ನಾಳೆ ಕಾಂಗ್ರೆಸ್ ಪ್ರತಿಭಟನೆ
ಉಡುಪಿ, ನ.26: ಕೇಂದ್ರ ಸರಕಾರ 500, 1000 ರೂ. ನೋಟುಗಳನ್ನು ರದ್ದುಗೊಳಿಸಿ ಜನಸಾಮಾನ್ಯರಿಗೆ ಆಗಿರುವ ತೊಂದರೆಗಳನ್ನು ಕೂಡಲೇ ಸರಿ ಪಡಿಸುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ನ.28ರಂದು ಬೆಳಗ್ಗೆ 10:30ಕ್ಕೆ ಉಡುಪಿ ಸರ್ವಿಸ್ ಬಸ್ ನಿಲ್ದಾಣದ ಬಳಿ ಇರುವ ಗಾಂಧಿ ಪ್ರತಿಮೆಯ ಎದುರು ಆಕ್ರೋಶ್ ದಿವಸ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟನೆ ತಿಳಿಸಿದೆ.
Next Story