ನ.29: ವಿದ್ಯುತ್ ನಿಲುಗಡೆ
ಉಡುಪಿ, ನ.26: ಹೆಬ್ರಿ ಉಪಕೇಂದ್ರ ಸ್ಥಾವರದಿಂದ ಹೊರಡುವ 11 ಕೆವಿ ವಿದ್ಯುತ್ ಮಾರ್ಗದಲ್ಲಿ ನ.29ರಂದು ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಅಂದು ಬೆಳಗ್ಗೆ 9:30ರಿಂದ ಸಂಜೆ 5ರವರೆಗೆ ಹೆಬ್ರಿ, ಶಿವಪುರ, ಖಜಾನೆ, ಮುದ್ರಾಡಿ, ವರಂಗ, ಮುನಿಯಾಲು, ಬಚ್ಚಪ್ಪು, ಕಬ್ಬಿನಾಲೆ, ಸೀತಾನದಿ, ಸೋಮೇಶ್ವರ, ನಾಡ್ಪಾಲು, ಬೆಳಂಜೆ, ಮಡಾಮಕ್ಕಿ, ಕಾಸನಮಕ್ಕಿ, ಕಳ್ತೂರು, ಸಂತೆಕಟ್ಟೆ, ಕರ್ಜೆ, ಮುಂಡಾಡಿಜೆಡ್ಡು, ಕುರ್ಪಾಡಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ವಿದ್ಯುತ್ ನಿಲುಗಡೆ ಮಾಡಲಾಗುವುದು ಎಂದು ಮೆಸ್ಕಾಂ ಪ್ರಕಟನೆ ತಿಳಿಸಿದೆ.
Next Story