Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೇಂದ್ರದ ವಿರುದ್ಧ ಬೀದಿ ಬದಿ...

ಕೇಂದ್ರದ ವಿರುದ್ಧ ಬೀದಿ ಬದಿ ವ್ಯಾಪಾರಸ್ಥರ ಆಕ್ರೋಶ

ಶಿಕಾರಿಪುರ: 64ನೆ ಮಾಸಿಕ ಸಭೆ

ವಾರ್ತಾಭಾರತಿವಾರ್ತಾಭಾರತಿ27 Nov 2016 10:56 PM IST
share
ಕೇಂದ್ರದ ವಿರುದ್ಧ ಬೀದಿ ಬದಿ ವ್ಯಾಪಾರಸ್ಥರ ಆಕ್ರೋಶ

ಬಂದ್‌ಗೆ ಬೆಂಬಲ, ನೋಟು ರದ್ದತಿ ಹಿಂಪಡೆಯಲು ಒತ್ತಾಯ
ಶಿಕಾರಿಪುರ, ನ.27: 500 ಮತ್ತು 1,000 ಮುಖಬೆಲೆಯ ನೋಟು ನಿಷೇಧ ನೇರವಾಗಿ ಸಾಮಾನ್ಯ ಜನತೆ, ವರ್ತಕರು, ಬೀದಿ ಬದಿ ವ್ಯಾಪಾರಿಗಳಿಗೆ ಬಹು ದೊಡ್ಡ ನಷ್ಟ ಉಂಟುಮಾಡಿದ್ದು, ಈ ಕೂಡಲೇ ಕೇಂದ್ರದ ನೋಟು ರದ್ದು ವಾಪಸು ಪಡೆಯಬೇಕೆಂದು ರವಿವಾರ ಪಟ್ಟಣದ ಶ್ರೀ ವಿಜಯಲಕ್ಷ್ಮೀ ಹೋಟೆಲ್ ಸಭಾಂಗಣದಲ್ಲಿ ನಡೆದ ಬೀದಿ ಬದಿ ವ್ಯಾಪಾರಸ್ಥರ ಸಂಘದ ಸಭೆಯಲ್ಲಿ ಒಕ್ಕೊರಲಿನಿಂದ ಆಗ್ರಹಿಸಲಾಯಿತು.
ಸಂಘದ ಅಧ್ಯಕ್ಷ ಹಾಗೂ ಪುರಸಭಾ ಸದಸ್ಯ ಮಹೇಶ್ ಹುಲ್ಮಾರ್ ಅಧ್ಯಕ್ಷತೆಯಲ್ಲಿ ನಡೆದ 64ನೆ ಮಾಸಿಕ ಸಭೆಯಲ್ಲಿ ಪಾಲ್ಗೊಂಡಿದ್ದ ನೂರಾರು ಸದಸ್ಯರು 500 ಮತ್ತು 1,000 ರೂ. ಮುಖಬೆಲೆಯ ನೋಟು ರದ್ದುಗೊಳಿಸಿದ ಕೇಂದ್ರದ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿದರು.
ಸಭೆಯಲ್ಲಿದ್ದ ಪಾನಿಪೂರಿ ವ್ಯಾಪಾರಿ ಕೃಷ್ಣಪ್ಪ ಮಾತನಾಡಿ, ಕೇಂದ್ರ ಸರಕಾರ 500 ಮತ್ತು 1,000 ರೂ. ಮುಖಬೆಲೆಯ ನೋಟುಗಳನ್ನು ನಿಷೇಧಿಸಿದ ನಂತರದಲ್ಲಿ ವ್ಯಾಪಾರದಲ್ಲಿ ಗಣನೀಯ ಕುಸಿತವಾಗಿದೆ. ನಿತ್ಯ ಬಿಡಿಗಾಸು ಮಾತ್ರ ವ್ಯವಹರಿಸುವ ಬೀದಿ ಬದಿ ವ್ಯಾಪಾರಸ್ಥರು ಚಿಲ್ಲರೆಯ ದೊಡ್ಡ ಸಮಸ್ಯೆಯಿಂದಾಗಿ ವ್ಯಾಪಾರ ಅತ್ಯಂತ ಕಡಿಮೆಯಾಗಿದೆ. ಅಲ್ಲದೆ, ನಿತ್ಯ ಬೆಳಗ್ಗೆ ಬ್ಯಾಂಕ್, ಅಂಚೆ ಕಚೇರಿಗೆ ಅಲೆದಾಡುವುದು ಸಾಮಾನ್ಯವಾಗಿದೆ ಎಂದು ಅಳಲು ತೋಡಿಕೊಂಡ ಅವರು, ಇದರಿಂದ ಸಣ್ಣ ವ್ಯಾಪಾರಸ್ಥರಿಗೆ ಕೇಂದ್ರ ದೊಡ್ಡ ಪೆಟ್ಟು ನೀಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅಧ್ಯಕ್ಷತೆ ವಹಿಸಿದ್ದ ಮಹೇಶ ಹುಲ್ಮಾರ್, ಬೀದಿ ಬದಿ ವ್ಯಾಪಾರಸ್ಥರ ಸಂಘ ಆರಂಭವಾಗಿ 5 