Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಟೈಮ್ಸ್ ಡಿಬೇಟ್ ನಲ್ಲಿ ಸ್ವಾಮಿ ವಿರುದ್ಧ...

ಟೈಮ್ಸ್ ಡಿಬೇಟ್ ನಲ್ಲಿ ಸ್ವಾಮಿ ವಿರುದ್ಧ ಮೇಲುಗೈ ಸಾಧಿಸಿದ ಉವೈಸಿ

ವಾರ್ತಾಭಾರತಿವಾರ್ತಾಭಾರತಿ27 Nov 2016 10:03 AM IST
share
ಟೈಮ್ಸ್ ಡಿಬೇಟ್ ನಲ್ಲಿ ಸ್ವಾಮಿ ವಿರುದ್ಧ ಮೇಲುಗೈ ಸಾಧಿಸಿದ ಉವೈಸಿ

ನವದೆಹಲಿ: ಕಟ್ಟಾ ಶತ್ರುಗಳಾದ ಬಿಜೆಪಿ ಸಂಸದ ಸುಬ್ರಹ್ಮಣ್ಯಂ ಸ್ವಾಮಿ ಮತ್ತು ಎಐಎಂಐಎಂ ನಾಯಕ ಅಸಾದುದ್ದೀನ್ ಉವೈಸಿ ಸುಪ್ರೀಂಕೋರ್ಟ್ ಬಾಬರಿ ಮಸೀದಿ ಮತ್ತು ರಾಮ ಜನ್ಮಭೂಮಿಯ ಬಗ್ಗೆ ತೆಗೆದುಕೊಳ್ಳುವ ನಿರ್ಧಾರವನ್ನು ಅಂಗೀಕರಿಸುವುದಾಗಿ ಹೇಳಿದ್ದಾರೆ. ಅಷ್ಟೇ ಅಲ್ಲ, ಹಣಕಾಸು ಸಚಿವ ಅರುಣ್ ಜೇಟ್ಲಿ ಮೇಲೆ ವಿಶ್ವಾಸವಿಲ್ಲ ಎಂದು ಇಬ್ಬರೂ   ಒಪ್ಪಿಕೊಂಡಿದ್ದಾರೆ.ಉವೈಸಿ ಈ ಬಗ್ಗೆ ನೇರವಾಗಿ ಹೇಳಿದರೆ, ಸ್ವಾಮಿ ಆ ಬಗ್ಗೆ ಹೆಚ್ಚು ಮಾತನಾಡುವುದರಿಂದ ತಪ್ಪಿಸಿಕೊಂಡರು. ಇಬ್ಬರೂ ಟೈಮ್ಸ್ ಲಿಟ್‌ಫೆಸ್ಟ್‌ನಲ್ಲಿ ದೆಹಲಿಯಲ್ಲಿ ಮಾತನಾಡುತ್ತಿದ್ದರು. ಟಿವಿ ಪತ್ರಕರ್ತ ರಜ್‌ದೀಪ್ ಸರ್‌ದೇಸಾಯಿ ಈ ಕಾರ್ಯಕ್ರಮವನ್ನು ನಡೆಸಿಕೊಟ್ಟಿದ್ದಾರೆ. “ನ್ಯಾಯಾಲಯದ ನಿರ್ಧಾರವನ್ನು ನಾನು ಅಂಗೀಕರಿಸುವೆ. ನಾನು ಹಿಂಸೆಯನ್ನು ಪ್ರೋತ್ಸಾಹಿಸುವುದಿಲ್ಲ. ನಾನು ಕಾನೂನಿನ ನಿರ್ಧಾರವನ್ನು ಪಾಲಿಸುತ್ತೇನೆ” ಎಂದಿದ್ದಾರೆ. ಉವೈಸಿ ಕೂಡ ಇದೇ ಮಾತನ್ನು ಹೇಳಿದ್ದಾರೆ. “ಸ್ಥಳದಲ್ಲಿ ರಾಮ ಮಂದಿರ ಕಟ್ಟಬೇಕು ಎನ್ನುವ ನಿರ್ಧಾರವನ್ನು ಸುಪ್ರೀಂಕೋರ್ಟ್ ಕೈಗೊಂಡರೆ ಅದನ್ನು ಒಪ್ಪಿಕೊಳ್ಳುವೆ” ಎಂದು ಉವೈಸಿ ಹೇಳಿದ್ದಾರೆ.

