Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕುವೆಂಪು ಸಾರಿದ ವಿಶ್ವ ಮಾನವ...

ಕುವೆಂಪು ಸಾರಿದ ವಿಶ್ವ ಮಾನವ ಪ್ರಜ್ಞೆಯನ್ನು ಸಂಘಟನೆಗಳು ಎತ್ತಿಹಿಡಿಯಬೇಕಾಗಿದೆ: ಡಾ.ನರೇಂದ್ರ ರೈ ದೇರ್ಲ

ವಾರ್ತಾಭಾರತಿವಾರ್ತಾಭಾರತಿ27 Nov 2016 6:37 PM IST
share
ಕುವೆಂಪು ಸಾರಿದ ವಿಶ್ವ ಮಾನವ ಪ್ರಜ್ಞೆಯನ್ನು ಸಂಘಟನೆಗಳು ಎತ್ತಿಹಿಡಿಯಬೇಕಾಗಿದೆ: ಡಾ.ನರೇಂದ್ರ ರೈ ದೇರ್ಲ

ಮಂಗಳೂರು, ನ.27:ರಾಷ್ಟ್ರಕವಿ ಕುವೆಂಪುರವರು ನಮಗೆ ತೋರಿದ ವಿಶ್ವ ಮಾನವ ಪ್ರಜ್ಞೆಯನ್ನು ಎಲ್ಲಾ ಸಂಘಟನೆಗಳು ಎತ್ತಿಹಿಡಿಯಬೇಕಾಗಿದೆ ಎಂದು ಬೆಳ್ಳಾರೆಯ ಡಾ.ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ.ನರೇಂದ್ರ ರೈ ದೇರ್ಲ ತಿಳಿಸಿದ್ದಾರೆ.

ಕನ್ನಡ ನಾಡು ನುಡಿ ಸೇವೆಯ ಅಂಗವಾಗಿ ಕದ್ರಿ ಹಿಲ್ಸ್ ಲಯನ್ಸ್ ಮತ್ತು ಲಿಯೋ ಕ್ಲಬ್ ಮಂಗಳೂರು ವತಿಯಿಂದ ನಗರದ ಪುರಭವನದಲ್ಲಿ ಇಂದು ಹಮ್ಮಿಕೊಂಡ ಲಯನ್ಸ್ ನುಡಿ ಸಂಭ್ರಮ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡುತ್ತಿದ್ದರು.

ದೇಶ, ಗಡಿಗಳ ಎಲ್ಲೆಯನ್ನು ಮೀರಿದ ಕುವೆಂಪುರವರ ಅನಿಕೇತನದ ಕಲ್ಪನೆಯನ್ನು ನಾವು ಮೈಗೂಡಿಸಿಕೊಳ್ಳಬೇಕು. ಹಣ ಮನುಷ್ಯರ ನಡುವಿನ ಸಂಬಂಧಗಳನ್ನು ಹಾಳುಗೆಡಹುತ್ತಿರುವ ಈ ಸಂದರ್ಭದಲ್ಲಿ ಜನರನ್ನು ಒಂದುಗೂಡಿಸುವ ಚಿಂತನೆ, ಶಿಕ್ಷಣ,ಸಂಸ್ಕೃತಿಗಳನ್ನು ಸಂರಕ್ಷಿಸಬೇಕಾಗಿದೆ. ಎಲ್ಲವನ್ನು ವಿಜ್ಞಾನ, ಲೆಕ್ಕದ ತರ್ಕದ ಆಧಾರದಲ್ಲಿ ನೋಡಬಾರದು. ನಮ್ಮ ಬದುಕು ಇತರರಿಗೆ ಸಹಾಯ ಮಾಡುವ ದಾರಿದೀಪದಂತೆ ಬೆಳಕು ನೀಡಬೇಕಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಜನರ ಬುದ್ಧಿವಂತಿಕೆ ಜಾತಿ, ಮತ, ಧರ್ಮದ ಭೇದವಿಲ್ಲದೆ ಜನರನ್ನು ಒಂದುಗೂಡಿಸುವಂತಾಗಲಿ ಎಂದು ನರೇಂದ್ರ ರೈ ದೇರ್ಲ ಹಾರೈಸಿದರು.