ವರ್ಷಗಳು ಕಳೆದಿದೆ. ಬೀದಿ ಬದಿಯ ವ್ಯಾಪಾರಿಗಳ ನಿತ್ಯ ಆರ್ಥಿಕ ವಹಿವಾಟಿಗೆ ಅನುಕೂಲ ಕಲ್ಪಿಸುವ ದಿಸೆಯಲ್ಲಿ 4,800 ರೂ. ಬಂಡವಾಳದಿಂದ ಆರಂಭವಾದ ಸಂಘ ಇದೀಗ 3.28 ಲಕ್ಷ ರೂ. ಬಂಡವಾಳ ಹೊಂದಿದೆ. ಅತಿ ಕಡಿಮೆ ಬಡ್ಡಿ ದರದಲ್ಲಿ ವ್ಯಾಪಾರಿಗಳ ಅನುಕೂಲಕ್ಕಾಗಿ ನೀಡಲಾಗುವ ಬಂಡವಾಳ ಈ ಬಾರಿ 500 ಹಾಗೂ 1,000 ರೂ. ಸಮಸ್ಯೆಯಿಂದಾಗಿ ಸಭೆಯನ್ನು ಮುಂದೂಡುವುದು ಅನಿವಾರ್ಯವಾಗಿದೆ ಎಂದು ತಿಳಿಸಿದರು. ಬೀದಿ ಬದಿ ವ್ಯಾಪಾರಿ ಗಳು ಚಿಲ್ಲರೆಯ ಸಮಸ್ಯೆ ಯಿಂದಾಗಿ ಗ್ರಾಹಕರನ್ನು ಕಳೆದುಕೊಳ್ಳುವಂತಾಗಿದೆ. ಕೇಂದ್ರದ ನಿರ್ಧಾರ ಕೇವಲ ಬಂಡವಾಳಶಾಹಿಗಳು, ರಾಜಕಾರಣಿಗಳು, ಕಾಳಧನಿಕರ ಪರವಾಗಿದೆ ಎಂದು ಆರೋಪಿಸಿದರು.
ಇದುವರೆಗೂ ಚಿಲ್ಲರೆ ಾಗೂ ನೋಟು ಬದಲಾವಣೆಗಾಗಿ ಕೇವಲ ಮಧ್ಯಮ, ಕೆಳ ವರ್ಗದವರು ಮಾತ್ರ ಸರತಿಯಲ್ಲಿ ಗೋಚರಿಸುತ್ತಿದ್ದರು. ಶ್ರೀಮಂತ ವರ್ಗ, ರಾಜಕಾರಣಿಗಳು, ಕಾಳಧನಿಕರು, ಕೋಟಿ ಕೋಟಿ ರೂ. ಕೊಳ್ಳೆ ಹೊಡೆದವರಿಗೆ ನೋಟು ಅಮಾನ್ಯದಿಂದ ಯಾವುದೇ ತೊಂದರೆಯಾಗಿಲ್ಲ ಎಂದು ಕಿಡಿಕಾರಿದರು.
ರಾಜ್ಯ ಸರಕಾರ ಸಣ್ಣ ವ್ಯಾಪಾರಿಗಳಿಗೆ ಶೂನ್ಯ ಬಡ್ಡಿ ದರದ ಸಾಲ ಮತ್ತಿತರ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಪ್ರತಿಯೊಬ್ಬ ಸದಸ್ಯರೂ ತಮ್ಮ ಗುರುತಿನ ಪತ್ರ ಪಡೆದು ಸೌಲಭ್ಯ ಸದ್ಬಳಕೆ ಮಾಡಿಕೊಳ್ಳಬೇಕೆಂದು ಸೂಚಿಸಿದರು.
 ರದ್ದು ಮಾಡಲಾಗಿರುವ ನೋಟುಗಳ ವಾಪಸಾತಿಗೆ ಆಗ್ರಹಿಸಿ ಸೋಮವಾರದ ಬಂದ್ ಕರೆಗೆ ಬೀದಿ ಬದಿ ವ್ಯಾಪಾರಸ್ಥರು ಸಂಪೂರ್ಣ ಬೆಂಬಲ ವ್ಯಕ್ತಪಡಿಸಲಿದ್ದಾರೆ.ಜನಸಾಮಾನ್ಯರ ಅಳಲಿಗೆ ಕೇಂದ್ರ ಸರಕಾರದ ಕಣ್ಣು ತೆರೆಸಬೇಕಾಗಿದೆ ಎಂದು ತಿಳಿಸಿದರು. ಸಭೆಯಲ್ಲಿದ್ದ ನೂರಾರು ಸದಸ್ಯರು ಬಂದ್‌ಗೆ ಬೆಂಬಲ ವ್ಯಕ್ತಪಡಿಸಿ ಘೆಷಣೆ ಕೂಗಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಕರೀಂಸಾಬ್, ಕಿರಣ್, ಕಾರ್ಯದರ್ಶಿ ಕೃಷ್ಣಪ್ಪ, ಕಾಟನೂರು ರವಿ, ದುರ್ಗಮ್ಮ, ಶೋಭಾ, ಗೀತಾಬಾಯಿ, ವೀಣಾ, ಆಯೇಷಾಬಾನು, ವೀರಮ್ಮ, ಭಾಗ್ಯಮ್ಮ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X