹೀನ ದಂಪತಿಗಳು ಮಗುವನ್ನು ಪಡೆಯಲು ಅನಾಥ ಮತ್ತು ವಾರಸುದಾರರಿಲ್ಲದ ಮಕ್ಕಳಿಗೆ ಆಶ್ರಯ ನೀಡುವ ಹಲವಾರು ಎನ್‌ಜಿಒಗಳನ್ನು ಸಂಪರ್ಕಿಸುತ್ತಾರೆ. ಈ ಎನ್‌ಜಿಒಗಳು ನರ್ಸಿಂಗ್ ಹೋಮ್‌ಗಳ ವೈದ್ಯರು ಮತ್ತು ಸಿಬ್ಬಂದಿಗಳೊಂದಿಗೆ ಸಂಬಂಧವಿಟ್ಟುಕೊಂಡಿರುವ ಕಮಿಷನ್ ಏಜೆಂಟ್‌ಗಳನ್ನು ಹೊಂದಿರುತ್ತವೆ. ಈ ಏಜೆಂಟ್‌ರಿಂದ ಭಾರೀ ಮೊತ್ತವನ್ನು ಪಡೆದುಕೊಳ್ಳುವ ನರ್ಸಿಂಗ್ ಹೋಮ್‌ಗಳ ವೈದ್ಯರು ಮತ್ತು ಸಿಬ್ಬಂದಿಗಳು ನವಜಾತ ಶಿಶು ಮೃತಪಟ್ಟಿದೆ ಎಂದು ಘೋಷಿಸುತ್ತಾರೆ ಮತ್ತು ಶಿಶುವಿನ ಜನನ ಪ್ರಮಾಣಪತ್ರವನ್ನು ಹೆತ್ತವರಿಗೆ ನೀಡುತ್ತಾರೆ. ಆದರೆ ಶಿಶುವಿನ ಮೃತದೇಹವನ್ನು ಮಾತ್ರ ಒಪ್ಪಿಸುವುದೇ ಇಲ್ಲ.

ಬಳಿಕ ಈ ನವಜಾತ ಶಿಶುವನ್ನು ಎನ್‌ಜಿಒ ಮೂಲಕ ಸಂತಾನಹೀನ ದಂಪತಿಗೆ ಮಾರಾಟ ಮಾಡಲಾಗುತ್ತದೆ. ಕಪ್ಪುಬಣ್ಣದ ಹೆಣ್ಣುಶಿಶುಗಳು ಒಂದು ಲಕ್ಷ ರೂ. ಮತ್ತು ಗಂಡುಶಿಶುಗಳು ಎರಡು ಲಕ್ಷ ರೂ.ಗೆ ಮಾರಾಟವಾದರೆ, ಬಿಳಿಯ ಬಣ್ಣದ ಹೆಣ್ಣುಶಿಶುಗಳು ಒಂದೂವರೆ ಲಕ್ಷ ರೂ.ಗೆ ಮತ್ತು ಗಂಡುಶಿಶುಗಳು ಎರಡು ಲಕ್ಷ ರೂ.ಗೂ ಅಧಿಕ ಬೆಲೆಗೆ ಮಾರಾಟವಾಗುತ್ತವೆ ಎಂದು ಡಿಎನ್‌ಎ ವರದಿ ಮಾಡಿದೆ.

ಕಳೆದ ಮೂರು ವರ್ಷಗಳಿಂದಲೂ ಕೋಲ್ಕತಾದ ವಿವಿಧ ನರ್ಸಿಂಗ್ ಹೋಮ್‌ಗಳಲ್ಲಿ ಸಕ್ರಿಯವಾಗಿದ್ದ ಈ ಜಾಲವು ದಿಲ್ಲಿ ಮತ್ತು ಮುಂಬೈಯಂತಹ ದೇಶಾದ್ಯಂತದ ನಗರಗಳು ಮಾತ್ರವಲ್ಲ, ದೂರದ ಅಮೆರಿಕ ಮತ್ತು ಬ್ರಿಟನ್‌ಗಳಲ್ಲಿಯೂ ತನ್ನ ಕಬಂಧಬಾಹುಗಳನ್ನು ಚಾಚಿತ್ತು.

ಸಿಐಡಿ ಅಧಿಕಾರಿಗಳು ಮಂಗಳವಾರ ಉತ್ತರ 24 ಪರಗಣಗಳ ಜಿಲ್ಲೆಯ ಬದುರಿಯಾ ಎಂಬಲ್ಲಿನ ನರ್ಸಿಂಗ್ ಹೋಮ್‌ವೊಂದರ ಮೇಲೆ ದಾಳಿ ನಡೆಸಿದ ಸಂದರ್ಭ ಈ ಜಾಲವು ಪತ್ತೆಯಾಗಿದೆ ಎಂದು ಡಿಐಜಿ(ಸಿಒಡಿ) ಭರತಲಾಲ್ ಮೀನಾ ತಿಳಿಸಿದರು. ಸಂತಾನಹೀನ ದಂಪತಿಗಳಿಗೆ ಮಾರಾಟ ಮಾಡಲೆಂದು ಹತ್ತಿಯ ಬಟ್ಟೆಗಳಲ್ಲಿ ಸುತ್ತಿ ರಟ್ಟಿನ ಪೆಟ್ಟಿಗೆಗಳಲ್ಲಿ ಸಜ್ಜಾಗಿರಿಸಲಾಗಿದ್ದ ಎರಡು ನವಜಾತ ಶಿಶುಗಳನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.

ಈ ಜಾಲದ ಸದಸ್ಯರು ಈ ಮೊದಲು ಅವಿವಾಹಿತ ತಾಯಂದಿರನ್ನು ತಮ್ಮ ಗುರಿಯಾಗಿಸಿಕೊಂಡಿದ್ದರು ಮತ್ತು ಕೈತುಂಬ ಹಣವನ್ನು ನೀಡಿ ಅವರು ಹೆತ್ತ ಶಿಶುಗಳನ್ನು ಖರೀದಿಸುತ್ತಿದ್ದರು. ಬಳಿಕ ನವಜಾತ ಶಿಶುಗಳ ಹೆತ್ತವರನ್ನು ವಂಚಿಸತೊಡಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X