ಚರ್ಚೆಯಲ್ಲಿ ಗೆದ್ದವರು ಯಾರೆಂದು ನೋಡಿದರೆ ಉವೈಸಿಗೆ ಹೆಚ್ಚು ಅಂಕಗಳು ಸಿಗಬೇಕು. ಅವರು ಹೆಚ್ಚು ಸಕಾರಣವಾಗಿದ್ದು, ಸ್ವಾಮಿಗಿಂತ ಚೆನ್ನಾಗಿ ತಮ್ಮ ಚರ್ಚೆಗಳಿಗೆ ಸಾಕ್ಷ್ಯಗಳನ್ನು ಒದಗಿಸಿದ್ದಾರೆ. ಗೋಹತ್ಯೆ ನಿಷೇಧ ಮತ್ತು ಏಕರೂಪದ ನಾಗರಿಕ ಸಂಹಿತೆಯನ್ನು ಸಮರ್ಥಿಸಿಕೊಳ್ಳಲು ಸ್ವಾಮಿ ಸಂವಿಧಾನದ ನಿಯಮಗಳ (ಡೈರೆಕ್ಟಿವ್ ಪ್ರಿನ್ಸಿಪಲ್ಸ್ ಅಥವಾ ಡಿಪಿ) ನೆರವು ಪಡೆದುಕೊಂಡರು. ಆದರೆ ಡಿಪಿಗಳು ಕೇವಲ ನಿರ್ದೇಶನಗಳು ಮಾತ್ರವೇ ಆಗಿವೆ ಎಂದು ಉವೈಸಿ ನೆನಪಿಸಿದರು. ಮೂಲಭೂತ ಹಕ್ಕುಗಳು ಹಿರಿತನದಲ್ಲಿ ಡಿಪಿಗಿಂತ ಹೆಚ್ಚಿನದು. ಧರ್ಮದ ಸ್ವಾತಂತ್ರ್ಯ ಮೂಲಭೂತ ಹಕ್ಕು ಎಂದು ಉವೈಸಿ ನೆನಪಿಸಿದರು. ಇದಕ್ಕೆ ಉತ್ತರವಾಗಿ ಸ್ವಾಮಿ ಹಿಂದೂ ನಾಗರಿಕತೆ ಇತರ ಧರ್ಮಗಳನ್ನು ಯಾವಾಗಲೂ ಸ್ವೀಕರಿಸಿದೆ ಎಂದರು. ಭಾರತ ಹೇಗೆ ಯಹೂದಿಗಳು, ಕ್ರಿಶ್ಚಿಯನ್ನರು ಮತ್ತು ಮುಸ್ಲಿಮರನ್ನು ಒಪ್ಪಿಕೊಂಡಿದೆ ಎಂದು ವಿವರಿಸಿದರು. “ಯಹೂದಿಗಳಿಗೆ ಇಲ್ಲಿ ತಮ್ಮ ಸಭಾಮಂದಿರಗಳನ್ನು ಕಟ್ಟಲು ಅವಕಾಶ ನೀಡಲಾಗಿದೆ. ಯಹೂದಿಗಳನ್ನು ಶಿಕ್ಷಿಸದೆ ಇರುವ ದೇಶ ನಮ್ಮದು. ಹಿಂಸಾತ್ಮಕ ಇಸ್ಲಾಂ ಸಮಾಜವನ್ನು ನಾಶ ಮಾಡಿದೆ” ಎಂದು ಸ್ವಾಮಿ ಹೇಳಿದ್ದಾರೆ. ಈ ಸಂದರ್ಭದಲ್ಲಿ ಮಧ್ಯ ಪ್ರವೇಶಿಸಿದ ರಜದೀಪ್ ದೇಸಾಯಿ, ನಾಲ್ಕೈದು ಶತಮಾನಗಳ ಹಿಂದೆ ನಡೆದ ಹಿಂಸೆಗೆ 2016ರಲ್ಲಿ ಸೇಡು ತೀರಿಸಿಕೊಳ್ಳುವುದು ಸರಿಯೆ ಎಂದು ಪ್ರಶ್ನಿಸಿ ಪರೋಕ್ಷವಾಗಿ ಸ್ವಾಮಿ ಕೋಮುವಾದಿ ಎಂದರು. ಆದರೆ ತಾವು ಕೋಮುವಾದಿ ಎಂದು ಸ್ವಾಮಿ ಒಪ್ಪಿಕೊಳ್ಳದೆ ತಮ್ಮ ಜಾತ್ಯತೀತ ಕುಟುಂಬವನ್ನು ಉದಾಹರಿಸಿದರು. “ನನ್ನ ಪತ್ನಿ ಪಾರ್ಸಿ. ಅಳಿಯ ಮುಸ್ಲಿಂ. ನನಗೆ ಯಹೂದಿ ಭಾವ ಮತ್ತು ಕ್ರಿಶ್ಚಿಯನ್ ನಾದಿನಿ ಇದ್ದಾರೆ. ಅವರು ಯಾರೂ ನನ್ನನ್ನು ಕೋಮವಾದಿ ಎಂದಿಲ್ಲ” ಎಂದು ಸ್ವಾಮಿ ಹೇಳಿದರು. ಇದರ ಜೊತೆಗೆ ಅವರು, ಭಾರತ ಹಿಂದೂ ಬಹುಸಂಖ್ಯಾತರ ದೇಶ ಮತ್ತು ಅದೇ ನಂಬಿಕೆ ಕಾನೂನಿಗೆ ನೆರವಾಗುತ್ತದೆ. ಹೀಗಾಗಿ ಜನರಿಗೆ ರಾಮ ಇಲ್ಲಿ ಹುಟ್ಟಿದ್ದಾನೆ ಎನ್ನುವ ನಂಬಿಕೆ ಇದ್ದರೆ ಅದಕ್ಕೆ ಪ್ರಾಮುಖ್ಯತೆ ಕೊಡಬೇಕು ಎಂದರು. ಈ ಬಹುತ್ವವಾದದ ಮೇಲೆಯೇ ತಮಗೆ ಸಮಸ್ಯೆ ಇದೆ ಎಂದು ಉವೈಸಿ ಮಾರುತ್ತರ ನೀಡಿದರು. “ನೆಹರೂ ಕೂಡ ದೊಡ್ಡ ಆತಂಕವೆಂದರೆ ಬಹುತ್ವವಾದ ಎಂದು ಹೇಳಿದ್ದಾರೆ. ನೀವು ಜಾತ್ಯತೀತತೆ ಮತ್ತು ವೈವಿಧ್ಯತೆಯಲ್ಲಿ ನಂಬಿಕೆ ಹೊಂದಿದ್ದಲ್ಲಿ ನಾವು ಆ ಪ್ರಶ್ನೆಯನ್ನು ಕೇಳಿಕೊಳ್ಳಬೇಕು. ಉತ್ತರ ಪ್ರದೇಶದ ಚುನಾವಣೆ ಹಿನ್ನೆಲೆಯಲ್ಲಿಯೇ ಗೋ ಹತ್ಯೆ ಮತ್ತು ಸಮಾನ ನಾಗರಿಕ ಸಂಹಿತೆಯಂಥ ವಿಷಯಗಳು ಮುನ್ನೆಲೆಗೆ ಬರುತ್ತಿವೆ” ಎಂದು ಉವೈಸಿ ಹೇಳಿದರು. ವೈಕಿಲೀಕ್ಸ್ ದಾಖಲೆಗಳನ್ನು ನಂಬುವುದಾದರೆ “ಹಿಂದುತ್ವ ಕೇವಲ ಮತ ಬ್ಯಾಂಕಿಗಾಗಿ” ಎಂದು ಅರುಣ್ ಜೇಟ್ಲಿ ಅವರೇ ಹೇಳಿದ್ದಾರೆ ಎಂದೂ ಉವೈಸಿ ನೆನಪಿಸಿದರು. ಇದಕ್ಕೆ ಉತ್ತರವಾಗಿ ಸ್ವಾಮಿ ತಮ್ಮ ಪಕ್ಷದ ಸಹೋದ್ಯೋಗಿಯನ್ನು ವಿರೋಧಿಸಿದರು. “ಹೌದು, ವೈಕಿಲೀಕ್ಸ್ ಅದನ್ನು ತೋರಿಸಿದೆ” ಎಂದರು.

. @asadowaisi admits that he will accept if the Supreme court takes the decision to build a Ram Temple. #TLFDelhi

— Times Litfest Delhi (@TimesLitFestDel) November 26, 2016

ಕೃಪೆ: http://timesofindia.indiatimes.com/

share
ವಾರ್ತಾಭಾರತಿ
ವಾರ್ತಾಭಾರತಿ
Next Story
X