ನಮ್ಮ ದೇಶದ ಗಡಿಯಲ್ಲಿ ಸರ್ಜಿಕಲ್ ದಾಳಿ ನಡೆದಾಗ ದೇಶದಲ್ಲಿ ಯುದ್ಧದ ಬಗ್ಗೆ ಟಿ.ವಿ ಮಾಧ್ಯಮಗಳಲ್ಲಿ ಚರ್ಚೆ ಆರಂಭವಾಗತೊಡಗಿತು. ನಮ್ಮ ದೇಶ ಹಾಗೂ ನೆರೆಯ ಪಾಕಿಸ್ತಾನ ದೇಶದಲ್ಲಿ ಯಾವ ಯಾವ ಶಸ್ತ್ರಾಸ್ತ್ರಗಳು ಎಷ್ಟೆಷ್ಟು ಇವೆ ಎಂಬ ಬಗ್ಗೆ ಚರ್ಚೆ ನಡೆಯತೊಡಗಿತು. ಆದರೆ ನಮ್ಮ ಜನ ಜೀವನಕ್ಕೆ ಆಧಾರವಾದ ನೀರಿನ ಸಂಗ್ರಹ ಎಷ್ಟಿದೆ, ಆಮ್ಲಜನಕ ಎಷ್ಟಿದೆ ಎನ್ನುವ ವಿಷಯಗಳ ಬಗ್ಗೆ ಚರ್ಚೆಗಳು ನಡೆಯಬೇಕಾಗಿರುವುದು ಯುದ್ಧಕ್ಕಾಗಿ ಸಿದ್ಧಮಾಡಿರುವ ಸಾಮಗ್ರಿಗಳಿಂತ ಮುಖ್ಯವಿಷಯ. ಜಗತ್ತು ಕ್ಷೇಮವಾಗಿ ಉಳಿದರೆ ಮಂಗಳೂರು ಕ್ಷೇಮವಾಗಿ ಉಳಿಯಲು ಸಾಧ್ಯ ಎಂದು ನರೇಂದ್ರ ರೈ ತಿಳಿಸಿದರು.

ಕೃಷಿ ಈ ಜಗತ್ತಿನ ಮೊತ್ತ ಮೊದಲ ಸಂಸ್ಕೃತಿ. ಆದರೆ ಈ ಕೃಷಿ ಕ್ಷೇತ್ರಕ್ಕೆ ದೇಶದಲ್ಲಿ ಸಿಗಬೇಕಾದ ಸೂಕ್ತ ಮಾನ್ಯತೆ ದೊರೆಯುತ್ತಿಲ್ಲ. ದೇಶದಲ್ಲಿ ರಾಜಕಾರಣಿಗಳ ಪ್ರತಿಮೆಗಳು ಕಾಣಸಿಗುತ್ತದೆ. ಆದರೆ ದೇಶದಲ್ಲಿ ಎಲ್ಲಿಯೂ ರೈತನೊಬ್ಬನ ಪ್ರತಿಮೆ ನಮಗೆ ಕಾಣಸಿಗುವುದಿಲ್ಲ ಎಂದು ನರೇಂದ್ರ ರೈ ದೇರ್ಲ ತಿಳಿಸಿದರು.

ಸಮಾರಂಭದಲ್ಲಿ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಿದರು. ಕರ್ಣಾಟಕ ಬ್ಯಾಂಕ್‌ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹಾಗೂ ವ್ಯವಸ್ಥಾಪಕ ನಿರ್ದೇಶಕ ಪಿ.ಜಯರಾಮ ಭಟ್ ‘ನುಡಿ ತೇರು’ ವಿಶೇಷ ಸಂಚಿಕೆಯನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ನುಡಿ ಸಂಭ್ರಮ ಚಾಲನಾ ಸಮಿತಿಯ ಅಧ್ಯಕ್ಷ ಪ್ರವೀಣ್ ಶೆಟ್ಟಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಸಂಚಾಲಕ ಎನ್.ಟಿ.ರಾಜ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಲಯನ್ಸ್ ಗವರ್ನರ್ ಅರುಣ್ ಶೆಟ್ಟಿ, ಡಿ.ಎಂ.ರವಿಕುಮಾರ್, ಕೇಶವ ಪ್ರಭು, ಶ್ರೀಧರ ಬಿ.ಮೊದಲಾದವರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಕಲಕ ಪ್ರಶಸ್ತಿ ಪುರಸ್ಕೃತ ಯೋಗೀಶ್ ಶರ್ಮರನ್ನು ಹಾಗೂ ಕಲಾವಿದೆ ಶಬರಿ ವೈ. ಗಾಣಿಗರನ್ನು ಅಭಿನಂದಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X