Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕ್ಯೂಬಾದಲ್ಲಿ 9 ದಿನಗಳ ಶೋಕಾಚರಣೆ

ಕ್ಯೂಬಾದಲ್ಲಿ 9 ದಿನಗಳ ಶೋಕಾಚರಣೆ

ವಾರ್ತಾಭಾರತಿವಾರ್ತಾಭಾರತಿ28 Nov 2016 12:07 AM IST
share

ಹವಾನಾ,ನ.27: ಕ್ರಾಂತಿಕಾರಿ ನಾಯಕ ಫಿಡೆಲ್‌ಕ್ಯಾಸ್ಟ್ರೊ ಅವರ ನಿಧನದ ಹಿನ್ನೆಲೆಯಲ್ಲಿ ಕ್ಯೂಬಾ ಒಂಬತ್ತು ದಿನಗಳ ಶೋಕಾಚರಣೆಯನ್ನು ಘೋಷಿಸಿದೆ. ಫಿಡೆಲ್‌ಕ್ಯಾಸ್ಟ್ರೊ ಶನಿವಾರ ರಾತ್ರಿ 10:29ಕ್ಕೆ ನಿಧನಹೊಂದಿದರೆಂದು ಅವರ ಉತ್ತರಾಧಿಕಾರಿ ಹಾಗೂ ಸಹೋದರ ರವುಲ್ ಕ್ಯಾಸ್ಟ್ರೋ ಪ್ರಕಟಿಸಿದ ಬಳಿಕ ರಾಷ್ಟ್ರಾದ್ಯಂತ ಮದ್ಯ ಮಾರಾಟವನ್ನು ಸ್ಥಗಿತಗೊಳಿಸಲಾಗಿದ್ದು, ಎಲ್ಲೆಡೆಯೂ ರಾಷ್ಟ್ರಧ್ವಜವನ್ನು ಅರ್ಧಮಟ್ಟಕ್ಕೆ ಇಳಿಸಲಾಗಿದೆ. ಕ್ಯಾಸ್ಟ್ರೊ ಅವರಿಗೆ ಶ್ರದ್ಧಾಂಜಲಿ ಅರ್ಪಿಸಲು ಹವಾನಾದ ಪ್ರಸಿದ್ಧ ಕ್ರಾಂತಿಕಾರಿ ಚೌಕದಲ್ಲಿ ಬೃಹತ್ ರ್ಯಾಲಿಗಳನ್ನು ಆಯೋಜಿಸಲಾಗಿದೆ. 1.10 ಕೋಟಿ ಜನಸಂಖ್ಯೆಯ ಈ ದ್ವೀಪರಾಷ್ಟ್ರದಲ್ಲಿ ರವಿವಾರದ ಎಲ್ಲಾ ದಿನಪತ್ರಿಕೆಗಳು ಕಪ್ಪು ಬಣ್ಣದಲ್ಲಿಯೇ ಮುದ್ರಿತಗೊಂಡವು.

ಕ್ಯಾಸ್ಟ್ರೊ ವಿದ್ಯಾಭ್ಯಾಸ ಮಾಡಿದ್ದ ಹವಾನ ವಿವಿಯಲ್ಲಿ ನೂರಾರು ಶೋಕತಪ್ತ ವಿದ್ಯಾರ್ಥಿಗಳು ರಾಷ್ಟ್ರಧ್ವಜವನ್ನು ಹಿಡಿದು ‘ನಾನು ಫಿಡೆಲ್’ ಎಂದು ಘೋಷಣೆಗಳನ್ನು ಕೂಗುತ್ತಾ ಅಗಲಿದ ನಾಯಕನಿಗೆ ಶ್ರದ್ಧಾಂಜಲಿ ಅರ್ಪಿಸಿದರು.

ಶನಿವಾರದಂದು ಸೇನಾಪಡೆ ಹಾಗೂ ಸರಕಾರದ ಸಕಲ ಗೌರವಗಳೊಂದಿಗೆ ಕ್ಯಾಸ್ಟ್ರೊ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ನಡೆಯಲಿದೆ. ಆನಂತರ ಅವರ ಚಿತಾಭಸ್ಮವನ್ನು ಕ್ಯೂಬಾದ್ಯಂತ ಕೊಂಡೊಯ್ಯಲಾಗುವುದು.

ಡಿಸೆಂಬರ್ 4ರಂದು ಹವಾನಾದ ಕ್ರಾಂತಿಕಾರಿ ಚೌಕದಲ್ಲಿ ನಡೆಯಲಿರುವ ಶ್ರದ್ಧಾಂಜಲಿ ಸಭೆಯಲ್ಲಿ ದೇಶವಿದೇಶಗಳ ಗಣ್ಯರು ಪಾಲ್ಗೊಳ್ಳ್ಳಲಿದ್ದಾರೆಂದು ರಾಜತಾಂತ್ರಿಕ ಮೂಲಗಳು ತಿಳಿಸಿವೆ. ರಾಜಕೀಯದ ಬಳಿಕ ಕ್ಯಾಸ್ಟ್ರೊ ಅತಿ ಹೆಚ್ಚು ಪ್ರೀತಿಸುತ್ತಿದ್ದ ಬೇಸ್‌ಬಾಲ್ ಕ್ರೀಡಾಕೂಟಗಳನ್ನು ಶೋಕಾಚರಣೆಯ ಒಂಬತ್ತು ದಿನಗಳ ಕಾಲ ರದ್ದುಪಡಿಸಲಾಗಿದೆ.

ಕ್ಯೂಬಾದ ಸರಕಾರಿ ಟಿವಿ, ವಿದ್ಯಾರ್ಥಿ ಸಂಘಗಳು ಹಾಗೂ ಮಹಿಳಾ ಒಕ್ಕೂಟಗಳು ಫಿಡೆಲ್ ಕ್ಯಾಸ್ಟ್ರೊ ನಿಧನದ ಶೋಕಾರ್ಥವಾಗಿ ಸಣ್ಣಪುಟ್ಟ ರ್ಯಾಲಿಗಳನ್ನು ಆಯೋಜಿಸಿವೆ ಹಾಗೂ ಕಮ್ಯೂನಿಸ್ಟ್ ಕ್ರಾಂತಿಗೆ ತಮ್ಮ ಬೆಂಬಲದ ಪ್ರತಿಜ್ಞೆ ಮಾಡಲಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X