Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಜರಂಗಿಗಳು ನನ್ನ ಮೇಲೆ ಅತ್ಯಾಚಾರವೆಸಗಿದ...

ಬಜರಂಗಿಗಳು ನನ್ನ ಮೇಲೆ ಅತ್ಯಾಚಾರವೆಸಗಿದ ಬಳಿಕ ಥಳಿಸಿ ನೇಣು ಹಾಕಲು ಪ್ರಯತ್ನಿಸಿದ್ದರು

ಬುಲಂದಶಹರ್ ಮಹಿಳೆಯ ಅಳಲು

ವಾರ್ತಾಭಾರತಿವಾರ್ತಾಭಾರತಿ27 Nov 2016 11:46 PM IST
share

ಮೀರತ್,ನ.27: ಬುಲಂದಶಹರ್ ಜಿಲ್ಲೆಯ ಖುರ್ಜಾ ಎಂಬಲ್ಲಿ ಕಳೆದ ವಾರ ಬಜರಂಗಿಗಳ ಗುಂಪೊಂದು ಮುಸ್ಲಿಮ್ ಜೋಡಿಯೊಂದನ್ನು ಹಿಗ್ಗಾಮುಗ್ಗಾ ಥಳಿಸಿತ್ತು. ಮಹಿಳೆಯನ್ನು ಹಿಂದೂ ಎಂದು ಭಾವಿಸಿದ್ದ ಅವರು ಆಕೆ ಮುಸ್ಲಿಮ್ ಎನ್ನುವುದು ಗೊತ್ತಾದ ಬಳಿಕವೂ ಥಳಿತವನ್ನು ನಿಲ್ಲಿಸಿರಲಿಲ್ಲ. ಮರ್ಯಾದೆಗಂಜಿ ಈ ವಿಷಯದ ಬಗ್ಗೆ ಕೆಲವು ದಿನಗಳವರೆಗೆ ವೌನವಾಗಿದ್ದ ಮಹಿಳೆ ಕೊನೆಗೂ ನ್ಯಾಯಾಲಯದಲ್ಲಿ ತನ್ನ ಕರುಣಾಜನಕ ಕಥೆಯನ್ನು ಹೇಳಿಕೊಂಡಿದ್ದಾಳೆ. ಬಜರಂಗಿಗಳ ಗುಂಪು ತನ್ನ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿತ್ತು ಎಂದಾಕೆ ನ್ಯಾಯಾಲಯದಲ್ಲಿ ತನ್ನ ಅಳಲು ತೋಡಿಕೊಂಡಿದ್ದಾಳೆ. ಇಷ್ಟಾದ ಬಳಿಕ ಪೊಲೀಸರು ಈ ಮೊದಲು ದಾಖಲಿಸಿಕೊಂಡಿದ್ದ ಎಫ್‌ಐಆರ್‌ನ್ನು ಬದಲಿಸಿ ಸಾಮೂಹಿಕ ಅತ್ಯಾಚಾರದ ಆರೋಪವನ್ನು ಸೇರಿಸಿದ್ದಾರೆ.

 
ನಿನ್ನೆ ಸ್ಥಳೀಯ ಹಿಂದಿ ಟಿವಿ ಚಾನೆಲ್‌ವೊಂದಕ್ಕೆ ನೀಡಿದ ಸಂದರ್ಶನದಲ್ಲಿ, ಬಜರಂಗಿಗಳು ತನ್ನ ಮೇಲೆ ಅತ್ಯಾಚಾರವನ್ನಷ್ಟೇ ನಡೆಸಿದ್ದಲ್ಲ, ತನ್ನನ್ನು ನೇಣು ಬಿಗಿದು ಕೊಲ್ಲಲೂ ಯತ್ನಿಸಿದ್ದರು ಎಂದು ಮಹಿಳೆ ತಿಳಿಸಿದಳು. ‘‘ನಾನು ಮತ್ತು ನನ್ನ ಸ್ನೇಹಿತ ಪಿಝ್ಝಿ ತಿನ್ನಲೆಂದು ಹೋಟೆಲ್‌ಗೆ ಹೋಗಿದ್ದೆವು. ಏಕಾಏಕಿ ನಾವು ಕುಳಿತಿದ್ದ ಕೋಣೆಗೆ ನುಗ್ಗಿದ ತಂಡವೊಂದು ಇಲ್ಲೇಕೆ ಕುಳಿತಿದ್ದೀರಿ ಎಂದು ಪ್ರಶ್ನಿಸಿತ್ತು. ಉತ್ತರಿಸುವ ಮೊದಲೇ ಅವರು ನಮ್ಮಿಬ್ಬರನ್ನೂ ಥಳಿಸಲು ಆರಂಭಿಸಿದ್ದರು. ನಾನು ಮುಸ್ಲಿಮ್ ಎಂದು ಗೊತ್ತಾದ ಬಳಿಕವೂ ಅವರು ಹೊಡೆಯುವುದನ್ನು ನಿಲ್ಲಿಸಿರಲಿಲ್ಲ. ಕೋಮು ನಿಂದನೆಗಳನ್ನು ಮಾಡಿದ ಅವರು ನನ್ನ ಸ್ನೇಹಿತನನ್ನು ಅಲ್ಲಿಂದ ಹೊರಗೆಳೆದೊಯ್ದ ಬಳಿಕ ನನ್ನನ್ನು ಇನ್ನೊಂದು ಕೋಣೆಗೆ ಹೊತ್ತೊಯ್ದಿದ್ದರು. ಅಲ್ಲಿ ಐವರು ಒಬ್ಬರಾದ ಬಳಿಕ ಒಬ್ಬರಂತೆ ನನ್ನ ಮೇಲೆ ಅತ್ಯಾಚಾರ ನಡೆಸಿದ್ದರು ’’ಎಂದು ಆಕೆ ವಿವರಿಸಿದಳು.
ಅವರು ತಾವು ಬಜರಂಗ ದಳ ಕಾರ್ಯಕರ್ತರೆಂದು ಹೇಳಿಕೊಂಡಿದ್ದರು. ತಾವು ಬಯಸಿದ್ದನ್ನು ಮಾಡಬಹುದು, ತಮ್ಮನ್ನು ತಡೆಯುವವರು ಯಾರೂ ಇಲ್ಲ ಎಂದೂ ಹೇಳಿಕೊಂಡಿದ್ದರು ಎಂದಾಕೆ ಹೇಳಿದಳು.
ಈ ಘಟನೆಯ ವೀಡಿಯೊ ತುಣುಕೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ‘‘ನೀವು ಈ ಹಿಂದೂ ಬಡಾವಣೆಯನ್ನು ಹೊಲಸೆಬ್ಬಿಸುತ್ತಿದ್ದೀರಿ ’’ ಎಂದು ಈ ಗುಂಪು ಜೋಡಿಯನ್ನು ಉದ್ದೇಶಿಸಿ ಹೇಳಿದ್ದು ವೀಡಿಯೊದಲ್ಲಿ ಸ್ಪಷ್ಟವಾಗಿ ದಾಖಲಾಗಿದೆ.
ಘಟನೆಯ ಬಳಿಕ ಮನೆಗೆ ಬಂದ ಮಹಿಳೆ ನಮಗೆ ಪ್ರತಿಯೊಂದನ್ನೂ ತಿಳಿಸಿದ್ದಳು. ಸಾಮೂಹಿಕ ಅತ್ಯಾಚಾರವೆಸಗಿದ ಬಳಿಕ ಅವರು ಆಕೆಯನ್ನು ಮತ್ತಷ್ಟು ಥಳಿಸಿದ್ದರು. ಅದೃಷ್ಟಕ್ಕೆ ಈಗ ವೈರಲ್ ಆಗಿರುವ ವೀಡಿಯೊದಲ್ಲಿ ಆಕೆ ಮುಖವನ್ನು ಮುಚ್ಚಿಕೊಂಡಿದ್ದಳು. ಅವಳೀಗ ಕೋರುತ್ತಿರುವುದು ನ್ಯಾಯ ಮಾತ್ರ ಎಂದು ನೆರೆಮನೆಯ ಮಹಿಳೆಯೋರ್ವಳು ತಿಳಿಸಿದಳು.

ಘಟನೆಯ ಕುರಿತು ವರದಿಯನ್ನು ಸಲ್ಲಿಸುವಂತೆ ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗವು ನಿರ್ದೇಶ ನೀಡಿದ ಬಳಿಕ ಜಿಲ್ಲಾಡಳಿತವು ಚುರುಕಾಗಿದೆ.
ನಾವು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಈಗಾಗಲೇ ಐವರನ್ನು ನಾವು ಬಂಧಿಸಿದ್ದು, ಇನ್ನುಳಿದವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ. ನ್ಯಾಯಾಲಯದಲ್ಲಿ ಮಹಿಳೆಯ ಹೇಳಿಕೆಯ ಬಳಿಕ ಆಕೆಯನ್ನು ವೈದ್ಯಕೀಯ ತಪಾಸಣೆ ಗೊಳಪಡಿಸಿದ್ದು,ವರದಿಗಾಗಿ ಕಾಯುತ್ತಿದ್ದೇವೆ ಎಂದು ಬುಲಂದಶಹರ್ ಜಿಲ್ಲಾಧಿಕಾರಿ ಎ.ಕೆ.ಸಿಂಗ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X